Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ "ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ, ರಾಜ್ಯದ ವಿರೋಧ ಪಕ್ಷಗಳ ಮುಖಂಡರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರುಗಳ ಅಕ್ರಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ಗುಪ್ತಚರ ಅಧಿಕಾರಿಗಳು ಅಕ್ರಮವಾಗಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಭಾನುವಾರ ಆರೋಪಿಸಿದ ನಂತರ ಈ ಪತ್ರ ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಸಿಪಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿರುವ ಚಂದ್ರಬಾಬು ನಾಯ್ಡು, ತನ್ನದೇ ಆದ ರಾಜಕೀಯ ಲಾಭಕ್ಕಾಗಿ, ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದಿದ್ದಾರೆ.

ಇಂಡಿಯನ್ ಟೆಲಿಗ್ರಾಫ್ ಆಕ್ಟ್, 1885 ರ ಸೆಕ್ಷನ್ 5 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಅನ್ನು ಉಲ್ಲೇಖಿಸಿ ನಾಯ್ಡು ಪತ್ರ ಬರೆದಿದ್ದು, ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಂತಹ ಪ್ರಕರಣಗಳಲ್ಲಿ ಮಾತ್ರ ಫೋನ್ ಟ್ಯಾಪಿಂಗ್ ಮಾಡಲು ಕಾನೂನು ಅನುಮತಿಸುತ್ತದೆ. ಆದರೆ ಈ ಸರ್ಕಾರ ಸಂವಿಧಾನದ 19 ಮತ್ತು 21ರ ವಿಧಿಯನ್ವಯ ಮೂಲಭೂತ ಹಕ್ಕುಗಳ ವಿರುದ್ಧವಾಗಿದ್ದು, ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸರ್ಕಾರದ ಅಸಮರ್ಪಕ ಕಾರ್ಯದ ವಿರುದ್ಧ ಧ್ವನಿ ಎತ್ತುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಅವರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರಲ್ಲದೆ, ವೈಎಸ್‌ಆರ್‌ಸಿಪಿ ಈಗ ನ್ಯಾಯಾಂಗವನ್ನು ಸಹ ಗುರಿಯಾಗಿಸಿಕೊಂಡಿದೆ ಎಂದು ತೋರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಾಧನಗಳನ್ನು ಬಳಸಿಕೊಂಡು ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ “ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಅವರು ತಿಳಿಸಿದ್ದಾರೆ.

“ಆಂಧ್ರಪ್ರದೇಶದ ಆಡಳಿತ ಪಕ್ಷ ಮತ್ತು ಖಾಸಗಿ ವ್ಯಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು (ಫೋನ್ ಟ್ಯಾಪಿಂಗ್) ಪರಿಶೀಲಿಸಲು ತಕ್ಷಣದ ಮತ್ತು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು” ಎಂದು ನಾಯ್ಡು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಅವರು ಕೇಂದ್ರ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ‘ರೊಮೇನಿಯಾ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್, ದಕ್ಷಿಣ ಕೊರಿಯಾ ಮತ್ತು ಸ್ಪೇನ್ ಸಂಕೇತಗಳನ್ನು ಪ್ರದರ್ಶಿಸುವ ವಿಚಿತ್ರ ಸಂಖ್ಯೆಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯ ಗುಪ್ತಚರ ಇಲಾಖೆ ನನ್ನ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದು ನನಗೆ ಗೊತ್ತಾಗಿದೆ. ಇದು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದರು.

ತಾವು ಸದಸ್ಯರಾಗಿರುವ ವಿವಿಧ ಸಂಸದೀಯ ಸಮಿತಿಗಳನ್ನು ಉಲ್ಲೇಖಿಸಿದ ರಾಜು, ಸಹೋದ್ಯೋಗಿ ಸಂಸದರು ಮತ್ತು ಸಂಸತ್ತಿನ ಸಿಬ್ಬಂದಿಯೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಗೌಪ್ಯ ಮತ್ತು ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಚರ್ಚಿಸಲಾಗುವುದು. ಅಂತಹ ಗೌಪ್ಯ ಮಾಹಿತಿಯ ಯಾವುದೇ ಸೋರಿಕೆ, ನನ್ನ ಕರ್ತವ್ಯಗಳು ಮತ್ತು ಕಟ್ಟುಪಾಡುಗಳ ಕಾರ್ಯಕ್ಷಮತೆಗೆ ಗಂಭೀರ ಅಡಚಣೆಯಾಗುವುದಲ್ಲದೆ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಬಹುದು ಎಂದೂ ಹೇಳಿದ್ದಾರೆ.


ಇದನ್ನು ಓದಿ: ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...