Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ "ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ, ರಾಜ್ಯದ ವಿರೋಧ ಪಕ್ಷಗಳ ಮುಖಂಡರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರುಗಳ ಅಕ್ರಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ಗುಪ್ತಚರ ಅಧಿಕಾರಿಗಳು ಅಕ್ರಮವಾಗಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಭಾನುವಾರ ಆರೋಪಿಸಿದ ನಂತರ ಈ ಪತ್ರ ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಸಿಪಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿರುವ ಚಂದ್ರಬಾಬು ನಾಯ್ಡು, ತನ್ನದೇ ಆದ ರಾಜಕೀಯ ಲಾಭಕ್ಕಾಗಿ, ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದಿದ್ದಾರೆ.

ಇಂಡಿಯನ್ ಟೆಲಿಗ್ರಾಫ್ ಆಕ್ಟ್, 1885 ರ ಸೆಕ್ಷನ್ 5 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಅನ್ನು ಉಲ್ಲೇಖಿಸಿ ನಾಯ್ಡು ಪತ್ರ ಬರೆದಿದ್ದು, ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಂತಹ ಪ್ರಕರಣಗಳಲ್ಲಿ ಮಾತ್ರ ಫೋನ್ ಟ್ಯಾಪಿಂಗ್ ಮಾಡಲು ಕಾನೂನು ಅನುಮತಿಸುತ್ತದೆ. ಆದರೆ ಈ ಸರ್ಕಾರ ಸಂವಿಧಾನದ 19 ಮತ್ತು 21ರ ವಿಧಿಯನ್ವಯ ಮೂಲಭೂತ ಹಕ್ಕುಗಳ ವಿರುದ್ಧವಾಗಿದ್ದು, ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸರ್ಕಾರದ ಅಸಮರ್ಪಕ ಕಾರ್ಯದ ವಿರುದ್ಧ ಧ್ವನಿ ಎತ್ತುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಅವರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರಲ್ಲದೆ, ವೈಎಸ್‌ಆರ್‌ಸಿಪಿ ಈಗ ನ್ಯಾಯಾಂಗವನ್ನು ಸಹ ಗುರಿಯಾಗಿಸಿಕೊಂಡಿದೆ ಎಂದು ತೋರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಾಧನಗಳನ್ನು ಬಳಸಿಕೊಂಡು ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ “ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಅವರು ತಿಳಿಸಿದ್ದಾರೆ.

“ಆಂಧ್ರಪ್ರದೇಶದ ಆಡಳಿತ ಪಕ್ಷ ಮತ್ತು ಖಾಸಗಿ ವ್ಯಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು (ಫೋನ್ ಟ್ಯಾಪಿಂಗ್) ಪರಿಶೀಲಿಸಲು ತಕ್ಷಣದ ಮತ್ತು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು” ಎಂದು ನಾಯ್ಡು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಅವರು ಕೇಂದ್ರ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ‘ರೊಮೇನಿಯಾ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್, ದಕ್ಷಿಣ ಕೊರಿಯಾ ಮತ್ತು ಸ್ಪೇನ್ ಸಂಕೇತಗಳನ್ನು ಪ್ರದರ್ಶಿಸುವ ವಿಚಿತ್ರ ಸಂಖ್ಯೆಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯ ಗುಪ್ತಚರ ಇಲಾಖೆ ನನ್ನ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದು ನನಗೆ ಗೊತ್ತಾಗಿದೆ. ಇದು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದರು.

ತಾವು ಸದಸ್ಯರಾಗಿರುವ ವಿವಿಧ ಸಂಸದೀಯ ಸಮಿತಿಗಳನ್ನು ಉಲ್ಲೇಖಿಸಿದ ರಾಜು, ಸಹೋದ್ಯೋಗಿ ಸಂಸದರು ಮತ್ತು ಸಂಸತ್ತಿನ ಸಿಬ್ಬಂದಿಯೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಗೌಪ್ಯ ಮತ್ತು ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಚರ್ಚಿಸಲಾಗುವುದು. ಅಂತಹ ಗೌಪ್ಯ ಮಾಹಿತಿಯ ಯಾವುದೇ ಸೋರಿಕೆ, ನನ್ನ ಕರ್ತವ್ಯಗಳು ಮತ್ತು ಕಟ್ಟುಪಾಡುಗಳ ಕಾರ್ಯಕ್ಷಮತೆಗೆ ಗಂಭೀರ ಅಡಚಣೆಯಾಗುವುದಲ್ಲದೆ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಬಹುದು ಎಂದೂ ಹೇಳಿದ್ದಾರೆ.


ಇದನ್ನು ಓದಿ: ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...