Homeಮುಖಪುಟಅಕ್ರಮ ಗಣಿಗಾರಿಕೆ ಪ್ರಕರಣ| ವಶಪಡಿಸಿಕೊಂಡ ಚಿನ್ನ ಬಿಡುಗಡೆಗೆ ಜನಾರ್ದನ ರೆಡ್ಡಿ ಮನವಿ; ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ

ಅಕ್ರಮ ಗಣಿಗಾರಿಕೆ ಪ್ರಕರಣ| ವಶಪಡಿಸಿಕೊಂಡ ಚಿನ್ನ ಬಿಡುಗಡೆಗೆ ಜನಾರ್ದನ ರೆಡ್ಡಿ ಮನವಿ; ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ 57.89 ಕಿಲೋಗ್ರಾಂಗಳಷ್ಟು ಚಿನ್ನವನ್ನು ಬಿಡುಗಡೆ ಮಾಡುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ನಲ್ಲಿ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ.

ಹೈ ಪ್ರೊಫೈಲ್ ಗಣಿಗಾರಿಕೆ ಹಗರಣದ ತನಿಖೆಯ ಭಾಗವಾಗಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಜುಲೈ 8 ರ ಮಂಗಳವಾರ ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರ ಪೀಠ ಅರ್ಜಿ ವಿಚಾರಣೆ ನಡೆಸಿತು. ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಗೆ ಗಣಿಗಾರಿಕೆ ಗುತ್ತಿಗೆ ನೀಡುವ ಮೊದಲು ರೆಡ್ಡಿ ಮತ್ತು ಅವರ ಪತ್ನಿ ಚಿನ್ನವನ್ನು ಖರೀದಿಸಿದ್ದಾರೆ ಎಂದು ರೆಡ್ಡಿ ಪರ ವಕೀಲರು ವಾದಿಸಿದರು.

ಸಿಬಿಐ ನ್ಯಾಯಾಲಯವು ಚಿನ್ನವನ್ನು ವಶಪಡಿಸಿಕೊಳ್ಳಲು ಕಾರಣಗಳನ್ನು ನಿರ್ದಿಷ್ಟಪಡಿಸಿಲ್ಲ, ಮಧ್ಯಂತರ ಆದೇಶಗಳನ್ನು ನೀಡಲು ವಿಫಲವಾದರೆ ಅರ್ಜಿದಾರರಿಗೆ ಸರಿಪಡಿಸಲಾಗದ ನಷ್ಟವನ್ನು ಉಂಟುಮಾಡಬಹುದು ಎಂದು ವಕೀಲರು ಎಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ವಾದಿಸಾಸಿದ ಸಿಬಿಐ ವಕೀಲ ಶ್ರೀನಿವಾಸ್ ಕಪಾಟಿಯಾ, ಕೌಂಟರ್ ಅಫಿಡವಿಟ್ ಸಲ್ಲಿಸಲು ಸಮಯ ಕೋರಿದರು. ಈ ಕೋರಿಕೆಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಲಕ್ಷ್ಮಣ್, ವಿಚಾರಣೆಯನ್ನು ಜುಲೈ 23 ಕ್ಕೆ ಮುಂದೂಡಿದರು.

ಪ್ರಕರಣದಲ್ಲಿ ರೆಡ್ಡಿ ಮತ್ತು ಇತರೆ ಆರೋಪಿಗಳು ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಜೂನ್ ಆರಂಭದಲ್ಲಿ, ತೆಲಂಗಾಣ ಹೈಕೋರ್ಟ್ ರೆಡ್ಡಿಗೆ ಜಾಮೀನು ನೀಡಿತು. ಸಿಬಿಐ ವಿಶೇಷ ನ್ಯಾಯಾಲಯವು ವಿಧಿಸಿದ್ದ ಅವರ ಅಪರಾಧ ಮತ್ತು ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿತು. ಅವರು ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ನಿರ್ದೇಶಿಸಿತು.

2009 ರ ಹಿಂದಿನ ಈ ಪ್ರಕರಣವು ಒಎಂಸಿಯಿಂದ ದೊಡ್ಡ ಪ್ರಮಾಣದ ಅಕ್ರಮ ಗಣಿಗಾರಿಕೆಯ ಆರೋಪಗಳ ಮೇಲೆ ಕೇಂದ್ರೀಕೃತವಾಗಿದೆ. ಅನುಮತಿ ಪಡೆದ ಪ್ರದೇಶಗಳನ್ನು ಮೀರಿ ಅನಧಿಕೃತವಾಗಿ ಕಬ್ಬಿಣದ ಅದಿರು ಗಣಿಗಾರಿಕೆ ಮಾಡಿದ್ದರಿಂದ ಸರ್ಕಾರದ ಖಜಾನೆಗೆ ಗಮನಾರ್ಹ ನಷ್ಟವಾಗಿದೆ ಎಂದು ಸಿಬಿಐ ಆರೋಪಿಸಿದೆ.

ರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...