Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ "ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ, ರಾಜ್ಯದ ವಿರೋಧ ಪಕ್ಷಗಳ ಮುಖಂಡರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರುಗಳ ಅಕ್ರಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ಗುಪ್ತಚರ ಅಧಿಕಾರಿಗಳು ಅಕ್ರಮವಾಗಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಭಾನುವಾರ ಆರೋಪಿಸಿದ ನಂತರ ಈ ಪತ್ರ ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಸಿಪಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿರುವ ಚಂದ್ರಬಾಬು ನಾಯ್ಡು, ತನ್ನದೇ ಆದ ರಾಜಕೀಯ ಲಾಭಕ್ಕಾಗಿ, ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದಿದ್ದಾರೆ.

ಇಂಡಿಯನ್ ಟೆಲಿಗ್ರಾಫ್ ಆಕ್ಟ್, 1885 ರ ಸೆಕ್ಷನ್ 5 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಅನ್ನು ಉಲ್ಲೇಖಿಸಿ ನಾಯ್ಡು ಪತ್ರ ಬರೆದಿದ್ದು, ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಂತಹ ಪ್ರಕರಣಗಳಲ್ಲಿ ಮಾತ್ರ ಫೋನ್ ಟ್ಯಾಪಿಂಗ್ ಮಾಡಲು ಕಾನೂನು ಅನುಮತಿಸುತ್ತದೆ. ಆದರೆ ಈ ಸರ್ಕಾರ ಸಂವಿಧಾನದ 19 ಮತ್ತು 21ರ ವಿಧಿಯನ್ವಯ ಮೂಲಭೂತ ಹಕ್ಕುಗಳ ವಿರುದ್ಧವಾಗಿದ್ದು, ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸರ್ಕಾರದ ಅಸಮರ್ಪಕ ಕಾರ್ಯದ ವಿರುದ್ಧ ಧ್ವನಿ ಎತ್ತುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಅವರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರಲ್ಲದೆ, ವೈಎಸ್‌ಆರ್‌ಸಿಪಿ ಈಗ ನ್ಯಾಯಾಂಗವನ್ನು ಸಹ ಗುರಿಯಾಗಿಸಿಕೊಂಡಿದೆ ಎಂದು ತೋರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಾಧನಗಳನ್ನು ಬಳಸಿಕೊಂಡು ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ “ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಅವರು ತಿಳಿಸಿದ್ದಾರೆ.

“ಆಂಧ್ರಪ್ರದೇಶದ ಆಡಳಿತ ಪಕ್ಷ ಮತ್ತು ಖಾಸಗಿ ವ್ಯಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು (ಫೋನ್ ಟ್ಯಾಪಿಂಗ್) ಪರಿಶೀಲಿಸಲು ತಕ್ಷಣದ ಮತ್ತು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು” ಎಂದು ನಾಯ್ಡು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಅವರು ಕೇಂದ್ರ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ‘ರೊಮೇನಿಯಾ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್, ದಕ್ಷಿಣ ಕೊರಿಯಾ ಮತ್ತು ಸ್ಪೇನ್ ಸಂಕೇತಗಳನ್ನು ಪ್ರದರ್ಶಿಸುವ ವಿಚಿತ್ರ ಸಂಖ್ಯೆಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯ ಗುಪ್ತಚರ ಇಲಾಖೆ ನನ್ನ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದು ನನಗೆ ಗೊತ್ತಾಗಿದೆ. ಇದು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದರು.

ತಾವು ಸದಸ್ಯರಾಗಿರುವ ವಿವಿಧ ಸಂಸದೀಯ ಸಮಿತಿಗಳನ್ನು ಉಲ್ಲೇಖಿಸಿದ ರಾಜು, ಸಹೋದ್ಯೋಗಿ ಸಂಸದರು ಮತ್ತು ಸಂಸತ್ತಿನ ಸಿಬ್ಬಂದಿಯೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಗೌಪ್ಯ ಮತ್ತು ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಚರ್ಚಿಸಲಾಗುವುದು. ಅಂತಹ ಗೌಪ್ಯ ಮಾಹಿತಿಯ ಯಾವುದೇ ಸೋರಿಕೆ, ನನ್ನ ಕರ್ತವ್ಯಗಳು ಮತ್ತು ಕಟ್ಟುಪಾಡುಗಳ ಕಾರ್ಯಕ್ಷಮತೆಗೆ ಗಂಭೀರ ಅಡಚಣೆಯಾಗುವುದಲ್ಲದೆ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಬಹುದು ಎಂದೂ ಹೇಳಿದ್ದಾರೆ.


ಇದನ್ನು ಓದಿ: ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...