Homeಕರ್ನಾಟಕಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

ಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಸಂಸತ್ತಿನ ಭದ್ರತೆ ಉಲ್ಲಂಘಿಸಿದವರಿಗೆ ಪಾಸ್ ನೀಡಿದ ಆರೋಪದಲ್ಲಿ ಸಿಲುಕಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರ ಸಹೋದರ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ನೂರಾರು ಮರಗಳನ್ನು ಅನಧಿಕೃತವಾಗಿ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ವಿರುದ್ಧ ದೂರು ದಾಖಲಾಗಿದ್ದು, ಬೇಲೂರು ತಹಶೀಲ್ದಾರ್ ಮಮತಾ ಅವರು ಗ್ರಾಮಕ್ಕೆ ತೆರಳಿ ನಡೆಸಿದ ರಹಸ್ಯ ಕಾರ್ಯಾಚರಣೆ ವೇಳೆ ಸರ್ಕಾರಿ ಜಮೀನಿನಲ್ಲಿ ನಡೆದ ಕೃತ್ಯ ಬೆಳಕಿಗೆ ಬಂದಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಬೆಲೆಬಾಳುವ ನೂರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದರ ಸಹೋದರನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಘಟನೆ ಕುರಿತು ವಿವರವಾದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ‘ಆರೋಪಿಯ ರಾಜಕೀಯ ಪ್ರಭಾವ ಲೆಕ್ಕಿಸದೆ ಕಾನೂನಿನ ಪ್ರಕಾರ ತ್ವರಿತ ಕ್ರಮ ಕೈಗೊಳ್ಳುವುದಾಗಿ’ ಅವರು ಭರವಸೆ ನೀಡಿದ್ದಾರೆ. ಆದರೆ, ಎಫ್ಐಆರ್ ದಾಖಲಾಗಿ 10 ದಿನ ಕಳೆದರೂ ಇವರೆಗೂ ವಿಕ್ರಮ್‌ನನ್ನು ಬಂಧಿಸಿಲ್ಲ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಕಾಫಿ ಮತ್ತು ಶುಂಠಿ ಕೃಷಿ ಮಾಡುತ್ತಿದ್ದಾರೆ. ತಮ್ಮ 5 ಎಕರೆ ಸೇರಿದಂತೆ ಸರ್ಕಾರದ 12 ಎಕರೆ ಜಮೀನಿನಲ್ಲಿದ್ದ ನೂರಾರು ನಿಗದಿತ ಮರಗಳನ್ನು ಅನಧಿಕೃತವಾಗಿ ಕಡಿದು ಕಳ್ಳಸಾಗಾಣೆ ಮಾಡುವಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಅರಣ್ಯ ಅಧಿಕಾರಿಗಳಿಂದ ಅಗತ್ಯ ಅನುಮತಿಗಳ ಪಡೆದುಕೊಳ್ಳದೆ ಇರುವುದರಿಂದ, ಈ ಘಟನೆಯು ಪರಿಸರ ಸಂರಕ್ಷಣೆ ಮತ್ತು ಕಾನೂನು ಕಾರ್ಯವಿಧಾನಗಳ ಅನುಸರಣೆಯ ಉಲ್ಲಂಘನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಬೆಲೆಬಾಳುವ ಮರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಕಡಿದು ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಮರ ಕಡಿದಿರುವ 4 ಎಕರೆ ಜಮೀನನ್ನು ಬೇಲೂರು ತಾಲೂಕಿನ ಇಬ್ಬರು ವ್ಯಕ್ತಿಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮುಂದಾಗಿದ್ದು, ಆ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ವಿಕ್ರಮ ಸಿಂಹ ಇಬ್ಬರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.

ಖಾಸಗಿ ಮಾಧ್ಯಮವೊಂದರ ಜತೆ ಮಾತನಾಡಿರುವ ಬೇಲೂರು ತಹಶೀಲ್ದಾರ್ ಮಮತಾ, ‘ವಿಕ್ರಮ್ ಸಿಂಹ ಎಂಬ ವ್ಯಕ್ತಿ ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಐದು ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವುದು ನಿಜ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳ ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನು ಕಡಿಯಲು ಯಾರಿಗೂ ಅವಕಾಶವಿಲ್ಲ, ಏಕೆಂದರೆ ಇವುಗಳು ನಿಗದಿತ ಮರಗಳು – ಸರ್ಕಾರದ ಆಸ್ತಿ. ತನಿಖೆ ಪ್ರಾರಂಭಿಸಲಾಗಿದೆ; ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿಲ್ಲ’ ಎಂದು ಹೇಳಿದ್ದಾರೆ.

ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಖಂಡ್ರೆ:

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ‘ನಾನು ಹಾಸನ ಸಿಸಿಎಫ್‌ನಿಂದ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದೇನೆ. ಪ್ರಾಥಮಿಕ ವರದಿಗಳ ಪ್ರಕಾರ, ನೂರಾರು ನಿಗದಿತ ಮರಗಳನ್ನು ಅಕ್ರಮವಾಗಿ ಕಡಿದುಹಾಕಿದ್ದಕ್ಕಾಗಿ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಪಿಯ ರಾಜಕೀಯ ಸಂಬಂಧಗಳು ಏನೇ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಆರೋಪಿ ವಿಕ್ರಮಸಿಂಹ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಎಂಬುದು ನಿಮಗೆ ತಿಳಿದಿದೆಯೇ ಎಂದು ಚಿತ್ರದುರ್ಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆರೋಪಿ ಬಿಜೆಪಿ ಸಂಸದರ ಸಹೋದರ ಎಂದು ನನಗೆ ತಿಳಿದಿರಲಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅನುಮತಿಯಿಲ್ಲದೆ ನೂರಾರು ಮರಗಳನ್ನು ಕಡಿಯುವುದು ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ’ ಎಂದರು.

ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಾಗ್ದಾಳಿ:

ಅಕ್ರಮಮವಾಗಿ ಮರ ಕಡಿದು ಸಾಗಾಣೆ ಮಾಡಿರುವ ಬಗ್ಗೆ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ’ ಎಂದು ಟೀಕಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಡಿಯರ್ ಬಿಜೆಪಿ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...