Homeರಾಷ್ಟ್ರೀಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶ ನೀಡಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಚೌಟಾಲಾ ಅವರಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿ, ಅವರ ನಾಲ್ಕು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಚೌಟಾಲಾ ಅವರ ವಕೀಲರು ಅವರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಸೌಮ್ಯ ಶಿಕ್ಷೆಯನ್ನು ವಿಧಿಸಲು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅನಾರೋಗ್ಯ ಮತ್ತು ವಯಸ್ಸಿನ ಆಧಾರದ ಮೇಲೆ ರಿಯಾಯಿತಿ ನೀಡುವಂತೆ ಚೌಟಾಲಾ ಅವರ ವಕೀಲರ ವಾದಗಳನ್ನು ಸಿಬಿಐ ವಿರೋಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಟಾಲಾ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಸಿಬಿಐ ಒತ್ತಾಯಿಸಿದ್ದು, ಇದು ಸಮಾಜಕ್ಕೆ ಸಂದೇಶ ರವಾನಿಸಲಿದೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಹರಿಯಾಣದ ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ 75% ಮೀಸಲಾತಿ: ಹೈಕೋರ್ಟ್ ತಡೆ ಹಿಂಪಡೆದ ಸುಪ್ರೀಂಕೋರ್ಟ್

ಈ ಪ್ರಕರಣದಲ್ಲಿ, ಸಾರ್ವಜನಿಕ ವ್ಯಕ್ತಿಗೆ ಕನಿಷ್ಠ ಶಿಕ್ಷೆಯನ್ನು ನೀಡುವುದು ತಪ್ಪು ಸಂದೇಶ ನೀಡಿದಂತಾಗುತ್ತದೆ. ಅವರು ಶುದ್ಧ ಹಸ್ತರಲ್ಲ. ಅವರಿಗೆ ಶಿಕ್ಷೆಯಾದ ಎರಡನೇ ಪ್ರಕರಣ ಇದಾಗಿದೆ ಎಂದು ಸಿಬಿಐ ಹೇಳಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ), ಮಾರ್ಚ್ 26, 2010 ರಂದು ಚೌಟಾಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. 1993 ಮತ್ತು 2006 ರ ನಡುವೆ ಏಳು ಬಾರಿ ಶಾಸಕರಾಗಿದ್ದ ಅವರು 6.09 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಪ್ರತಿಪಾದಿಸಿದೆ.

ಚೌಟಾಲಾ ಅವರನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯವು, ಆರೋಪಿಯು ಅಕ್ರಮ ಆದಾಯದ ಮೂಲಕ 103%ದಷ್ಟು ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ ಎಂದು ಹೇಳಿದೆ. ಭ್ರಷ್ಟಾಚಾರ ತಡೆ (PC) ಕಾಯಿದೆಯ 13(2) ಜೊತೆಗೆ ಹೇಳಿರುವ ಸೆಕ್ಷನ್ 13(1)(e) ಅಡಿಯಲ್ಲಿ ಚೌಟಾಲಾ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

JBT ಶಿಕ್ಷಕರ ನೇಮಕಾತಿ ಹಗರಣದಲ್ಲಿ 2013 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥ ಎಂದು ಘೋಷಿಸಲ್ಪಟ್ಟ ನಂತರ ಭ್ರಷ್ಟಾಚಾರದ ಆರೋಪದ ಮೇಲೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ 10 ವರ್ಷಗಳ ಶಿಕ್ಷೆಯನ್ನು ವಿಧಿಸಿದ ನಂತರ ಚೌಟಾಲಾ ಅವರ ಎರಡನೇ ದೋಷಾರೋಪಣೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...