Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

ಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೊರೇನ್ ಆಪ್ತರ ಮೇಲೆ ಇಡಿ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಮತ್ತು ಹಣ ವರ್ಗಾವಣೆ ತನಿಖೆಯ ಭಾಗವಾಗಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ಬುಧವಾರ ಬೆಳಗ್ಗೆ ರಾಂಚಿಯಲ್ಲಿ ದಾಳಿ ನಡೆಸಿದೆ.

ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರಿಗೆ 7ನೇ ಸಮನ್ಸ್ ಕಳುಹಿಸಲಾಗಿದ್ದು, ವಿಚಾರಣೆಗೆ ದಿನಾಂಕ, ಸಮಯ ಮತ್ತು ಸ್ಥಳವನ್ನು ನಿರ್ಧರಿಸುವಂತೆ ಇಡಿ ಕೇಳಿದೆ. ಎರಡು ದಿನಗಳ ನಂತರ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಅವರು, ‘ಇಡಿ ಪಕ್ಷಪಾತದ ತನಿಖೆ ನಡೆಸುತ್ತಿದೆ’ ಎಂದು ಹೇಳಿದ್ದರು.

‘ಹೇಮಂತ್ ಸೊರೇನ್‌ಗೆ ಇದು ಕೊನೆಯ ಅವಕಾಶ’ ಎಂದು ಇಡಿ ಹೇಳಿದೆ. ‘ನಿಮಗೆ ನೀಡಿದ ಸಮನ್ಸ್‌ಗೆ ವಿಧೇಯನಾಗಿ ನೀವು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲವಾದ್ದರಿಂದ, 2002ರ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ನಿಮ್ಮ ಹೇಳಿಕೆಯನ್ನು ಸ್ಥಳದಲ್ಲಿ ದಾಖಲಿಸಲು ನಾವು ನಿಮಗೆ ಈ ಕೊನೆಯ ಅವಕಾಶವನ್ನು ನೀಡುತ್ತೇವೆ. ನಿಮಗೆ ಅನುಕೂಲಕರವಾಗುವ ದಿನಾಂಕ ಮತ್ತು ಸಮಯದ ಬಗ್ಗೆ ಬರೆದು, ಸಮನ್ಸ್‌ಗಳನ್ನು ಸ್ವೀಕರಿಸಿದ 7 ದಿನಗಳ ಒಳಗೆ ಕಳುಹಿಸಬೇಕು’ ಎಂದು ತನ್ನ 7ನೇ ಸಮನ್ಸ್‌ನಲ್ಲಿ ತಿಳಿಸಿದೆ.

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೊರೇನ್‌ಗೆ ಇಡಿ ಮೊದಲ ಬಾರಿಗೆ ಆಗಸ್ಟ್ ಮಧ್ಯದಲ್ಲಿ ಸಮನ್ಸ್ ನೀಡಿತ್ತು. ಆಗಸ್ಟ್ 24 ಮತ್ತು ಸೆಪ್ಟೆಂಬರ್ 9 ರಂದು ಹಾಜರಾಗುವಂತೆ ಅವರನ್ನು ಮತ್ತೆ ಕೇಳಲಾಯಿತು. ಮುಂದಿನ ಸಮನ್ಸ್ ಸೆಪ್ಟೆಂಬರ್ 23, ಅಕ್ಟೋಬರ್ 4 ಮತ್ತು ಡಿಸೆಂಬರ್ 12 ರಂದು ನೀಡಲಾಗಿದೆ.

ಹೇಮಂತ್ ಸೋರೆನ್ ಪತ್ನಿ ಕಲ್ಪನಾ ಮುಂದಿನ ಮುಖ್ಯಮಂತ್ರಿ?

ಹೇಮಂತ್ ಪತ್ನಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲು ಜಾರ್ಖಂಡ್ ಮುಕ್ತಿ ಮೋರ್ಚಾದೊಳಗೆ ಸಿದ್ಧತೆ ನಡೆದಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ‘ಈ ಊಹಾಪೋಹಗಳಲ್ಲಿ ಸ್ವಲ್ಪವೂ ಸತ್ಯವಿಲ್ಲ. ಬಿಜೆಪಿಯ ಕಲ್ಪನೆಯ ಫಲಿತಾಂಶ’ ಎಂದು ಮುಖ್ಯಮಂತ್ರಿ ಹೇಳಿದರು.

‘ಮುಂದಿನ ಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸುವ ಸಾಧ್ಯತೆಯು ಬಿಜೆಪಿಯ ಸಂಪೂರ್ಣ ಕಲ್ಪನೆಯಾಗಿದೆ. ಅವರಿಗೆ ಅಧಿಕಾರ ಹಸ್ತಾಂತರಿಸುವ ಊಹಾಪೋಹಗಳು ಸುಳ್ಳು ನಿರೂಪಣೆಯನ್ನು ನಿರ್ಮಿಸಲು ಬಿಜೆಪಿ ಹೆಣೆದ ಬಟ್ಟೆಯಾಗಿದೆ’ ಎಂದು ಹೇಮಂತ್ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...