Homeಕರ್ನಾಟಕಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

ಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಸಂಸತ್ತಿನ ಭದ್ರತೆ ಉಲ್ಲಂಘಿಸಿದವರಿಗೆ ಪಾಸ್ ನೀಡಿದ ಆರೋಪದಲ್ಲಿ ಸಿಲುಕಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರ ಸಹೋದರ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ನೂರಾರು ಮರಗಳನ್ನು ಅನಧಿಕೃತವಾಗಿ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ವಿರುದ್ಧ ದೂರು ದಾಖಲಾಗಿದ್ದು, ಬೇಲೂರು ತಹಶೀಲ್ದಾರ್ ಮಮತಾ ಅವರು ಗ್ರಾಮಕ್ಕೆ ತೆರಳಿ ನಡೆಸಿದ ರಹಸ್ಯ ಕಾರ್ಯಾಚರಣೆ ವೇಳೆ ಸರ್ಕಾರಿ ಜಮೀನಿನಲ್ಲಿ ನಡೆದ ಕೃತ್ಯ ಬೆಳಕಿಗೆ ಬಂದಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಬೆಲೆಬಾಳುವ ನೂರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದರ ಸಹೋದರನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಘಟನೆ ಕುರಿತು ವಿವರವಾದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ‘ಆರೋಪಿಯ ರಾಜಕೀಯ ಪ್ರಭಾವ ಲೆಕ್ಕಿಸದೆ ಕಾನೂನಿನ ಪ್ರಕಾರ ತ್ವರಿತ ಕ್ರಮ ಕೈಗೊಳ್ಳುವುದಾಗಿ’ ಅವರು ಭರವಸೆ ನೀಡಿದ್ದಾರೆ. ಆದರೆ, ಎಫ್ಐಆರ್ ದಾಖಲಾಗಿ 10 ದಿನ ಕಳೆದರೂ ಇವರೆಗೂ ವಿಕ್ರಮ್‌ನನ್ನು ಬಂಧಿಸಿಲ್ಲ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಕಾಫಿ ಮತ್ತು ಶುಂಠಿ ಕೃಷಿ ಮಾಡುತ್ತಿದ್ದಾರೆ. ತಮ್ಮ 5 ಎಕರೆ ಸೇರಿದಂತೆ ಸರ್ಕಾರದ 12 ಎಕರೆ ಜಮೀನಿನಲ್ಲಿದ್ದ ನೂರಾರು ನಿಗದಿತ ಮರಗಳನ್ನು ಅನಧಿಕೃತವಾಗಿ ಕಡಿದು ಕಳ್ಳಸಾಗಾಣೆ ಮಾಡುವಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಅರಣ್ಯ ಅಧಿಕಾರಿಗಳಿಂದ ಅಗತ್ಯ ಅನುಮತಿಗಳ ಪಡೆದುಕೊಳ್ಳದೆ ಇರುವುದರಿಂದ, ಈ ಘಟನೆಯು ಪರಿಸರ ಸಂರಕ್ಷಣೆ ಮತ್ತು ಕಾನೂನು ಕಾರ್ಯವಿಧಾನಗಳ ಅನುಸರಣೆಯ ಉಲ್ಲಂಘನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಬೆಲೆಬಾಳುವ ಮರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಕಡಿದು ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಮರ ಕಡಿದಿರುವ 4 ಎಕರೆ ಜಮೀನನ್ನು ಬೇಲೂರು ತಾಲೂಕಿನ ಇಬ್ಬರು ವ್ಯಕ್ತಿಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮುಂದಾಗಿದ್ದು, ಆ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ವಿಕ್ರಮ ಸಿಂಹ ಇಬ್ಬರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.

ಖಾಸಗಿ ಮಾಧ್ಯಮವೊಂದರ ಜತೆ ಮಾತನಾಡಿರುವ ಬೇಲೂರು ತಹಶೀಲ್ದಾರ್ ಮಮತಾ, ‘ವಿಕ್ರಮ್ ಸಿಂಹ ಎಂಬ ವ್ಯಕ್ತಿ ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಐದು ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವುದು ನಿಜ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳ ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನು ಕಡಿಯಲು ಯಾರಿಗೂ ಅವಕಾಶವಿಲ್ಲ, ಏಕೆಂದರೆ ಇವುಗಳು ನಿಗದಿತ ಮರಗಳು – ಸರ್ಕಾರದ ಆಸ್ತಿ. ತನಿಖೆ ಪ್ರಾರಂಭಿಸಲಾಗಿದೆ; ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿಲ್ಲ’ ಎಂದು ಹೇಳಿದ್ದಾರೆ.

ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಖಂಡ್ರೆ:

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ‘ನಾನು ಹಾಸನ ಸಿಸಿಎಫ್‌ನಿಂದ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದೇನೆ. ಪ್ರಾಥಮಿಕ ವರದಿಗಳ ಪ್ರಕಾರ, ನೂರಾರು ನಿಗದಿತ ಮರಗಳನ್ನು ಅಕ್ರಮವಾಗಿ ಕಡಿದುಹಾಕಿದ್ದಕ್ಕಾಗಿ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಪಿಯ ರಾಜಕೀಯ ಸಂಬಂಧಗಳು ಏನೇ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಆರೋಪಿ ವಿಕ್ರಮಸಿಂಹ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಎಂಬುದು ನಿಮಗೆ ತಿಳಿದಿದೆಯೇ ಎಂದು ಚಿತ್ರದುರ್ಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆರೋಪಿ ಬಿಜೆಪಿ ಸಂಸದರ ಸಹೋದರ ಎಂದು ನನಗೆ ತಿಳಿದಿರಲಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅನುಮತಿಯಿಲ್ಲದೆ ನೂರಾರು ಮರಗಳನ್ನು ಕಡಿಯುವುದು ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ’ ಎಂದರು.

ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಾಗ್ದಾಳಿ:

ಅಕ್ರಮಮವಾಗಿ ಮರ ಕಡಿದು ಸಾಗಾಣೆ ಮಾಡಿರುವ ಬಗ್ಗೆ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ’ ಎಂದು ಟೀಕಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಡಿಯರ್ ಬಿಜೆಪಿ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...