Homeರಾಷ್ಟ್ರೀಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶ ನೀಡಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಚೌಟಾಲಾ ಅವರಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿ, ಅವರ ನಾಲ್ಕು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಚೌಟಾಲಾ ಅವರ ವಕೀಲರು ಅವರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಸೌಮ್ಯ ಶಿಕ್ಷೆಯನ್ನು ವಿಧಿಸಲು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅನಾರೋಗ್ಯ ಮತ್ತು ವಯಸ್ಸಿನ ಆಧಾರದ ಮೇಲೆ ರಿಯಾಯಿತಿ ನೀಡುವಂತೆ ಚೌಟಾಲಾ ಅವರ ವಕೀಲರ ವಾದಗಳನ್ನು ಸಿಬಿಐ ವಿರೋಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಟಾಲಾ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಸಿಬಿಐ ಒತ್ತಾಯಿಸಿದ್ದು, ಇದು ಸಮಾಜಕ್ಕೆ ಸಂದೇಶ ರವಾನಿಸಲಿದೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಹರಿಯಾಣದ ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ 75% ಮೀಸಲಾತಿ: ಹೈಕೋರ್ಟ್ ತಡೆ ಹಿಂಪಡೆದ ಸುಪ್ರೀಂಕೋರ್ಟ್

ಈ ಪ್ರಕರಣದಲ್ಲಿ, ಸಾರ್ವಜನಿಕ ವ್ಯಕ್ತಿಗೆ ಕನಿಷ್ಠ ಶಿಕ್ಷೆಯನ್ನು ನೀಡುವುದು ತಪ್ಪು ಸಂದೇಶ ನೀಡಿದಂತಾಗುತ್ತದೆ. ಅವರು ಶುದ್ಧ ಹಸ್ತರಲ್ಲ. ಅವರಿಗೆ ಶಿಕ್ಷೆಯಾದ ಎರಡನೇ ಪ್ರಕರಣ ಇದಾಗಿದೆ ಎಂದು ಸಿಬಿಐ ಹೇಳಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ), ಮಾರ್ಚ್ 26, 2010 ರಂದು ಚೌಟಾಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. 1993 ಮತ್ತು 2006 ರ ನಡುವೆ ಏಳು ಬಾರಿ ಶಾಸಕರಾಗಿದ್ದ ಅವರು 6.09 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಪ್ರತಿಪಾದಿಸಿದೆ.

ಚೌಟಾಲಾ ಅವರನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯವು, ಆರೋಪಿಯು ಅಕ್ರಮ ಆದಾಯದ ಮೂಲಕ 103%ದಷ್ಟು ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ ಎಂದು ಹೇಳಿದೆ. ಭ್ರಷ್ಟಾಚಾರ ತಡೆ (PC) ಕಾಯಿದೆಯ 13(2) ಜೊತೆಗೆ ಹೇಳಿರುವ ಸೆಕ್ಷನ್ 13(1)(e) ಅಡಿಯಲ್ಲಿ ಚೌಟಾಲಾ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

JBT ಶಿಕ್ಷಕರ ನೇಮಕಾತಿ ಹಗರಣದಲ್ಲಿ 2013 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥ ಎಂದು ಘೋಷಿಸಲ್ಪಟ್ಟ ನಂತರ ಭ್ರಷ್ಟಾಚಾರದ ಆರೋಪದ ಮೇಲೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ 10 ವರ್ಷಗಳ ಶಿಕ್ಷೆಯನ್ನು ವಿಧಿಸಿದ ನಂತರ ಚೌಟಾಲಾ ಅವರ ಎರಡನೇ ದೋಷಾರೋಪಣೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...