Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

ಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಮತ್ತು ಹಣ ವರ್ಗಾವಣೆ ತನಿಖೆಯ ಭಾಗವಾಗಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ಬುಧವಾರ ಬೆಳಗ್ಗೆ ರಾಂಚಿಯಲ್ಲಿ ದಾಳಿ ನಡೆಸಿದೆ.

ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರಿಗೆ 7ನೇ ಸಮನ್ಸ್ ಕಳುಹಿಸಲಾಗಿದ್ದು, ವಿಚಾರಣೆಗೆ ದಿನಾಂಕ, ಸಮಯ ಮತ್ತು ಸ್ಥಳವನ್ನು ನಿರ್ಧರಿಸುವಂತೆ ಇಡಿ ಕೇಳಿದೆ. ಎರಡು ದಿನಗಳ ನಂತರ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಅವರು, ‘ಇಡಿ ಪಕ್ಷಪಾತದ ತನಿಖೆ ನಡೆಸುತ್ತಿದೆ’ ಎಂದು ಹೇಳಿದ್ದರು.

‘ಹೇಮಂತ್ ಸೊರೇನ್‌ಗೆ ಇದು ಕೊನೆಯ ಅವಕಾಶ’ ಎಂದು ಇಡಿ ಹೇಳಿದೆ. ‘ನಿಮಗೆ ನೀಡಿದ ಸಮನ್ಸ್‌ಗೆ ವಿಧೇಯನಾಗಿ ನೀವು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲವಾದ್ದರಿಂದ, 2002ರ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ನಿಮ್ಮ ಹೇಳಿಕೆಯನ್ನು ಸ್ಥಳದಲ್ಲಿ ದಾಖಲಿಸಲು ನಾವು ನಿಮಗೆ ಈ ಕೊನೆಯ ಅವಕಾಶವನ್ನು ನೀಡುತ್ತೇವೆ. ನಿಮಗೆ ಅನುಕೂಲಕರವಾಗುವ ದಿನಾಂಕ ಮತ್ತು ಸಮಯದ ಬಗ್ಗೆ ಬರೆದು, ಸಮನ್ಸ್‌ಗಳನ್ನು ಸ್ವೀಕರಿಸಿದ 7 ದಿನಗಳ ಒಳಗೆ ಕಳುಹಿಸಬೇಕು’ ಎಂದು ತನ್ನ 7ನೇ ಸಮನ್ಸ್‌ನಲ್ಲಿ ತಿಳಿಸಿದೆ.

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೊರೇನ್‌ಗೆ ಇಡಿ ಮೊದಲ ಬಾರಿಗೆ ಆಗಸ್ಟ್ ಮಧ್ಯದಲ್ಲಿ ಸಮನ್ಸ್ ನೀಡಿತ್ತು. ಆಗಸ್ಟ್ 24 ಮತ್ತು ಸೆಪ್ಟೆಂಬರ್ 9 ರಂದು ಹಾಜರಾಗುವಂತೆ ಅವರನ್ನು ಮತ್ತೆ ಕೇಳಲಾಯಿತು. ಮುಂದಿನ ಸಮನ್ಸ್ ಸೆಪ್ಟೆಂಬರ್ 23, ಅಕ್ಟೋಬರ್ 4 ಮತ್ತು ಡಿಸೆಂಬರ್ 12 ರಂದು ನೀಡಲಾಗಿದೆ.

ಹೇಮಂತ್ ಸೋರೆನ್ ಪತ್ನಿ ಕಲ್ಪನಾ ಮುಂದಿನ ಮುಖ್ಯಮಂತ್ರಿ?

ಹೇಮಂತ್ ಪತ್ನಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲು ಜಾರ್ಖಂಡ್ ಮುಕ್ತಿ ಮೋರ್ಚಾದೊಳಗೆ ಸಿದ್ಧತೆ ನಡೆದಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ‘ಈ ಊಹಾಪೋಹಗಳಲ್ಲಿ ಸ್ವಲ್ಪವೂ ಸತ್ಯವಿಲ್ಲ. ಬಿಜೆಪಿಯ ಕಲ್ಪನೆಯ ಫಲಿತಾಂಶ’ ಎಂದು ಮುಖ್ಯಮಂತ್ರಿ ಹೇಳಿದರು.

‘ಮುಂದಿನ ಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸುವ ಸಾಧ್ಯತೆಯು ಬಿಜೆಪಿಯ ಸಂಪೂರ್ಣ ಕಲ್ಪನೆಯಾಗಿದೆ. ಅವರಿಗೆ ಅಧಿಕಾರ ಹಸ್ತಾಂತರಿಸುವ ಊಹಾಪೋಹಗಳು ಸುಳ್ಳು ನಿರೂಪಣೆಯನ್ನು ನಿರ್ಮಿಸಲು ಬಿಜೆಪಿ ಹೆಣೆದ ಬಟ್ಟೆಯಾಗಿದೆ’ ಎಂದು ಹೇಮಂತ್ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...