Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

ಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಮತ್ತು ಹಣ ವರ್ಗಾವಣೆ ತನಿಖೆಯ ಭಾಗವಾಗಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ಬುಧವಾರ ಬೆಳಗ್ಗೆ ರಾಂಚಿಯಲ್ಲಿ ದಾಳಿ ನಡೆಸಿದೆ.

ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರಿಗೆ 7ನೇ ಸಮನ್ಸ್ ಕಳುಹಿಸಲಾಗಿದ್ದು, ವಿಚಾರಣೆಗೆ ದಿನಾಂಕ, ಸಮಯ ಮತ್ತು ಸ್ಥಳವನ್ನು ನಿರ್ಧರಿಸುವಂತೆ ಇಡಿ ಕೇಳಿದೆ. ಎರಡು ದಿನಗಳ ನಂತರ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಅವರು, ‘ಇಡಿ ಪಕ್ಷಪಾತದ ತನಿಖೆ ನಡೆಸುತ್ತಿದೆ’ ಎಂದು ಹೇಳಿದ್ದರು.

‘ಹೇಮಂತ್ ಸೊರೇನ್‌ಗೆ ಇದು ಕೊನೆಯ ಅವಕಾಶ’ ಎಂದು ಇಡಿ ಹೇಳಿದೆ. ‘ನಿಮಗೆ ನೀಡಿದ ಸಮನ್ಸ್‌ಗೆ ವಿಧೇಯನಾಗಿ ನೀವು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲವಾದ್ದರಿಂದ, 2002ರ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ನಿಮ್ಮ ಹೇಳಿಕೆಯನ್ನು ಸ್ಥಳದಲ್ಲಿ ದಾಖಲಿಸಲು ನಾವು ನಿಮಗೆ ಈ ಕೊನೆಯ ಅವಕಾಶವನ್ನು ನೀಡುತ್ತೇವೆ. ನಿಮಗೆ ಅನುಕೂಲಕರವಾಗುವ ದಿನಾಂಕ ಮತ್ತು ಸಮಯದ ಬಗ್ಗೆ ಬರೆದು, ಸಮನ್ಸ್‌ಗಳನ್ನು ಸ್ವೀಕರಿಸಿದ 7 ದಿನಗಳ ಒಳಗೆ ಕಳುಹಿಸಬೇಕು’ ಎಂದು ತನ್ನ 7ನೇ ಸಮನ್ಸ್‌ನಲ್ಲಿ ತಿಳಿಸಿದೆ.

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೊರೇನ್‌ಗೆ ಇಡಿ ಮೊದಲ ಬಾರಿಗೆ ಆಗಸ್ಟ್ ಮಧ್ಯದಲ್ಲಿ ಸಮನ್ಸ್ ನೀಡಿತ್ತು. ಆಗಸ್ಟ್ 24 ಮತ್ತು ಸೆಪ್ಟೆಂಬರ್ 9 ರಂದು ಹಾಜರಾಗುವಂತೆ ಅವರನ್ನು ಮತ್ತೆ ಕೇಳಲಾಯಿತು. ಮುಂದಿನ ಸಮನ್ಸ್ ಸೆಪ್ಟೆಂಬರ್ 23, ಅಕ್ಟೋಬರ್ 4 ಮತ್ತು ಡಿಸೆಂಬರ್ 12 ರಂದು ನೀಡಲಾಗಿದೆ.

ಹೇಮಂತ್ ಸೋರೆನ್ ಪತ್ನಿ ಕಲ್ಪನಾ ಮುಂದಿನ ಮುಖ್ಯಮಂತ್ರಿ?

ಹೇಮಂತ್ ಪತ್ನಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲು ಜಾರ್ಖಂಡ್ ಮುಕ್ತಿ ಮೋರ್ಚಾದೊಳಗೆ ಸಿದ್ಧತೆ ನಡೆದಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ‘ಈ ಊಹಾಪೋಹಗಳಲ್ಲಿ ಸ್ವಲ್ಪವೂ ಸತ್ಯವಿಲ್ಲ. ಬಿಜೆಪಿಯ ಕಲ್ಪನೆಯ ಫಲಿತಾಂಶ’ ಎಂದು ಮುಖ್ಯಮಂತ್ರಿ ಹೇಳಿದರು.

‘ಮುಂದಿನ ಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸುವ ಸಾಧ್ಯತೆಯು ಬಿಜೆಪಿಯ ಸಂಪೂರ್ಣ ಕಲ್ಪನೆಯಾಗಿದೆ. ಅವರಿಗೆ ಅಧಿಕಾರ ಹಸ್ತಾಂತರಿಸುವ ಊಹಾಪೋಹಗಳು ಸುಳ್ಳು ನಿರೂಪಣೆಯನ್ನು ನಿರ್ಮಿಸಲು ಬಿಜೆಪಿ ಹೆಣೆದ ಬಟ್ಟೆಯಾಗಿದೆ’ ಎಂದು ಹೇಮಂತ್ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...