Homeಚಳವಳಿಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಅಕ್ರಮ ಭೂಸ್ವಾಧೀನ: ಶಿವರಾಮ ಕಾರಂತ ಬಡಾವಣೆ ನಿವಾಸಿಗಳ ಆಕ್ರೋಶ

ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಅಕ್ರಮ ಭೂಸ್ವಾಧೀನ: ಶಿವರಾಮ ಕಾರಂತ ಬಡಾವಣೆ ನಿವಾಸಿಗಳ ಆಕ್ರೋಶ

ಬೆಂಗಳೂರು ಅಭಿವೃದ್ದಿಯ ಹೆಸರೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ?

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರ, ದಲಿತರ, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವಾಸಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಹೋರಾಡುತ್ತಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008 ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಸಹ ಅದನ್ನೇ ಮುಂದುಮಾಡಿ LAA 1894 ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013 ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894 ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ; ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013 ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020 ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894 ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಶ್ರೀ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕರೂ ಆಗಿರುವ BDA ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲು ವಿಶೇಷ ಕಾಳಜಿ ತೋರುತ್ತಿದ್ದಾರೆ ಮಾತ್ರವಲ್ಲ ಏನೇ ಅಡೆತಡೆಗಳು ಬಂದರೂ ಸರಿಯೇ ಈ ಲೇಔಟ್ ಅನ್ನು ನಿರ್ಮಿಸಲಾಗುವುದು ಎಂದು ಕೂಡ ಹೇಳಿದ್ದಾರೆ. ತಮ್ಮ ಕ್ಷೇತ್ರದ ಉಳಿದ ಭಾಗದ ಮತದಾರರು ತನ್ನನ್ನೇ ಚುನಾಯಿಸುತ್ತಾರಾದ್ದರಿಂದ 17 ಗ್ರಾಮಗಳಲ್ಲಿ ಹಾನಿಗೆ ಒಳಗಾಗುವವರ ಬಗ್ಗೆ ತಾನು ಕಾಳಜಿ ವಹಿಸುವುದಿಲ್ಲವೆಂದು ಅವರು ಈಗಾಗಲೇ ಸಾರ್ವಜನಿಕವಾಗಿಯೇ ಹೇಳಿದ್ದಾರೆ. ಈ ರೀತಿ ಮಾತನಾಡುವ ವ್ಯಕ್ತಿ ಮುಖ್ಯ ಪ್ರಾಧಿಕಾರದವೊಂದರ ಅಧ್ಯಕ್ಷರಾಗಲು ಅರ್ಹರಲ್ಲವೆಂದೂ, ಈ ಕೂಡಲೇ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ನಾವು ತಲೆಮಾರುಗಳಿಂದ ಗೌರವಿಸಿಕೊಂಡು ಬಂದಿರುವ ಮತ್ತು ರಕ್ಷಿಸಿರುವ ನಮ್ಮ ಸಮುದಾಯದ ಪ್ರಜ್ಞೆಯನ್ನು, ನಮ್ಮ ಸಂಸ್ಕೃತಿಯನ್ನು, ನಮ್ಮ ಕೃಷಿ ಜೀವವೈವಿಧ್ಯತೆಯನ್ನು ನಾಶಪಡಿಸುವ ಅತ್ಯಂತ ಕ್ರೂರ ಕಾರ್ಯವಿಧಾನವನ್ನು, ಅತ್ಯಂತ ಫಲವತ್ತಾದ ಭೂಮಿಯಲ್ಲಿ ವಾಸಿಸುವ ಮತ್ತು ಸಾಗುವಳಿ ಮಾಡುತ್ತ ಬಂದಿರುವ 2.000 ಕುಟುಂಬಗಳನ್ನು ಬಲಿಕೊಡಲು ಬಳಸಲು ಸಾಧ್ಯವಿಲ್ಲ. ಅರ್ಕಾವತಿ ನದಿಯ ಜಲಾನಯನದ ಪ್ರಮುಖ ಭಾಗವಾಗಿರುವ ಈ ಭೂಮಿಯು ಈಗಾಗಲೇ ತೀವ್ರ ನೀರಿನ ಕೊರತೆಯಿಂದ ಬಳಲುತ್ತಿರುವ ಬೆಂಗಳೂರಿಗೆ ಅಗತ್ಯವಿರುವ ಕುಡಿಯುವ ನೀರನ್ನೂ ಒದಗಿಸುತ್ತಿರುವ ಈ ಭೂಮಿಯನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...