Homeಅಂಕಣಗಳುನೂರರ ನೋಟ: ಕಾಡುಗಳ್ಳರ ಅಟ್ಟಹಾಸ; ನಿಲ್ಲದ ಗಣಿಗಾರಿಕೆ; ಹೆಚ್ಚಿದ ವನ್ಯಜೀವ-ಮನುಷ್ಯ ಸಂಘರ್ಷ

ನೂರರ ನೋಟ: ಕಾಡುಗಳ್ಳರ ಅಟ್ಟಹಾಸ; ನಿಲ್ಲದ ಗಣಿಗಾರಿಕೆ; ಹೆಚ್ಚಿದ ವನ್ಯಜೀವ-ಮನುಷ್ಯ ಸಂಘರ್ಷ

- Advertisement -
- Advertisement -

ಕಾಡಿನಲ್ಲಿ ವಾಸ ಮಾಡುವ ಹುಲಿ, ಚಿರತೆ, ಆನೆ ಪದೇ ಪದೇ ಅರಣ್ಯದ ಹತ್ತಿರ ಇರುವ ಗ್ರಾಮಗಳಿಗೆ ಬರುತ್ತಿವೆ. ಆನೆ ಬೆಳೆ ನಾಶ ಮಾಡುತ್ತದೆ, ಜನರ ಮೇಲೆ ದಾಳಿ ಮಾಡಿ ಕೊಲ್ಲುತ್ತದೆ. ಹುಲಿ ಚಿರತೆಗಳು ನಾಯಿ, ಹಸು, ಕರು, ಕೋಳಿಗಳನ್ನು ತಿಂದು ಹಾಕುವುದಲ್ಲದೆ ಮನುಷ್ಯರ ಮೇಲೂ ಬಿದ್ದು ಹಾನಿ ಮಾಡುತ್ತಿವೆ. ಪ್ರತಿದಿನ ಈ ವನ್ಯಜೀವಿ ಮತ್ತು ಮನುಷ್ಯರ ಸಂಘರ್ಷದ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದರೂ ಸರ್ಕಾರವೇ ಆಗಲಿ, ಅರಣ್ಯ ಇಲಾಖೆಯಾಗಲಿ ಆತಂಕಗೊಳ್ಳುತ್ತಿಲ್ಲ. ಅದರ ಬಗೆಗೆ ಚರ್ಚೆಯೂ ಆಗುತ್ತಿಲ್ಲ. ಇದು ಹೀಗೆಯೇ ಮುಂದುವರೆದರೆ ಒಂದು ದಿನ ಅರಣ್ಯದ ಪ್ರಾಣಿಗಳೆಲ್ಲ ಗ್ರಾಮಗಳನ್ನು ಆವರಿಸಿಕೊಂಡು ಭಯ ಭೀತನಾದ ಮನುಷ್ಯ ತನ್ನ ರಕ್ಷಣೆಗಾಗಿ ಅರಣ್ಯ ಸೇರುವುದು ಅನಿವಾರ್ಯವಾಗುತ್ತದೆ.

ಹಿಂದೆ ಎಂದೋ ಒಂದೊಂದು ಸಾರಿ ಹಳ್ಳಿಗಳಿಗೆ ಬರುತ್ತಿದ್ದ ಕಾಡುಪ್ರಾಣಿಗಳು ಈಗ ಪದೇಪದೇ ಹೊರಟಹತ್ತಿವೆ. ಇದಕ್ಕೆ ಕಾರಣವೇನಿರಬಹುದು ಎಂದು ಜರೂರಾಗಿ ಯೋಚಿಸಬೇಕಾದ ಸಮಯ ಇದು.

