Homeಚಳವಳಿಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಅಕ್ರಮ ಭೂಸ್ವಾಧೀನ: ಶಿವರಾಮ ಕಾರಂತ ಬಡಾವಣೆ ನಿವಾಸಿಗಳ ಆಕ್ರೋಶ

ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಅಕ್ರಮ ಭೂಸ್ವಾಧೀನ: ಶಿವರಾಮ ಕಾರಂತ ಬಡಾವಣೆ ನಿವಾಸಿಗಳ ಆಕ್ರೋಶ

ಬೆಂಗಳೂರು ಅಭಿವೃದ್ದಿಯ ಹೆಸರೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ?

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರ, ದಲಿತರ, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವಾಸಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಹೋರಾಡುತ್ತಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008 ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಸಹ ಅದನ್ನೇ ಮುಂದುಮಾಡಿ LAA 1894 ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013 ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894 ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ; ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013 ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020 ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894 ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಶ್ರೀ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕರೂ ಆಗಿರುವ BDA ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲು ವಿಶೇಷ ಕಾಳಜಿ ತೋರುತ್ತಿದ್ದಾರೆ ಮಾತ್ರವಲ್ಲ ಏನೇ ಅಡೆತಡೆಗಳು ಬಂದರೂ ಸರಿಯೇ ಈ ಲೇಔಟ್ ಅನ್ನು ನಿರ್ಮಿಸಲಾಗುವುದು ಎಂದು ಕೂಡ ಹೇಳಿದ್ದಾರೆ. ತಮ್ಮ ಕ್ಷೇತ್ರದ ಉಳಿದ ಭಾಗದ ಮತದಾರರು ತನ್ನನ್ನೇ ಚುನಾಯಿಸುತ್ತಾರಾದ್ದರಿಂದ 17 ಗ್ರಾಮಗಳಲ್ಲಿ ಹಾನಿಗೆ ಒಳಗಾಗುವವರ ಬಗ್ಗೆ ತಾನು ಕಾಳಜಿ ವಹಿಸುವುದಿಲ್ಲವೆಂದು ಅವರು ಈಗಾಗಲೇ ಸಾರ್ವಜನಿಕವಾಗಿಯೇ ಹೇಳಿದ್ದಾರೆ. ಈ ರೀತಿ ಮಾತನಾಡುವ ವ್ಯಕ್ತಿ ಮುಖ್ಯ ಪ್ರಾಧಿಕಾರದವೊಂದರ ಅಧ್ಯಕ್ಷರಾಗಲು ಅರ್ಹರಲ್ಲವೆಂದೂ, ಈ ಕೂಡಲೇ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ನಾವು ತಲೆಮಾರುಗಳಿಂದ ಗೌರವಿಸಿಕೊಂಡು ಬಂದಿರುವ ಮತ್ತು ರಕ್ಷಿಸಿರುವ ನಮ್ಮ ಸಮುದಾಯದ ಪ್ರಜ್ಞೆಯನ್ನು, ನಮ್ಮ ಸಂಸ್ಕೃತಿಯನ್ನು, ನಮ್ಮ ಕೃಷಿ ಜೀವವೈವಿಧ್ಯತೆಯನ್ನು ನಾಶಪಡಿಸುವ ಅತ್ಯಂತ ಕ್ರೂರ ಕಾರ್ಯವಿಧಾನವನ್ನು, ಅತ್ಯಂತ ಫಲವತ್ತಾದ ಭೂಮಿಯಲ್ಲಿ ವಾಸಿಸುವ ಮತ್ತು ಸಾಗುವಳಿ ಮಾಡುತ್ತ ಬಂದಿರುವ 2.000 ಕುಟುಂಬಗಳನ್ನು ಬಲಿಕೊಡಲು ಬಳಸಲು ಸಾಧ್ಯವಿಲ್ಲ. ಅರ್ಕಾವತಿ ನದಿಯ ಜಲಾನಯನದ ಪ್ರಮುಖ ಭಾಗವಾಗಿರುವ ಈ ಭೂಮಿಯು ಈಗಾಗಲೇ ತೀವ್ರ ನೀರಿನ ಕೊರತೆಯಿಂದ ಬಳಲುತ್ತಿರುವ ಬೆಂಗಳೂರಿಗೆ ಅಗತ್ಯವಿರುವ ಕುಡಿಯುವ ನೀರನ್ನೂ ಒದಗಿಸುತ್ತಿರುವ ಈ ಭೂಮಿಯನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...