Homeಕರ್ನಾಟಕಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

ಈಗ ನಿಗೂಢವಾಗಿ ಸಾವನ್ನಪ್ಪಿರುವ ರಾಜು ಕೂಡ ಕೊಳ್ಳೆಗಾಲ ತಾಲ್ಲೂಕಿನ ವಡ್ಡಲದೊಡ್ಡಿ ಗ್ರಾಮದಿಂದ ತನ್ನ ಸಂಬಂಧಿ ಮುನಿಯಪ್ಪನ ಜೊತೆ ಬಂದು ಚೆನ್ನಕೆರೆ ಕ್ವಾರೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದರು.

- Advertisement -
- Advertisement -

| ಸೋಮಶೇಖರ ಚಲ್ಯ |
ಸಕ್ಕರೆ ನಾಡು ಎನ್ನುವ ಹೆಗ್ಗಳಿಕೆ ಇರುವ ಮಂಡ್ಯ ಈಗೀಗ ಗುರುತಿಸಿಕೊಳ್ಳುತ್ತಿರುವುದು ಹಲವು ಕುಖ್ಯಾತ ಕಾರಣಗಳಿಂದ. ರೈತರ ಆತ್ಮಹತ್ಯೆ, ಹೆಣ್ಣು ಭ್ರೂಣ ಹತ್ಯೆ, ಮರ್ಯಾದಾ ಹತ್ಯೆ, ಜಾತಿಯಾಧಾರಿತ ದೌರ್ಜನ್ಯಗಳ ಕುಖ್ಯಾತಿಯ ಪಟ್ಟಿಯಲ್ಲಿ ಮಂಡ್ಯ ಮೊದಲ ಶ್ರೇಣಿಯಲ್ಲಿರುವುದು ಮಂಡ್ಯದ ಘನತೆಯನ್ನು ಕುಂದಿಸುತ್ತಿದೆ.

ಈ ಪಟ್ಟಿಗೆ ಇನ್ನೊಂದು ಸೇರ್ಪಡೆ, ಕಲ್ಲಿನ ಕ್ವಾರೆಗಳಲ್ಲಿ ನಿಗೂಢ ಸಾವುಗಳು. ಕೆಆರ್‍ಎಸ್ ಸುತ್ತಮುತ್ತಲಿನ ಶ್ರೀರಂಗಪಟ್ಟಣ, ಬೇಬಿ ಬೆಟ್ಟ ಮುಂತಾದ ಹಲವಾರು ಪ್ರದೇಶಗಳಲ್ಲಿ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ರಾಜಕೀಯ ಬಲ ಹಾಗೂ ತೋಳ್ಬಲಗಳಿಂದ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಇದರಿಂದಾಗಿ ಆ ಪ್ರದೇಶಗಳು ಬಳ್ಳಾರಿಯಂತಹ ಮೈನಿಂಗ್ ತಾಣಗಳಂತೆ ಕಾಣುತ್ತಿದ್ದು, ಮಂಡ್ಯದ ಮತ್ತೊಂದು ಮುಖವನ್ನು ತೆರೆದಿಟ್ಟಿದೆ. ಈ ಗಣಿಗಾರಿಕೆಗಳಿಂದಾಗಿ ಕೆಆರ್‍ಎಸ್ ಅಣೆಕಟ್ಟೆಗೂ ಅಪಾಯ ಬಂದಿದೆಯೆಂದು, ಅದರ ಉಳಿವಿಗಾಗಿ ಮೈನಿಂಗ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ.

