Homeಕರ್ನಾಟಕಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

ಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಲಯಗಳಿಗೆ 2021-2022ನೇ ಸಾಲಿನಲ್ಲಿ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲಾ ವಸತಿ ನಿಯಲದ ವಿದ್ಯಾರ್ಥಿಗಳು (ಪಿಜಿ, ಪಿಎಚ್‌ಡಿ) ವಿವಿಯ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಯಲಗಳಲ್ಲಿ ವಾಸವಿರುವ ಎಲ್ಲಾ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಸಲು ಟೆಂಡರ್ ಕರೆಯಲಾಗಿತ್ತು. ಇದರಂತೆ 2022 ಫೆಬ್ರವರಿ 3 ರಂದು ನಡೆದ ತಾಂತ್ರಿಕ ಬಿಡ್‌ನಲ್ಲಿ ಎಲ್‌.ಆನಂದ್‌ ರೆಡ್ಡಿ (ಎಸ್‌.ವಿ.ಎಲ್‌. ಟ್ರೇಡಿಂಡ್‌ ಕಾರ್ಪೋರೇಷನ್‌, ಎಚ್‌ಬಿಆರ್‌ ಲೇಔಟ್‌, ಬೆಂಗಳೂರು) ಆಯ್ಕೆಯಾಗಿದ್ದರು. ಇವರಿಂದ ಹಾಸಿಗೆ ಮತ್ತು ತಲೆದಿಂಬುಗಳನ್ನು ಖರೀದಿಸಲಾಗಿದೆ. ಆದರೆ ಅವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಒಟ್ಟು 9 ವಿದ್ಯಾರ್ಥಿ ನಿಲಯಗಳಿಗೆ 1,848 ಹಾಸಿಗೆ, 2,273 ತಲೆದಿಂಬುಗಳನ್ನು ಖರೀದಿಸಲಾಗಿದೆ. ಇದರ ಒಟ್ಟು ಹಣದ ಮೊತ್ತ 1,23,80,650 ರೂಪಾಯಿ ಆಗಿದೆ. ಪ್ರತಿ ಹಾಸಿಗೆಗೆ 5,900 ರೂ. ಮತ್ತು ಪ್ರತಿ ತಲೆದಿಂಬಿಗೆ 650 ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ ಪ್ರಸ್ತುತ ವಿದ್ಯಾರ್ಥಿಗಳಿಗೆ ಪೂರೈಸಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿವೆ. ಪೂರೈಕೆ ಮಾಡಲಾಗಿರುವ ಹಾಸಿಗೆಯ ಮೇಲೆ ಆ ಕಂಪನಿಯ ಯಾವುದೇ ಲೇಬಲ್ ಅಥವಾ ಯಾವುದೇ ಹೆಸರಿನ ಬ್ರಾಂಡ್ ನೇಮ್ ಇರುವುದಿಲ್ಲ. ಇದು ವಿದ್ಯಾರ್ಥಿಗಳಿಗೆ ಅನುಮಾನವನ್ನು ಸೃಷ್ಟಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈಗ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಬೆಲೆ ಮಾರುಕಟ್ಟೆಯಲ್ಲಿ 5900 ರೂ.ಗಿಂತಲೂ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿವೆ ಎಂದು ತಿಳಿದು ಬರುತ್ತಿದೆ. ಹಲವು ಅಂಗಡಿ ಮಾಲೀಕರ ಜೊತೆಗೆ ವಿಚಾರಿಸಲಾಗಿದೆ, ಅಂತರ್ಜಾಲದಲ್ಲಿ ಕ್ರಾಸ್‌ ಚೆಕ್ ಕೂಡ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಕಳಪೆ ಮಟ್ಟದಿಂದ ಕೂಡಿದ್ದು ಇದರ ಖರೀದಿಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಿರುವಂತಹ ತಲೆದಿಂಬು ಮತ್ತು ಹಾಸಿಗೆಗಳು ಹರಿದು ಹೋಗಿವೆ, ಬಳಸಲು ಯೋಗ್ಯಸ್ಥಿತಿಯಲ್ಲಿ ಇರುವುದಿಲ್ಲ. ಈ ಹಾಸಿಗೆ ಮತ್ತು ತಲೆದಿಂಬುಗಳನ್ನು ಬಳಸಿ ಅನೇಕ ಆರೋಗ್ಯದ ಸಮಸ್ಯೆಗಳು ಕೂಡ ಉದ್ಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿ, ಅಕ್ರಮವೆಸಗಿರುವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಆಗಿನ ನಿರ್ದೇಶಕರು (ಸಿ.ಡಿ.ವೆಂಕಟೇಶ್‌ ಮತ್ತು ಇದಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯದಲ್ಲಿನ ಅಧಿಕಾರಿ ವರ್ಗದವರು), ಹಾಸಿಗೆ ಮತ್ತು ತಲೆದಿಂಬುಗಳ ಪರಿಶೀಲನೆ ವರದಿಯನ್ನು ನೀಡಿದ ಡಾ.ಹನುಮಂತನಾಯ್ಕ ಹೆಚ್.ಎಸ್., ವೇಣುಗೋಪಾಲ್ ಎಂ, ನೇಮ್ ಬ್ರಾಂಡ್ ನೀಡದೆ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಕೆ ಮಾಡಿದಂತಹ ಕಂಪನಿ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಇವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಮನವಿ ಪತ್ರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...