Homeಮುಖಪುಟಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

ಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಸಂಬಂಧದ ಮನಿ ಲಾಂಡರಿಂಗ್ ತನಿಖೆಯಲ್ಲಿ ಹರಿಯಾಣದ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಾಯಕ ಕುಲ್ವಿಂದರ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾರಿ ನಿರ್ದೇಶನಾಲಯವು ಯಮುನಾ ನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್‌ಡಿ)ದ ಮಾಜಿ ಶಾಸಕ ಸಿಂಗ್, ಸೋನಿಪತ್‌ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ಜನವರಿ 4ರಂದು ದಾಳಿ ನಡೆಸಿತ್ತು. ಐದು ದಿನಗಳ ತೀವ್ರ ಹುಡುಕಾಟದ ನಂತರ ಸೋಮವಾರದಂದು ಪರಿಶೀಲನೆ ಕೊನೆಗೊಂಡಿದೆ.

ಸುಮಾರು 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹರ್ಯಾಣದ ಮಾಜಿ ಶಾಸಕ ಮತ್ತು ಅವರ ಸಹಾಯಕರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಗಾಗಿ ತನಿಖಾ ಸಂಸ್ಥೆಯು ಮತ್ತಷ್ಟು ದಿನಗಳ ಕಾಲ ವಶಕ್ಕೆ ಕೋರಲಿದೆ ಎನ್ನಲಾಗಿದೆ.

ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪ್ರಕರಣವನ್ನೂ ದಾಖಲಿಸಲಾಗಿದ್ದು, ಕನಿಷ್ಠ ಐದು “ಅಕ್ರಮ” ರೈಫಲ್‌ಗಳು, 300 ಬುಲೆಟ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳು, 100ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, ₹5 ಕೋಟಿ ನಗದನ್ನು ದಿಲ್ಬಾಗ್ ಸಿಂಗ್ ಮತ್ತು ಅವರಿಗೆ ಸಂಬಂಧಿತ ವ್ಯಕ್ತಿಗಳ ಜಾಗಗಳಿಂದ ಇಡಿ ವಶಪಡಿಸಿಕೊಂಡಿದೆ. ಕೇಂದ್ರ ತನಿಖಾ ಸಂಸ್ಥೆಯು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪರವಾನಗಿ ಅವಧಿ ಮುಗಿದಿರುವುದರಿಂದ, ತನಿಖಾ ಸಂಸ್ಥೆಯು ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿದ್ದಕ್ಕಾಗಿ ಮತ್ತೊಂದು ಪೊಲೀಸ್ ದೂರು ದಾಖಲಿಸಿದ ಇಡಿ, ಹರಿಯಾಣ ಅಬಕಾರಿ ಇಲಾಖೆಯೊಂದಿಗೆ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಯಮುನಾ ನಗರ ಜಿಲ್ಲೆಯ ರಾಯನ್ವಾಲಾ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ವೈನ್ ಬಾಕ್ಸ್ ಮತ್ತು ಬಾಟಲಿಗಳು ಪತ್ತೆಯಾಗಿವೆ.

ಗುತ್ತಿಗೆ ಅವಧಿ ಮುಗಿದ ನಂತರವೂ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಈ ಹಿಂದೆ ನಡೆದಿರುವ ಬಂಡೆಗಳು, ಜಲ್ಲಿಕಲ್ಲು, ಅಕ್ರಮ ಮರಳು ಗಣಿಗಾರಿಕೆ ಆರೋಪದ ಮೇಲೆ ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿದ ಹಲವಾರು ಎಫ್ಐಆರ್‌ಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಬೆಳಕಿಗೆ ಬಂದಿದೆ. ರಾಯಲ್ಟಿ ಮತ್ತು ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು, ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020 ರಲ್ಲಿ ಪರಿಚಯಿಸಿದ ಆನ್ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಲ್ಲಿನ ವಂಚನೆಯನ್ನು ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ.

ಇಬ್ಬರು ರಾಜಕಾರಣಿಗಳೊಂದಿಗೆ ಸಂಬಂಧ ಹೊಂದಿರುವ ‘ಸಿಂಡಿಕೇಟ್’ ಗುಂಪು ಈ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಮೂಲಗಳು ಹೇಳಿವೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...