ಇದೆಲ್ಲದರ ನಡುವೆ ಕ್ವಾರೆಗಳಲ್ಲಿ ಕೂಲಿ ಕೆಲಸ ಮಾಡುವ ಜನರ ಸಾವುಗಳು ಸರಣಿ ರೀತಿಯಲ್ಲಿ ನಡೆಯುತ್ತಲೇ ಇವೆ. ಆದರೆ ಈ ಸಾವುಗಳಿಗೆ ಕಾರಣವನ್ನು ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತ ಸೋತಿರುವುದು ಸ್ಥಳೀಯ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಜೂನ್ 20ರ ರಾತ್ರಿ ಮತ್ತೊಬ್ಬ ಕೂಲಿ ಕಾರ್ಮಿಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನಕೆರೆ ಗ್ರಾಮದ ಕ್ವಾರೆಯಲ್ಲಿ ರಾತ್ರಿ 11 ಗಂಟೆಯ ವೇಳೆಗೆ ಕಂಪ್ರೆಸರ್ ಮೂಲಕ ಕುಳಿ ತೋಡಲು ಹೋಗಿದ್ದ ಕಾರ್ಮಿಕ ರಾಜು ಸಾವನ್ನಪ್ಪಿದ್ದಾನೆ. ಹಿಂದೆ ಒಂದು ಸಾರಿ ಕಲ್ಲನ್ನು ಸಿಡಿಸಲು ತೆಗೆದಿದ್ದ ಹಳೇ ಕುಳಿಯಲ್ಲಿ ಸಿಡಿಮದ್ದು ತುಂಬಿಯೂ ಅದು ಸಿಡಿದಿರಲಿಲ್ಲ. ಈಗ ಅದೇ ಸಿಡಿಮದ್ದು ತುಂಬಿದ್ದ ಕುಳಿಯಲ್ಲಿ ಮತ್ತೆ ಕುಳಿ ತೆಗೆದು ಸಿಡಿಸಲು ಹೋಗಿದ್ದಾರೆ. ಮೊದಲೇ ತುಂಬಿದ್ದ ಸಿಡಿಮದ್ದು ಕುಳಿ ಹಾಕುತ್ತಿದ್ದಂತೆಯೇ ಸಿಡಿದು ಹೋಗಿದೆ. ಇದರಿಂದ ರಾಜು ಸಾವನ್ನಪ್ಪಿದ್ದಾನೆ, ಆತನ ಸಂಬಂಧಿ ಮುನಿಯಪ್ಪನಿಗೆ ಕೈ ಮುರಿದಿದೆ. ಆದರೆ, ಕ್ವಾರೆಯ ಮಾಲೀಕರಾದ ಮೀನಾಕ್ಷಿ, ನಂಜೇಗೌಡ ಮತ್ತು ಸಂತೋಷ್ ಕಂಪ್ರೇಸರ್ ಟ್ರ್ಯಾಕ್ಟರ್ ಮಗುಚಿ ಆತ ಸಾವಿನ್ನಪ್ಪಿದ್ದಾನೆ ಎಂದು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಪ್ರೊ.ಹುಲ್ಕೆರೆ ಮಹದೇವ ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ಮೊದಲೇನಲ್ಲ. ರಾಜ್ಯದ ಹಲವಾರು ಹಳ್ಳಿಗಳಿಂದ ಬಡಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಲುವಾಗಿ ಇಂತಹ ಉದ್ಯೋಗಗಳನ್ನು ಅರಸಿ ಬರುತ್ತಾರೆ. ಅಂತಹ ಜನರಿಗೆ ಒಂದಷ್ಟು ಮೊತ್ತದ ದುಡ್ಡು ಕೊಟ್ಟು ಇಂತಿಷ್ಟು ವರ್ಷಗಳಿಗೆ ಎಂದು ಜೀತದ ರೀತಿಯಲ್ಲಿ ದುಡಿಸಿಕೊಳ್ಳುವುದು ಕ್ವಾರೆಗಳಲ್ಲಿ ಇನ್ನು ತಪ್ಪಿಲ್ಲ. ದಾರುಣ ಬಡತನದಲ್ಲಿರುವ ಜನ ಈಗಲೂ ಜೀತದಾಳುಗಳಾಗಿ ಬಂದು ದುಡಿಯುತ್ತಿದ್ದಾರೆ.

