Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ವೈಎಸ್‌ಆರ್‌ ಕಾಂಗ್ರೆಸ್‌ನಿಂದ ಅಕ್ರಮ ಫೋನ್ ಟ್ಯಾಪಿಂಗ್: ಮೋದಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ "ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ, ರಾಜ್ಯದ ವಿರೋಧ ಪಕ್ಷಗಳ ಮುಖಂಡರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರುಗಳ ಅಕ್ರಮ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ಗುಪ್ತಚರ ಅಧಿಕಾರಿಗಳು ಅಕ್ರಮವಾಗಿ ಟ್ಯಾಪ್ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಭಾನುವಾರ ಆರೋಪಿಸಿದ ನಂತರ ಈ ಪತ್ರ ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಸಿಪಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿರುವ ಚಂದ್ರಬಾಬು ನಾಯ್ಡು, ತನ್ನದೇ ಆದ ರಾಜಕೀಯ ಲಾಭಕ್ಕಾಗಿ, ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದಿದ್ದಾರೆ.

ಇಂಡಿಯನ್ ಟೆಲಿಗ್ರಾಫ್ ಆಕ್ಟ್, 1885 ರ ಸೆಕ್ಷನ್ 5 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಅನ್ನು ಉಲ್ಲೇಖಿಸಿ ನಾಯ್ಡು ಪತ್ರ ಬರೆದಿದ್ದು, ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಂತಹ ಪ್ರಕರಣಗಳಲ್ಲಿ ಮಾತ್ರ ಫೋನ್ ಟ್ಯಾಪಿಂಗ್ ಮಾಡಲು ಕಾನೂನು ಅನುಮತಿಸುತ್ತದೆ. ಆದರೆ ಈ ಸರ್ಕಾರ ಸಂವಿಧಾನದ 19 ಮತ್ತು 21ರ ವಿಧಿಯನ್ವಯ ಮೂಲಭೂತ ಹಕ್ಕುಗಳ ವಿರುದ್ಧವಾಗಿದ್ದು, ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಸರ್ಕಾರದ ಅಸಮರ್ಪಕ ಕಾರ್ಯದ ವಿರುದ್ಧ ಧ್ವನಿ ಎತ್ತುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಅವರು, ವಕೀಲರು, ಪತ್ರಕರ್ತರು ಮತ್ತು ಕಾರ್ಯಕರ್ತರಲ್ಲದೆ, ವೈಎಸ್‌ಆರ್‌ಸಿಪಿ ಈಗ ನ್ಯಾಯಾಂಗವನ್ನು ಸಹ ಗುರಿಯಾಗಿಸಿಕೊಂಡಿದೆ ಎಂದು ತೋರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಾಧನಗಳನ್ನು ಬಳಸಿಕೊಂಡು ಅಕ್ರಮವಾಗಿ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಅನ್ನು ಅಕ್ರಮ ಸಾಫ್ಟ್‌ವೇರ್ ಮೂಲಕ ಮಾಡಲಾಗುತ್ತಿದೆ. ಇದು ದೀರ್ಘಾವಧಿಯಲ್ಲಿ “ರಾಷ್ಟ್ರೀಯ ಭದ್ರತೆಗೆ ತೊಂದರೆಯನ್ನು ಉಂಟುಮಾಡಬಹುದು ಎಂದು ಅವರು ತಿಳಿಸಿದ್ದಾರೆ.

“ಆಂಧ್ರಪ್ರದೇಶದ ಆಡಳಿತ ಪಕ್ಷ ಮತ್ತು ಖಾಸಗಿ ವ್ಯಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು (ಫೋನ್ ಟ್ಯಾಪಿಂಗ್) ಪರಿಶೀಲಿಸಲು ತಕ್ಷಣದ ಮತ್ತು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು” ಎಂದು ನಾಯ್ಡು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣ ರಾಜು ಅವರು ಕೇಂದ್ರ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ‘ರೊಮೇನಿಯಾ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್, ದಕ್ಷಿಣ ಕೊರಿಯಾ ಮತ್ತು ಸ್ಪೇನ್ ಸಂಕೇತಗಳನ್ನು ಪ್ರದರ್ಶಿಸುವ ವಿಚಿತ್ರ ಸಂಖ್ಯೆಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯ ಗುಪ್ತಚರ ಇಲಾಖೆ ನನ್ನ ಫೋನ್‌ಗಳನ್ನು ಟ್ಯಾಪ್ ಮಾಡುತ್ತಿದೆ ಎಂದು ನನಗೆ ಗೊತ್ತಾಗಿದೆ. ಇದು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದರು.

ತಾವು ಸದಸ್ಯರಾಗಿರುವ ವಿವಿಧ ಸಂಸದೀಯ ಸಮಿತಿಗಳನ್ನು ಉಲ್ಲೇಖಿಸಿದ ರಾಜು, ಸಹೋದ್ಯೋಗಿ ಸಂಸದರು ಮತ್ತು ಸಂಸತ್ತಿನ ಸಿಬ್ಬಂದಿಯೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಗೌಪ್ಯ ಮತ್ತು ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಚರ್ಚಿಸಲಾಗುವುದು. ಅಂತಹ ಗೌಪ್ಯ ಮಾಹಿತಿಯ ಯಾವುದೇ ಸೋರಿಕೆ, ನನ್ನ ಕರ್ತವ್ಯಗಳು ಮತ್ತು ಕಟ್ಟುಪಾಡುಗಳ ಕಾರ್ಯಕ್ಷಮತೆಗೆ ಗಂಭೀರ ಅಡಚಣೆಯಾಗುವುದಲ್ಲದೆ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಬಹುದು ಎಂದೂ ಹೇಳಿದ್ದಾರೆ.


ಇದನ್ನು ಓದಿ: ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...