Homeಮುಖಪುಟಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

ಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಸಂಬಂಧದ ಮನಿ ಲಾಂಡರಿಂಗ್ ತನಿಖೆಯಲ್ಲಿ ಹರಿಯಾಣದ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಾಯಕ ಕುಲ್ವಿಂದರ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾರಿ ನಿರ್ದೇಶನಾಲಯವು ಯಮುನಾ ನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್‌ಡಿ)ದ ಮಾಜಿ ಶಾಸಕ ಸಿಂಗ್, ಸೋನಿಪತ್‌ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ಜನವರಿ 4ರಂದು ದಾಳಿ ನಡೆಸಿತ್ತು. ಐದು ದಿನಗಳ ತೀವ್ರ ಹುಡುಕಾಟದ ನಂತರ ಸೋಮವಾರದಂದು ಪರಿಶೀಲನೆ ಕೊನೆಗೊಂಡಿದೆ.

ಸುಮಾರು 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹರ್ಯಾಣದ ಮಾಜಿ ಶಾಸಕ ಮತ್ತು ಅವರ ಸಹಾಯಕರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಗಾಗಿ ತನಿಖಾ ಸಂಸ್ಥೆಯು ಮತ್ತಷ್ಟು ದಿನಗಳ ಕಾಲ ವಶಕ್ಕೆ ಕೋರಲಿದೆ ಎನ್ನಲಾಗಿದೆ.

ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪ್ರಕರಣವನ್ನೂ ದಾಖಲಿಸಲಾಗಿದ್ದು, ಕನಿಷ್ಠ ಐದು “ಅಕ್ರಮ” ರೈಫಲ್‌ಗಳು, 300 ಬುಲೆಟ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳು, 100ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, ₹5 ಕೋಟಿ ನಗದನ್ನು ದಿಲ್ಬಾಗ್ ಸಿಂಗ್ ಮತ್ತು ಅವರಿಗೆ ಸಂಬಂಧಿತ ವ್ಯಕ್ತಿಗಳ ಜಾಗಗಳಿಂದ ಇಡಿ ವಶಪಡಿಸಿಕೊಂಡಿದೆ. ಕೇಂದ್ರ ತನಿಖಾ ಸಂಸ್ಥೆಯು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪರವಾನಗಿ ಅವಧಿ ಮುಗಿದಿರುವುದರಿಂದ, ತನಿಖಾ ಸಂಸ್ಥೆಯು ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿದ್ದಕ್ಕಾಗಿ ಮತ್ತೊಂದು ಪೊಲೀಸ್ ದೂರು ದಾಖಲಿಸಿದ ಇಡಿ, ಹರಿಯಾಣ ಅಬಕಾರಿ ಇಲಾಖೆಯೊಂದಿಗೆ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಯಮುನಾ ನಗರ ಜಿಲ್ಲೆಯ ರಾಯನ್ವಾಲಾ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ವೈನ್ ಬಾಕ್ಸ್ ಮತ್ತು ಬಾಟಲಿಗಳು ಪತ್ತೆಯಾಗಿವೆ.

ಗುತ್ತಿಗೆ ಅವಧಿ ಮುಗಿದ ನಂತರವೂ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಈ ಹಿಂದೆ ನಡೆದಿರುವ ಬಂಡೆಗಳು, ಜಲ್ಲಿಕಲ್ಲು, ಅಕ್ರಮ ಮರಳು ಗಣಿಗಾರಿಕೆ ಆರೋಪದ ಮೇಲೆ ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿದ ಹಲವಾರು ಎಫ್ಐಆರ್‌ಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಬೆಳಕಿಗೆ ಬಂದಿದೆ. ರಾಯಲ್ಟಿ ಮತ್ತು ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು, ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020 ರಲ್ಲಿ ಪರಿಚಯಿಸಿದ ಆನ್ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಲ್ಲಿನ ವಂಚನೆಯನ್ನು ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ.

ಇಬ್ಬರು ರಾಜಕಾರಣಿಗಳೊಂದಿಗೆ ಸಂಬಂಧ ಹೊಂದಿರುವ ‘ಸಿಂಡಿಕೇಟ್’ ಗುಂಪು ಈ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಮೂಲಗಳು ಹೇಳಿವೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...