ಇದೇ ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿಯ ಪ್ರಕರಣಗಳು ಎಲ್ಲರಿಗೂ ನೆನಪಿದ್ದೇ ಇರುತ್ತದೆ. 18 ವರ್ಷಗಳ ಹಿಂದೆ, ಹಂಗರಹಳ್ಳಿಯಲ್ಲಿ ಕಾಲಿಗೆ ಕೋಳ ತೊಡಿಸಿ ಕಾರ್ಮಿಕರು ಎಲ್ಲೂ ಹೋಗದಂತೆ ಒಂದೇ ಕಡೆ ಕಟ್ಟಿ ದುಡಿಸಲಾಗುತ್ತಿತ್ತು. ರೈತಸಂಘವು ಅದನ್ನು ಬಯಲಿಗೆ ತಂದನಂತರ ದೇಶಾದ್ಯಂತ ಸುದ್ದಿ ಆಗಿತ್ತು. ನಂತರದಲ್ಲಿ ಆ ಸಂತ್ರಸ್ತರನ್ನೇ ಹೆದರಿಸಿ, ತಮಗೆ ಸಿನೆಮಾ ಶೂಟಿಂಗ್ ಕಾರಣಕ್ಕೆ ಕೋಳ ತೊಡಿಸಲಾಗಿತ್ತೆಂದು ಸಾಕ್ಷಿ ನುಡಿಸಿದ್ದರು. ಅಂತಿಮವಾಗಿ ಕೇಸು ಬಿದ್ದುಹೋಗಿತ್ತು. ಇಷ್ಟಾದ ನಂತರ ಇದೇ ಹಂಗರಹಳ್ಳಿಯಲ್ಲಿ 2018ರ ಅಕ್ಟೋಬರ್‍ನಲ್ಲಿಯೂ ತನ್ನ ದುಡಿಮೆಯ ಲೆಕ್ಕ ಕೇಳಿದ ಕರಿಯಪ್ಪ ಮಾದರ್ ಎಂಬ ಜೀತಗಾರನನ್ನು ಕೊಂದು ನೇಣುಹಾಕಲಾಗಿತ್ತೆಂದು ಹೇಳಲು ಹಲವು ಸಾಂದರ್ಭಿಕ ಸಾಕ್ಷ್ಯಗಳಿದ್ದವು. ಆಗಲೂ ಪ್ರಕರಣ ಮುಚ್ಚಿಹೋಗದಂತೆ ಸ್ಥಳೀಯ ಹೋರಾಟಗಾರರು ಅದನ್ನು ಬೆಳಕಿಗೆ ತಂದಿದ್ದರು. ಅದೇ ಸಮಯದಲ್ಲಿ ಮದ್ದೂರಿನ ಕುದುರುಗುಂಡಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಜೀತಕ್ಕಿರಿಸಿಕೊಂಡು ದುಡಿಸಲಾಗುತ್ತಿತ್ತು. ಆಕೆ ಜೀತವನ್ನು ನಿರಾಕರಿಸಿ ಹೊರಹೋಗಿದ್ದರಿಂದ, ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವೂ ಬೆಳಕಿಗೆ ಬಂದಿತ್ತು. ಈ ಅಮಾನವೀಯ ಕೃತ್ಯಗಳ ಬಗ್ಗೆ ಪತ್ರಿಕೆಯಲ್ಲಿ ವರದಿಯನ್ನೂ ಮಾಡಿದ್ದೆವು.

ಈಗ ನಿಗೂಢವಾಗಿ ಸಾವನ್ನಪ್ಪಿರುವ ರಾಜು ಕೂಡ ಕೊಳ್ಳೆಗಾಲ ತಾಲ್ಲೂಕಿನ ವಡ್ಡಲದೊಡ್ಡಿ ಗ್ರಾಮದಿಂದ ತನ್ನ ಸಂಬಂಧಿ ಮುನಿಯಪ್ಪನ ಜೊತೆ ಬಂದು ಚೆನ್ನಕೆರೆ ಕ್ವಾರೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದರು.

