Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

ಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

- Advertisement -
- Advertisement -

ಅಕ್ರಮ ಯಹೂದಿ ವಸಾಹತುಗಾರರ ಹಿಂಸಾಚಾರಕ್ಕೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಅನೇಕ ಪ್ಯಾಲೆಸ್ತೀನಿಯನ್ ಗ್ರಾಮಗಳು ಶುಕ್ರವಾರ ಗುರಿಯಾಗಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ. ಪಶ್ಚಿಮ ದಂಡೆಯ ಹೊರಠಾಣೆ ಬಳಿ ಯಹೂದಿ ವಸಾಹತುಗಾರನನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ನಬುಲಸ್ ನಗರದ ಪಕ್ಕದಲ್ಲಿರುವ ಪ್ಯಾಲೇಸ್ಟಿನಿಯನ್ ಗ್ರಾಮಗಳಿಗೆ ಪ್ರವೇಶಿಸಿದ ಯಹೂದಿ ವಸಾಹತುಗಾರರು ಮನೆಗಳು, ಕಾರುಗಳು ಇತ್ಯಾದಿಗಳನ್ನು ನಾಶಪಡಿಸಿ, ಜನರಿಗೆ ಥಳಿಸಿದರು ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಘಟನೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಇವುಗಳಲ್ಲಿ ನಿವಾಸಿಗಳು ಮತ್ತು ಶಸ್ತ್ರಸಜ್ಜಿತ ಇಸ್ರೇಲಿ ವಸಾಹತುಗಾರರ ನಡುವಿನ ದಾಳಿಗಳು ಮತ್ತು ಘರ್ಷಣೆಯ ಸಮಯದಲ್ಲಿ ಹಲ್ಲೆಗೊಳಗಾಗಿರುವ ಬಲಿಪಶುಗಳನ್ನು ಕಾಣಬಹುದಾಗಿದೆ. ದಾಳಿಕೋರರು ತಮ್ಮ ವಿರುದ್ಧ ಬಂದೂಕುಗಳನ್ನು ಬಳಸಿ, ನಿವಾಸಿಯನ್ನು ಅಪಹರಿಸಲು ಪ್ರಯತ್ನಿಸಿದರು ಎಂದು ಪ್ಯಾಲೆಸ್ತೀನಿಯನ್ನರು ಆರೋಪಿಸಿದ್ದಾರೆ.

ಗುರುವಾರದಂದು, ಪ್ಯಾಲೆಸ್ತೀನಿಯನ್‌‌ ಬಂದೂಕುದಾರಿಗಳು ಯಹೂದಿ ವಸಾಹತುಗಾರನ ಕಾರಿನ ಮೇಲೆ ಗುಂಡು ಹಾರಿಸಿ ಕೊಂದುಹಾಕಿ ಅವರ ಸಹಚರರನ್ನು ಗಾಯಗೊಳಿಸಿದ್ದರು ಎಂದು ವರದಿಯಾಗಿತ್ತು.

ಈ ಕೊಲೆಯಿಂದಾಗಿ ಪ್ಯಾಲೆಸ್ತೀನಿಯನ್ ನಿವಾಸಿಗಳು ಮತ್ತು ಇಸ್ರೇಲಿ ವಸಾಹತುಗಾರರ ನಡುವಿನ ಹಿಂಸಾಚಾರ ಮತ್ತು ಸಂಘರ್ಷವನ್ನು ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಗುರುವಾರದ ಬಂದೂಕುಧಾರಿಗಳನ್ನು ಪತ್ತೆ ಮಾಡುವುದಾಗಿ ಇಸ್ರೇಲ್ ಆಡಳಿತ ಹೇಳಿದ್ದು, ಘಟನೆ ನಡೆದ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

ರಾತ್ರಿಯ ದಾಳಿಯಲ್ಲಿ ಸೇನೆಯು ಕನಿಷ್ಠ ಮೂವರನ್ನು ಬಂಧಿಸಿದೆ ಎಂದು ಪ್ಯಾಲೆಸ್ತೀನಿಯನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಆಕ್ರಮಿತ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೇಂನಲ್ಲಿ ಇತ್ತೀಚೆಗೆ ಹಿಂಸಾಚಾರ ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಇತ್ತಿಚೆಗೆ ಇಲ್ಲಿ ಪ್ಯಾಲೆಸ್ತೀನಿಯನ್‌‌ ಬಣಗಳು ಈ ಪ್ರದೇಶದಲ್ಲಿ ಇಸ್ರೇಲಿಗಳನ್ನು ಕೊಂದಿದ್ದವು ಮತ್ತು ಇಸ್ರೇಲಿ ಸೈನಿಕರು ಪ್ರತಿದಾಳಿ ನಡೆಸಿದ್ದರು.

ಇದಕ್ಕಿಂತಲೂ ಮುಂದೆ ಅಕ್ರಮ ಇಸ್ರೇಲಿ ವಸಾಹತುಗಳ ವಿರುದ್ಧ ಪ್ರತಿಭಟನೆಯ ಭಾಗವಾಗಿದ್ದ ಪ್ಯಾಲೆಸ್ತೀನ್ ವ್ಯಕ್ತಿಯನ್ನು ಇಸ್ರೇಲ್ ಸೇನೆ ಕೊಂದಿತ್ತು. ಜೊತೆಗೆ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಕ ಬಾಲಕನೊಬ್ಬ ಸಾವನ್ನಪ್ಪಿದ್ದರು.

ಇದನ್ನೂ ಓದಿ:ಇಸ್ರೇಲ್‌ಗೆ ಹೊಸ ಪ್ರಧಾನಿ; ಪ್ಯಾಲೆಸ್ಟೇನಿಯನ್ನರು ಬೆಂಕಿಯಿಂದ ಬಾಣೆಲೆಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...