Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

ಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಮತ್ತು ಹಣ ವರ್ಗಾವಣೆ ತನಿಖೆಯ ಭಾಗವಾಗಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ಬುಧವಾರ ಬೆಳಗ್ಗೆ ರಾಂಚಿಯಲ್ಲಿ ದಾಳಿ ನಡೆಸಿದೆ.

ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರಿಗೆ 7ನೇ ಸಮನ್ಸ್ ಕಳುಹಿಸಲಾಗಿದ್ದು, ವಿಚಾರಣೆಗೆ ದಿನಾಂಕ, ಸಮಯ ಮತ್ತು ಸ್ಥಳವನ್ನು ನಿರ್ಧರಿಸುವಂತೆ ಇಡಿ ಕೇಳಿದೆ. ಎರಡು ದಿನಗಳ ನಂತರ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಅವರು, ‘ಇಡಿ ಪಕ್ಷಪಾತದ ತನಿಖೆ ನಡೆಸುತ್ತಿದೆ’ ಎಂದು ಹೇಳಿದ್ದರು.

‘ಹೇಮಂತ್ ಸೊರೇನ್‌ಗೆ ಇದು ಕೊನೆಯ ಅವಕಾಶ’ ಎಂದು ಇಡಿ ಹೇಳಿದೆ. ‘ನಿಮಗೆ ನೀಡಿದ ಸಮನ್ಸ್‌ಗೆ ವಿಧೇಯನಾಗಿ ನೀವು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲವಾದ್ದರಿಂದ, 2002ರ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ನಿಮ್ಮ ಹೇಳಿಕೆಯನ್ನು ಸ್ಥಳದಲ್ಲಿ ದಾಖಲಿಸಲು ನಾವು ನಿಮಗೆ ಈ ಕೊನೆಯ ಅವಕಾಶವನ್ನು ನೀಡುತ್ತೇವೆ. ನಿಮಗೆ ಅನುಕೂಲಕರವಾಗುವ ದಿನಾಂಕ ಮತ್ತು ಸಮಯದ ಬಗ್ಗೆ ಬರೆದು, ಸಮನ್ಸ್‌ಗಳನ್ನು ಸ್ವೀಕರಿಸಿದ 7 ದಿನಗಳ ಒಳಗೆ ಕಳುಹಿಸಬೇಕು’ ಎಂದು ತನ್ನ 7ನೇ ಸಮನ್ಸ್‌ನಲ್ಲಿ ತಿಳಿಸಿದೆ.

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೊರೇನ್‌ಗೆ ಇಡಿ ಮೊದಲ ಬಾರಿಗೆ ಆಗಸ್ಟ್ ಮಧ್ಯದಲ್ಲಿ ಸಮನ್ಸ್ ನೀಡಿತ್ತು. ಆಗಸ್ಟ್ 24 ಮತ್ತು ಸೆಪ್ಟೆಂಬರ್ 9 ರಂದು ಹಾಜರಾಗುವಂತೆ ಅವರನ್ನು ಮತ್ತೆ ಕೇಳಲಾಯಿತು. ಮುಂದಿನ ಸಮನ್ಸ್ ಸೆಪ್ಟೆಂಬರ್ 23, ಅಕ್ಟೋಬರ್ 4 ಮತ್ತು ಡಿಸೆಂಬರ್ 12 ರಂದು ನೀಡಲಾಗಿದೆ.

ಹೇಮಂತ್ ಸೋರೆನ್ ಪತ್ನಿ ಕಲ್ಪನಾ ಮುಂದಿನ ಮುಖ್ಯಮಂತ್ರಿ?

ಹೇಮಂತ್ ಪತ್ನಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲು ಜಾರ್ಖಂಡ್ ಮುಕ್ತಿ ಮೋರ್ಚಾದೊಳಗೆ ಸಿದ್ಧತೆ ನಡೆದಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ‘ಈ ಊಹಾಪೋಹಗಳಲ್ಲಿ ಸ್ವಲ್ಪವೂ ಸತ್ಯವಿಲ್ಲ. ಬಿಜೆಪಿಯ ಕಲ್ಪನೆಯ ಫಲಿತಾಂಶ’ ಎಂದು ಮುಖ್ಯಮಂತ್ರಿ ಹೇಳಿದರು.

‘ಮುಂದಿನ ಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸುವ ಸಾಧ್ಯತೆಯು ಬಿಜೆಪಿಯ ಸಂಪೂರ್ಣ ಕಲ್ಪನೆಯಾಗಿದೆ. ಅವರಿಗೆ ಅಧಿಕಾರ ಹಸ್ತಾಂತರಿಸುವ ಊಹಾಪೋಹಗಳು ಸುಳ್ಳು ನಿರೂಪಣೆಯನ್ನು ನಿರ್ಮಿಸಲು ಬಿಜೆಪಿ ಹೆಣೆದ ಬಟ್ಟೆಯಾಗಿದೆ’ ಎಂದು ಹೇಮಂತ್ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...