ರಾತ್ರಿಯ ವೇಳೆಯಲ್ಲಿ ಸಿಡಿಮದ್ದುಗಳನ್ನು ಸಿಡಿಸುವುದರಿಂದ ರಾಜು ಮತ್ತು ಮುನಿಯಪ್ಪ ಕ್ವಾರೆಯಲ್ಲಿ ಕುಳಿ ತೆಗೆಯಲು ಬಂದಿದ್ದಾಗ ಈ ಘಟನೆ ನಡೆದಿದೆ. ಆದರೆ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಆತನ ಶವವನ್ನು ಪೊಲೀಸ್ ಮಹಜರ್ ಮಾಡುವುದಕ್ಕೂ ಮೊದಲೇ ಯಾರಿಗೂ ತಿಳಿಯದಂತೆ ಜಲ್ಲಿ ಕ್ರಷರ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಕ್ರಷರ್ ಬಳಿಗೆ ಯಾರೂ ಬಾರದಂತೆ ರಸ್ತೆಯಲ್ಲಿ ಗುಂಡಿ ತೋಡಿದ್ದಾರೆ. ಬೆಳಗ್ಗೆಯ ವೇಳೆಗೆ ಆತನ ಕುಟುಂಬಕ್ಕೆ 4.5 ಲಕ್ಷದಷ್ಟು ಹಣ ಕೊಟ್ಟು ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ. ಆ ಸಮಯಕ್ಕೆ ಘಟನೆಯ ವಿಷಯ ಅಕ್ಕ-ಪಕ್ಕದವರಿಗೆ ಗೊತ್ತಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.

ಜೂನ್ 21ರಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತಿತರ ಹಿರಿಯ ಹೋರಾಟಗಾರರಿಗೆ ವಿಷಯ ತಿಳಿದಿದೆ. ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರರನ್ನು ವಿಚಾರಿಸಿದ್ದಾರೆ. ತಹಶೀಲ್ದಾರ್ ಆ ವಿಷಯ ತಮಗೆ ತಿಳಿದೇ ಇಲ್ಲವೆಂದು ನಾನಾ ಸಬೂಬು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅರಕೆರೆ ಪೊಲೀಸರೂ ತಮಗೂ ವಿಷಯ ತಿಳಿದಿಲ್ಲವೆಂದು ಹೇಳಿದ್ದಾರೆ. ಆದರೆ ಇಂಥದೊಂದು ಘಟನೆ ನಡೆದಿದೆ, ಮಾಲೀಕರಿಗೆ ಶಿಕ್ಷೆಯಾಗಬೇಕು ಎಂದು ಹೋರಾಟಗಾರರು ಹೇಳುವಾಗ, ಆ ಮಾಲೀಕ ದಲಿತ ಜಾತಿಗೆ ಸೇರಿದವರು ಏನ್ ಮಾಡ್ತಿರಾ ಎಂದು ಅರಕೆರೆ ಪೊಲೀಸ್ ಠಾಣೆಯ ಎಸ್‍ಐ ಹೇಳಿದ್ದಾರೆ. ಇದು ಪೊಲೀಸರು ಕ್ವಾರೆಯ ಮಾಲೀಕರೊಂದಿಗೆ ಸೇರಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ಮಾಡಲಾಗಿದೆ ಎಂಬುದನ್ನು ತೋರಿಸುತ್ತದೆ ಎಂಬುದು ಅವರ ಆರೋಪ. ಮೊದಲೇ ಈ ವಿಚಾರ ಗೊತ್ತಿದ್ದರೂ ಗೊತ್ತಿಲ್ಲವೆಂಬಂತೆ ನಟಿಸಿರುವುದು ಹಸಿಹಸಿಯಾಗಿ ಬಯಲಾದ ನಂತರ ಅವರು ತಬ್ಬಿಬ್ಬಾದರು ಮತ್ತು ಆಗ ಪೊಲೀಸರು ಮತ್ತು ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡೆವೆಂದು ಹೇಳಿದ್ದಾರೆ.

