Homeಮುಖಪುಟಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

- Advertisement -
- Advertisement -

ಗುಜರಾತ್ ರಾಜ್ಯದ ಕಛ್ ಪ್ರದೇಶದ ಅದಾನಿ ಕೆಮಿಕಲ್ಸ್ ಮತ್ತು ಮುಂದ್ರಾ ಬಂದರು ಯೋಜನೆಗಾಗಿ ಅರಣ್ಯ ಮತ್ತು ಪರಿಸರ ಇಲಾಖೆಯು ಅಕ್ರಮ ರೀತಿಯಲ್ಲಿ ಗೌತಮ್ ಅದಾನಿ ಕಂಪನಿಗೆ ಭೂ ಮಂಜೂರಾತಿ ಮಾಡಿದೆ. ಅದರಿಂದಾಗಿ ಗುಜರಾತ್ ರಾಜ್ಯ ಸರ್ಕಾರಕ್ಕೆ 58.64 ಕೋಟಿ ರೂಗಳಷ್ಟು ನಷ್ಟ ಉಂಟಾಗಿದೆ ಎಂದು ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಸಲ್ಲಿಸಿದೆ.

ಬುಧವಾರ ರಾಜ್ಯ ವಿಧಾನಸಭೆಯಲ್ಲಿ ತನ್ನ 5ನೇ ವರದಿ ಮಂಡಿಸಿದ ಸಮಿತಿಯು “ಮೂರು ತಿಂಗಳಲ್ಲಿ ಕಂಪನಿಯಿಂದ ಪೂರ್ಣ ಮೊತ್ತವನ್ನು ವಸೂಲಿ ಮಾಡಬೇಕು ಮತ್ತು ಭೂಮಿಯನ್ನು ಅನುಚಿತವಾಗಿ ವರ್ಗೀಕರಿಸಿ, ರಾಜ್ಯ ಸರ್ಕಾರಕ್ಕೆ ನಷ್ಟ ಉಂಟುಮಾಡಿದ ಮತ್ತು ಕಂಪನಿಗೆ ಅನಾವಶ್ಯಕ ಲಾಭ ತಂದುಕೊಡುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಶಿಫಾರಸ್ಸು ಮಾಡಿದೆ.

ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮತ್ತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ವರ್ಗೀಕರಣ ಮಾಡಿದ್ದರಿಂದ ಕಂಪನಿ 58.64 ಕೋಟಿ ರೂ ಲಾಭ ಪಡೆದಿದೆ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾದ ಕಾಂಗ್ರೆಸ್ ಶಾಸಕ ಪೂಂಜ ವನ್ಶ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು 2004ರಲ್ಲಿ ಅದಾನಿ ಕಂಪನಿಗೆ ಕಛ್ ಜಿಲ್ಲೆಯ ಮುಂದ್ರಾದಲ್ಲಿ 1,840 ಹೆಕ್ಟೇರ್ ಮತ್ತು ಧಾರ್ಬ್ ಗ್ರಾಮದಲ್ಲಿ 168.42 ಹೆಕ್ಟೇರ್ ಭೂಮಿಯನ್ನು ಮಂಜೂರು ಮಾಡಿತ್ತು. ಸುಪ್ರೀಂ ಕೋರ್ಟ್ ಅರಣ್ಯ ಪ್ರದೇಶವನ್ನು ಆರು ವಿಭಾಗಗಳಾಗಿ ವಿಂಗಡಿಸಿ ಪ್ರತಿಯೊಂದಕ್ಕೂ ಇಂತಿಷ್ಟು ಎಂದು ಮೌಲ್ಯವನ್ನು ನಿಗಧಿ ಮಾಡಿದೆ. ಅದರಂತೆ ಕಛ್ ಜಿಲ್ಲೆಯ ಅರಣ್ಯವು ಎಕೊ ಕ್ಲಾಸ್2 (ಪ್ರತಿ ಹೆಕ್ಟೇರ್‌ಗೆ 7.30 ಲಕ್ಷ ರೂ)  ಮತ್ತು ಎಕೊ ಕ್ಲಾಸ್ 4 ರಲ್ಲಿ (ಪ್ರತಿ ಹೆಕ್ಟೇರ್‌ಗೆ 4.30 ಲಕ್ಷ ರೂ) ಅಡಿಯಲ್ಲಿ ಬರುತ್ತದೆ ಎಂದು ಹೇಳಿತ್ತು.

ಆದರೆ ಗುಜರಾತ್ ಸರ್ಕಾರವು ಎಲ್ಲಾ ಅರಣ್ಯ ಭೂಮಿಯನ್ನು ಕೇವಲ ಎಕೊ ಕ್ಲಾಸ್ 4 ರ ಅಡಿಯಲ್ಲಿ ಅದಾನಿ ಕಂಪನಿಗೆ ಮಾರಾಟ ಮಾಡಿದ ಪರಿಣಾಮ ರಾಜ್ಯ ಸರ್ಕಾರಕ್ಕೆ 58.64 ಕೋಟಿ ನಷ್ಟವಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಕೊ ಕ್ಲಾಸ್2ರ ಅಡಿಯಲ್ಲಿ ಮೂರು ತಿಂಗಳೊಳಗೆ ಕಂಪನಿಯಿಂದ ಹಣ ವಸೂಲಿ ಮಾಡಬೇಕೆಂದು ಸಮಿತಿ ಸೂಚಿಸಿದೆ.

ಇದನ್ನೂ ಓದಿ: ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ತರಾತುರಿ ಟೆಂಡರ್ ಕರೆದ BBMP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...