Homeಮುಖಪುಟಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

ಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಸಂಬಂಧದ ಮನಿ ಲಾಂಡರಿಂಗ್ ತನಿಖೆಯಲ್ಲಿ ಹರಿಯಾಣದ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಾಯಕ ಕುಲ್ವಿಂದರ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾರಿ ನಿರ್ದೇಶನಾಲಯವು ಯಮುನಾ ನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್‌ಡಿ)ದ ಮಾಜಿ ಶಾಸಕ ಸಿಂಗ್, ಸೋನಿಪತ್‌ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ಜನವರಿ 4ರಂದು ದಾಳಿ ನಡೆಸಿತ್ತು. ಐದು ದಿನಗಳ ತೀವ್ರ ಹುಡುಕಾಟದ ನಂತರ ಸೋಮವಾರದಂದು ಪರಿಶೀಲನೆ ಕೊನೆಗೊಂಡಿದೆ.

ಸುಮಾರು 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹರ್ಯಾಣದ ಮಾಜಿ ಶಾಸಕ ಮತ್ತು ಅವರ ಸಹಾಯಕರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಗಾಗಿ ತನಿಖಾ ಸಂಸ್ಥೆಯು ಮತ್ತಷ್ಟು ದಿನಗಳ ಕಾಲ ವಶಕ್ಕೆ ಕೋರಲಿದೆ ಎನ್ನಲಾಗಿದೆ.

ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪ್ರಕರಣವನ್ನೂ ದಾಖಲಿಸಲಾಗಿದ್ದು, ಕನಿಷ್ಠ ಐದು “ಅಕ್ರಮ” ರೈಫಲ್‌ಗಳು, 300 ಬುಲೆಟ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳು, 100ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, ₹5 ಕೋಟಿ ನಗದನ್ನು ದಿಲ್ಬಾಗ್ ಸಿಂಗ್ ಮತ್ತು ಅವರಿಗೆ ಸಂಬಂಧಿತ ವ್ಯಕ್ತಿಗಳ ಜಾಗಗಳಿಂದ ಇಡಿ ವಶಪಡಿಸಿಕೊಂಡಿದೆ. ಕೇಂದ್ರ ತನಿಖಾ ಸಂಸ್ಥೆಯು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪರವಾನಗಿ ಅವಧಿ ಮುಗಿದಿರುವುದರಿಂದ, ತನಿಖಾ ಸಂಸ್ಥೆಯು ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿದ್ದಕ್ಕಾಗಿ ಮತ್ತೊಂದು ಪೊಲೀಸ್ ದೂರು ದಾಖಲಿಸಿದ ಇಡಿ, ಹರಿಯಾಣ ಅಬಕಾರಿ ಇಲಾಖೆಯೊಂದಿಗೆ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಯಮುನಾ ನಗರ ಜಿಲ್ಲೆಯ ರಾಯನ್ವಾಲಾ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ವೈನ್ ಬಾಕ್ಸ್ ಮತ್ತು ಬಾಟಲಿಗಳು ಪತ್ತೆಯಾಗಿವೆ.

ಗುತ್ತಿಗೆ ಅವಧಿ ಮುಗಿದ ನಂತರವೂ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಈ ಹಿಂದೆ ನಡೆದಿರುವ ಬಂಡೆಗಳು, ಜಲ್ಲಿಕಲ್ಲು, ಅಕ್ರಮ ಮರಳು ಗಣಿಗಾರಿಕೆ ಆರೋಪದ ಮೇಲೆ ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿದ ಹಲವಾರು ಎಫ್ಐಆರ್‌ಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಬೆಳಕಿಗೆ ಬಂದಿದೆ. ರಾಯಲ್ಟಿ ಮತ್ತು ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು, ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020 ರಲ್ಲಿ ಪರಿಚಯಿಸಿದ ಆನ್ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಲ್ಲಿನ ವಂಚನೆಯನ್ನು ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ.

ಇಬ್ಬರು ರಾಜಕಾರಣಿಗಳೊಂದಿಗೆ ಸಂಬಂಧ ಹೊಂದಿರುವ ‘ಸಿಂಡಿಕೇಟ್’ ಗುಂಪು ಈ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಮೂಲಗಳು ಹೇಳಿವೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...