ಅರಣ್ಯ ಪ್ರದೇಶ ವರ್ಷದಿಂದ ವರ್ಷಕ್ಕೆ ಕಿರಿದಾಗುತ್ತಿದೆ. ಕಾಡುಪ್ರಾಣಿಗಳಿಗೆ ಇದರಿಂದ ನೆಲಸಲು ಸ್ಥಳದ ಅಭಾವ ಕಾಣಿಸಿಕೊಳ್ಳುತ್ತಿರಬಹುದು. ಆಹಾರ ಮತ್ತು ನೀರಿನ ಅಭಾವ ಇದಕ್ಕೆ ಕಾರಣವಿರಬಹುದು. ಅರಣ್ಯ ನಾಶಕ್ಕೆ ಮುಖ್ಯ ಕಾರಣ ಹಲವು ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಸರ್ಕಾರ ರಸ್ತೆಗಳನ್ನು ನಿರ್ಮಾಣ ಮಾಡುತ್ತಿರುವುದು. ಪಶ್ಚಿಮಘಟ್ಟ ಮೊದಲುಗೊಂಡು ಎಲ್ಲೆಲ್ಲಿ ಬೆಟ್ಟದ ಸಾಲುಗಳಿವೆಯೋ ಅಲ್ಲೆಲ್ಲ ಸರ್ಕಾರದ ಒಪ್ಪಿಗೆ ಪಡೆದು ಅಥವಾ ಅಕ್ರಮವಾಗಿ ಕಲ್ಲುಗಣಿ ಕಾರ್ಯ ಅವ್ಯಾಹತವಾಗಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವುದು, ಕಾಡಿನಲ್ಲಿ ಬೆಳೆದಿರುವ ಉತ್ಕೃಷ್ಟವಾದ ಮರಗಳನ್ನು ಕಳ್ಳತನದಿಂದ ಮತ್ತು ಅರಣ್ಯಾಧಿಕಾರಿಗಳ ನೆರವಿನಿಂದ ಕಡಿದು ದುಡ್ಡು ಮಾಡಿಕೊಳ್ಳುವ ಮರಗಳ್ಳರಿಂದ ಮತ್ತು ಅರಣ್ಯ ಮಧ್ಯದಲ್ಲಿ ಶ್ರೀಮಂತರ ಮೋಜಿಗಾಗಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವ ಧನಪಿಶಾಚಿಗಳಿಂದಾಗಿ ಅರಣ್ಯ ಭೂಮಿ ಕಿರಿದಾಗುತ್ತಿದೆ. ಒಟ್ಟು ಭೂಮಿಯ 1/3ಭಾಗ ಅರಣ್ಯ ಪ್ರದೇಶ ಇರಬೇಕೆಂದು ಇಂಗ್ಲಿಷರ ಕಾಲದಲ್ಲಿ ನಿಯಮ ಇತ್ತು. ಜನಸಂಖ್ಯೆ ಸ್ಫೋಟವಾದಂತೆ ಹಳ್ಳಿಯವರು ತಮ್ಮ ಹಳ್ಳಿಗಳ ವಿಸ್ತರಣೆಗಾಗಿ ಕಾಡನ್ನು ಕಬಳಿಸುತ್ತಾ ಬಂದರು. ನಗರಗಳ, ಪಟ್ಟಣಗಳ ಜನಸಂಖ್ಯೆ ಹೆಚ್ಚಿದಂತೆ ಮುನಿಸಿಪಾಲಿಟಿಗಳು, ಜಿಲ್ಲಾ ಬೋರ್ಡುಗಳು ಸರ್ಕಾರದ ಸಹಕಾರದೊಂದಿಗೆ ಅರಣ್ಯ ಭೂಮಿಯನ್ನೇ ಕಬಳಿಸುವ ಹವ್ಯಾಸಕ್ಕೆ ಬಿದ್ದವು. ಅರಣ್ಯ ಪ್ರದೇಶದಲ್ಲಿ ಕಾರ್ಖಾನೆಗಳನ್ನೂ ಸ್ಥಾಪಿಸಲಾಯಿತು.

ಬೆಂಗಳೂರಿನಂತಹ ಪಟ್ಟಣಗಳು ಬೆಳೆದಂತೆ ಪಟ್ಟಣದ ಸರಹದ್ದಿನಲ್ಲಿದ್ದ ಅರಣ್ಯಗಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತು. ಹೀಗಾಗಿ 33% ಇದ್ದ ಅರಣ್ಯ ಪ್ರದೇಶ ಈಗ ಶೇ,18ಕ್ಕೆ ಇಳಿದಿದೆ. ಕೆಲವು ವರ್ಷಗಳ ಹಿಂದೆ ಅರಣ್ಯಪ್ರದೇಶ ಶೇ,23ರಷ್ಟಿತ್ತು. ಆಗಲೇ ಎಚ್ಚೆತ್ತುಕೊಂಡು ಸರ್ಕಾರ ಅರಣ್ಯಪ್ರದೇಶವನ್ನು ವಿಸ್ತರಿಸುವಂತಹ ಕೆಲಸ ಆರಂಭಿಸಬೇಕಾಗಿತ್ತು. ಸರ್ಕಾರದ ನಿಷ್ಕ್ರಿಯತೆಯಿಂದಾಗಿ ಅರಣ್ಯ ಈ ದುರವಸ್ಥೆ ಮುಟ್ಟಿದೆ. ಲೋಕಸಭೆಯ, ಶಾಸನಸಭೆಯ ಹಲವು ಸದಸ್ಯರು ಕಲ್ಲಿನ ವ್ಯಾಪಾರ, ಮ್ಯಾಂಗನೀಸ್, ಕಬ್ಬಿಣ ಮುಂತಾದ ಲೋಹಗಳ ವ್ಯಾಪಾರದಲ್ಲಿ ತೊಡಗಿಕೊಂಡು ಅರಣ್ಯ ಪ್ರದೇಶಗಳಲ್ಲಿ, ನದಿತಟಗಳ ಪ್ರದೇಶಗಳ ಆಸುಪಾಸಿನಲ್ಲೂ ಅಕ್ರಮ ಗಣಿಗಾರಿಕೆ ಮಾಡಲುತೊಡಗಿದರು.

ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಯ್ತು ದೇಶದ ಪರಿಸ್ಥಿತಿ. ’ಹರ ಕೊಲ್ಲಲು ಪರಕಾಯ್ವನೇ’ ಎಂಬ ದುಸ್ಥಿತಿಗೆ ನಾವು ತಲುಪಿದ್ದೇವೆ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸಂತೋಷ್ ಲಾಡ್, ಆನಂದ್ ಸಿಂಗ್ ಮುಂತಾದವರು ಗಣಿಗಾರಿಕೆಯಲ್ಲಿ ತೊಡಗಿ ಅದಿರನ್ನು ದೋಚಿದ ಪ್ರಕರಣಗಳನ್ನು ಬಯಲಿಗೆಳೆದ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು, ಬಳ್ಳಾರಿಯನ್ನೇ ಈ ಖದೀಮರು ತಮ್ಮ ವಶವರ್ತಿ ಮಾಡಿಕೊಂಡಿದ್ದರಿಂದ ಅದನ್ನು ಈ ಖದೀಮರ ರಿಪಬ್ಲಿಕ್ ಎಂದು ಕರೆದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಒಮ್ಮೆ ಜನಾದನ ರೆಡ್ಡಿಯವರ ಮೇಲೆ ಮುನಿಸಿಕೊಂಡು ಬಳ್ಳಾರಿಯ ಜಿಲ್ಲಾಧಿಕಾರಿಗಳು, ಗಣಿ ಅಧಿಕಾರಿಗಳು, ಎಸ್‌ಪಿ ಎಲ್ಲರನ್ನೂ ಏಕಕಾಲಕ್ಕೆ ವರ್ಗಾವಣೆ ಮಾಡಿದರು. ಈ ವಿಷಯ ತಿಳಿದ ಜನಾರ್ದನ ರೆಡ್ಡಿಯವರು ಯಡಿಯೂರಪ್ಪನವರಿಗೆ ಫೋನ್ ಮಾಡಿ ’ಈ ಕೂಡಲೇ ನೀವು ವರ್ಗ ಮಾಡಿರುವ ಅಧಿಕಾರಿಗಳನ್ನು ಬಳ್ಳಾರಿಗೆ ವಾಪಸ್ ಕಳುಹಿಸದಿದ್ದರೆ ನೀವು ಕುರ್ಚಿ ಬಿಟ್ಟು ಇಳಿಯಬೇಕಾದೀತು’ ಎಂದು ಬೆದರಿಕೆ ಹಾಕಿದರು. ಯಡಿಯೂರಪ್ಪನವರು ಮರು ಮಾತಾಡದೆ ಆ ಅಧಿಕಾರಿಗಳ ವರ್ಗಾವಣೆ ಆರ್ಡರನ್ನು ಹಿಂಪಡೆದರು. ಜನಾದನ ರೆಡ್ಡಿಯವರು ಈ ಬಳ್ಳಾರಿ ರಿಪಬ್ಲಿಕ್ಕಿನ ಅನಭಿಷಕ್ತ ಚಕ್ರವರ್ತಿ ಆಗಿದ್ದರು.

ಈ ಲೇಖನದ ಸಾರಾಂಶ ಇಷ್ಟೇ: ಅರಣ್ಯ ಭೂಮಿ ಕಿರಿದಾಗುತ್ತಿದೆ. ಹೀಗೆ ಮುಂದುವರೆದರೆ ಅರಣ್ಯದಲ್ಲಿರುವ ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ, ನಗರಗಳಿಗೆ ದಾಳಿ ಇಡುತ್ತವೆ. ಮಾನವ ರಕ್ತದ ರುಚಿ ನೋಡಿದ ಮೇಲೆ ಅವು ಆಡು, ಹಸುಗಳನ್ನು ತಿನ್ನುವುದು ಬಿಟ್ಟು ಮನುಷ್ಯನ ಮಾಂಸಕ್ಕೇ ಪಳಗಿಕೊಳ್ಳುತ್ತವೆ. ಆಗ ಯಾವ ಹಳ್ಳಿಯೂ, ಪಟ್ಟಣವೂ ಸುರಕ್ಷಿತವಾಗಿರುವುದಿಲ್ಲ. ಮನುಷ್ಯ ಊರು ಬಿಟ್ಟು ಕಾಡಿಗೆ ವಲಸೆ ಹೋಗುವುದೊಂದೇ ತನಗಿರುವ ಏಕೈಕ ಮಾರ್ಗ ಎಂದು ತೀರ್ಮಾನಿಸಿದರೆ ಅದಕ್ಕೆ ಆಶ್ಚರ್ಯ ಪಡಬೇಕಾಗಿಲ್ಲ.

ಈ ಅನಾಹುತ ಸಂಭವಿಸುವ ಮೊದಲೇ ಸರ್ಕಾರ ಅರಣ್ಯವನ್ನು ಉಳಿಸುವ ಕಾರ್ಯ ಕೈಗೊಂಡೀತೆ?


ಇದನ್ನೂ ಓದಿ:  ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...