Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ "ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ, ರಾಜ್ಯದ ವಿರೋಧ ಪಕ್ಷಗಳ ಮುಖಂಡರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರುಗಳ ಅಕ್ರಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ಗುಪ್ತಚರ ಅಧಿಕಾರಿಗಳು ಅಕ್ರಮವಾಗಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಭಾನುವಾರ ಆರೋಪಿಸಿದ ನಂತರ ಈ ಪತ್ರ ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಸಿಪಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿರುವ ಚಂದ್ರಬಾಬು ನಾಯ್ಡು, ತನ್ನದೇ ಆದ ರಾಜಕೀಯ ಲಾಭಕ್ಕಾಗಿ, ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದಿದ್ದಾರೆ.

ಇಂಡಿಯನ್ ಟೆಲಿಗ್ರಾಫ್ ಆಕ್ಟ್, 1885 ರ ಸೆಕ್ಷನ್ 5 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಅನ್ನು ಉಲ್ಲೇಖಿಸಿ ನಾಯ್ಡು ಪತ್ರ ಬರೆದಿದ್ದು, ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಂತಹ ಪ್ರಕರಣಗಳಲ್ಲಿ ಮಾತ್ರ ಫೋನ್ ಟ್ಯಾಪಿಂಗ್ ಮಾಡಲು ಕಾನೂನು ಅನುಮತಿಸುತ್ತದೆ. ಆದರೆ ಈ ಸರ್ಕಾರ ಸಂವಿಧಾನದ 19 ಮತ್ತು 21ರ ವಿಧಿಯನ್ವಯ ಮೂಲಭೂತ ಹಕ್ಕುಗಳ ವಿರುದ್ಧವಾಗಿದ್ದು, ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸರ್ಕಾರದ ಅಸಮರ್ಪಕ ಕಾರ್ಯದ ವಿರುದ್ಧ ಧ್ವನಿ ಎತ್ತುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಅವರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರಲ್ಲದೆ, ವೈಎಸ್‌ಆರ್‌ಸಿಪಿ ಈಗ ನ್ಯಾಯಾಂಗವನ್ನು ಸಹ ಗುರಿಯಾಗಿಸಿಕೊಂಡಿದೆ ಎಂದು ತೋರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಾಧನಗಳನ್ನು ಬಳಸಿಕೊಂಡು ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ “ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಅವರು ತಿಳಿಸಿದ್ದಾರೆ.

“ಆಂಧ್ರಪ್ರದೇಶದ ಆಡಳಿತ ಪಕ್ಷ ಮತ್ತು ಖಾಸಗಿ ವ್ಯಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು (ಫೋನ್ ಟ್ಯಾಪಿಂಗ್) ಪರಿಶೀಲಿಸಲು ತಕ್ಷಣದ ಮತ್ತು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು” ಎಂದು ನಾಯ್ಡು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಅವರು ಕೇಂದ್ರ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ‘ರೊಮೇನಿಯಾ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್, ದಕ್ಷಿಣ ಕೊರಿಯಾ ಮತ್ತು ಸ್ಪೇನ್ ಸಂಕೇತಗಳನ್ನು ಪ್ರದರ್ಶಿಸುವ ವಿಚಿತ್ರ ಸಂಖ್ಯೆಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯ ಗುಪ್ತಚರ ಇಲಾಖೆ ನನ್ನ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದು ನನಗೆ ಗೊತ್ತಾಗಿದೆ. ಇದು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದರು.

ತಾವು ಸದಸ್ಯರಾಗಿರುವ ವಿವಿಧ ಸಂಸದೀಯ ಸಮಿತಿಗಳನ್ನು ಉಲ್ಲೇಖಿಸಿದ ರಾಜು, ಸಹೋದ್ಯೋಗಿ ಸಂಸದರು ಮತ್ತು ಸಂಸತ್ತಿನ ಸಿಬ್ಬಂದಿಯೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಗೌಪ್ಯ ಮತ್ತು ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಚರ್ಚಿಸಲಾಗುವುದು. ಅಂತಹ ಗೌಪ್ಯ ಮಾಹಿತಿಯ ಯಾವುದೇ ಸೋರಿಕೆ, ನನ್ನ ಕರ್ತವ್ಯಗಳು ಮತ್ತು ಕಟ್ಟುಪಾಡುಗಳ ಕಾರ್ಯಕ್ಷಮತೆಗೆ ಗಂಭೀರ ಅಡಚಣೆಯಾಗುವುದಲ್ಲದೆ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಬಹುದು ಎಂದೂ ಹೇಳಿದ್ದಾರೆ.


ಇದನ್ನು ಓದಿ: ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...