Homeಮುಖಪುಟಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

- Advertisement -
- Advertisement -

ಗುಜರಾತ್ ರಾಜ್ಯದ ಕಛ್ ಪ್ರದೇಶದ ಅದಾನಿ ಕೆಮಿಕಲ್ಸ್ ಮತ್ತು ಮುಂದ್ರಾ ಬಂದರು ಯೋಜನೆಗಾಗಿ ಅರಣ್ಯ ಮತ್ತು ಪರಿಸರ ಇಲಾಖೆಯು ಅಕ್ರಮ ರೀತಿಯಲ್ಲಿ ಗೌತಮ್ ಅದಾನಿ ಕಂಪನಿಗೆ ಭೂ ಮಂಜೂರಾತಿ ಮಾಡಿದೆ. ಅದರಿಂದಾಗಿ ಗುಜರಾತ್ ರಾಜ್ಯ ಸರ್ಕಾರಕ್ಕೆ 58.64 ಕೋಟಿ ರೂಗಳಷ್ಟು ನಷ್ಟ ಉಂಟಾಗಿದೆ ಎಂದು ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಸಲ್ಲಿಸಿದೆ.

ಬುಧವಾರ ರಾಜ್ಯ ವಿಧಾನಸಭೆಯಲ್ಲಿ ತನ್ನ 5ನೇ ವರದಿ ಮಂಡಿಸಿದ ಸಮಿತಿಯು “ಮೂರು ತಿಂಗಳಲ್ಲಿ ಕಂಪನಿಯಿಂದ ಪೂರ್ಣ ಮೊತ್ತವನ್ನು ವಸೂಲಿ ಮಾಡಬೇಕು ಮತ್ತು ಭೂಮಿಯನ್ನು ಅನುಚಿತವಾಗಿ ವರ್ಗೀಕರಿಸಿ, ರಾಜ್ಯ ಸರ್ಕಾರಕ್ಕೆ ನಷ್ಟ ಉಂಟುಮಾಡಿದ ಮತ್ತು ಕಂಪನಿಗೆ ಅನಾವಶ್ಯಕ ಲಾಭ ತಂದುಕೊಡುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಶಿಫಾರಸ್ಸು ಮಾಡಿದೆ.

ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮತ್ತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ವರ್ಗೀಕರಣ ಮಾಡಿದ್ದರಿಂದ ಕಂಪನಿ 58.64 ಕೋಟಿ ರೂ ಲಾಭ ಪಡೆದಿದೆ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾದ ಕಾಂಗ್ರೆಸ್ ಶಾಸಕ ಪೂಂಜ ವನ್ಶ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು 2004ರಲ್ಲಿ ಅದಾನಿ ಕಂಪನಿಗೆ ಕಛ್ ಜಿಲ್ಲೆಯ ಮುಂದ್ರಾದಲ್ಲಿ 1,840 ಹೆಕ್ಟೇರ್ ಮತ್ತು ಧಾರ್ಬ್ ಗ್ರಾಮದಲ್ಲಿ 168.42 ಹೆಕ್ಟೇರ್ ಭೂಮಿಯನ್ನು ಮಂಜೂರು ಮಾಡಿತ್ತು. ಸುಪ್ರೀಂ ಕೋರ್ಟ್ ಅರಣ್ಯ ಪ್ರದೇಶವನ್ನು ಆರು ವಿಭಾಗಗಳಾಗಿ ವಿಂಗಡಿಸಿ ಪ್ರತಿಯೊಂದಕ್ಕೂ ಇಂತಿಷ್ಟು ಎಂದು ಮೌಲ್ಯವನ್ನು ನಿಗಧಿ ಮಾಡಿದೆ. ಅದರಂತೆ ಕಛ್ ಜಿಲ್ಲೆಯ ಅರಣ್ಯವು ಎಕೊ ಕ್ಲಾಸ್2 (ಪ್ರತಿ ಹೆಕ್ಟೇರ್‌ಗೆ 7.30 ಲಕ್ಷ ರೂ)  ಮತ್ತು ಎಕೊ ಕ್ಲಾಸ್ 4 ರಲ್ಲಿ (ಪ್ರತಿ ಹೆಕ್ಟೇರ್‌ಗೆ 4.30 ಲಕ್ಷ ರೂ) ಅಡಿಯಲ್ಲಿ ಬರುತ್ತದೆ ಎಂದು ಹೇಳಿತ್ತು.

ಆದರೆ ಗುಜರಾತ್ ಸರ್ಕಾರವು ಎಲ್ಲಾ ಅರಣ್ಯ ಭೂಮಿಯನ್ನು ಕೇವಲ ಎಕೊ ಕ್ಲಾಸ್ 4 ರ ಅಡಿಯಲ್ಲಿ ಅದಾನಿ ಕಂಪನಿಗೆ ಮಾರಾಟ ಮಾಡಿದ ಪರಿಣಾಮ ರಾಜ್ಯ ಸರ್ಕಾರಕ್ಕೆ 58.64 ಕೋಟಿ ನಷ್ಟವಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಕೊ ಕ್ಲಾಸ್2ರ ಅಡಿಯಲ್ಲಿ ಮೂರು ತಿಂಗಳೊಳಗೆ ಕಂಪನಿಯಿಂದ ಹಣ ವಸೂಲಿ ಮಾಡಬೇಕೆಂದು ಸಮಿತಿ ಸೂಚಿಸಿದೆ.

ಇದನ್ನೂ ಓದಿ: ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ತರಾತುರಿ ಟೆಂಡರ್ ಕರೆದ BBMP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...