ನಂತರ ಸಂಜೆ 4.30ರ ವೇಳೆಗೆ ಮೈಸೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವವನ್ನು ತಂದಿದ್ದಾರೆ. ಅಲ್ಲಿಯವರೆಗೂ ಶವ ಎಲ್ಲಿತ್ತು ಎಂಬ ಸುಳಿವೇ ಸಿಕ್ಕಿಲ್ಲ, ಮಹಜರ್ ಸಹಾ ಮಾಡಲಾಗಿಲ್ಲ. ಆಸ್ಪತ್ರೆಯಲ್ಲಿ ಎಫ್‍ಐಆರ್ ಆಗದೆ ಪೋಸ್ಟ್‍ಮಾರ್ಟಂ ಮಾಡುವುದಿಲ್ಲ ಎಂದು ಹೇಳಿದ ಮೇಲೆ ಅಪಘಾತ ಸಾವು ಎಂದು ಎಫ್‍ಐಆರ್ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಂಪ್ರೆಸರ್ ಟ್ರ್ಯಾಕ್ಟರ್ ಮೇಲಿತ್ತು, ನಾವು ಹೋಗುವ ಸಮಯದಲ್ಲಿ ಅದು ಉರುಳಿಬಿತ್ತು ಎಂದು ಮುನಿಯಪ್ಪ ಹೇಳಿಕೆ ನೀಡಿದ್ದಾನೆ. ಆದರೆ ಈ ಹೇಳಿಕೆಯು ಮಾಲೀಕರ ಮೇಲಿನ ಭಯದಿಂದ ಬಂದಿದೆ ಎಂದು ಹೋರಾಟಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಹಜರು ಮಾಡದೆ ಮತ್ತು ಎಫ್‍ಐಆರ್ ಹಾಕದೆ ಶವವನ್ನು ಮರಣೋತ್ತರ ಪರೀಕ್ಷೆಗೆ ತಂದಿದ್ದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಹಜರ್ ಮಾಡದೇ ಶವವನ್ನ ತೆಗೆದಿದ್ದು ಯಾಕೆ? ಯಾರು ಆ ಸ್ಥಳಕ್ಕೆ ಬಾರದಂತೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು ಯಾಕೆ? ಎಫ್‍ಐಆರ್ ದಾಖಲಿಸದೇ ಪೋಸ್ಟ್ ಮಾರ್ಟಮ್‍ಗೆ ತೆಗೆದುಕೊಂಡು ಹೋಗಿದ್ದಾರೆ, ಅಲ್ಲಿಯವರೆಗೆ ಶವ ಎಲ್ಲಿತ್ತು? ಶವವನ್ನು ಬಚ್ಚಿಟ್ಟಿದ್ದು ಯಾಕೆ? ಇಷ್ಟೆಲ್ಲಾ ಆದರೂ ಪೊಲೀಸರು ಮಾಲೀಕರ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಯಾಕೆ? ಇವೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇನ್ನೂ ಪೋಸ್ಟ್‍ಮಾರ್ಟಂ ರಿಪೋರ್ಟ್ ಬಹಿರಂಗಗೊಂಡಿಲ್ಲ.

ಈಗಲಾದರೂ ಇದನ್ನೊಂದು ಪ್ರತ್ಯೇಕ ಆಕಸ್ಮಿಕ ಘಟನೆ ಎಂದು ನೋಡದೇ, ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ, ಅಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ರೀತಿ, ನಿಗೂಢ ಸಾವುಗಳು ಇದರ ಕುರಿತಂತೆ ಸಮಗ್ರ ತನಿಖೆ ಹಾಗೂ ಕ್ರಮಗಳು ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...