Homeಕರ್ನಾಟಕಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

- Advertisement -
- Advertisement -

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮುಖಂಡ ಲಕ್ಷ್ಮಣ್ ಮಂಡಲಗೇರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಭಟ್ಟು ಸತ್ಯನಾರಾಯಣ ಅವರ ಅವಧಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಗಂಭೀರ ಅಕ್ರಮಗಳು ನಡೆದಿರುವುದಾಗಿ ಆರೋಪಿಸಿದರು.

ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜಾರಿಗೆ ತಂದಿರುವ ಹುದ್ದೆ ಆಧಾರಿತ ಮೀಸಲು ಕ್ರಮದ ನಿಯಮಗಳ ಪ್ರಕಾರ ಪ್ರತಿಯೊಂದು ಹುದ್ದೆಗೆ ನಿರ್ದಿಷ್ಟ ಕ್ರಮ ಸಂಖ್ಯೆ ಇರಬೇಕು. ಹಾಗೆಯೇ ಮೀಸಲು ಪಟ್ಟಿಯಲ್ಲಿ ಭರ್ತಿಯಾದ ಹಾಗೂ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಕಡ್ಡಾಯವಾಗಿ ತೋರಿಸಬೇಕು. ಆದರೆ 2019ರ ಪಟ್ಟಿಯಲ್ಲಿ ಖಾಲಿ ಹಾಗೂ ಭರ್ತಿಯಾದ ಹುದ್ದೆಗಳ ವಿವರಗಳನ್ನು ತೋರಿಸಲಾಗಿದೆ. ಆದರೆ 2025ರ ಪಟ್ಟಿಯಲ್ಲಿ ಭರ್ತಿಯಾದ ಹುದ್ದೆಗಳನ್ನಷ್ಟೇ ತೋರಿಸಿ ಖಾಲಿ ಹುದ್ದೆಗಳ ವಿವರಗಳನ್ನು ಪ್ರಕಟಿಸಿಲ್ಲ ಯಾಕೆ ತೋರಿಸಿಲ್ಲ ಎಂಬುದನ್ನು ಪ್ರಶ್ನಿಸಿದರು.

ಈ ಹಿಂದೆ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘವು ಮೀಸಲು ಕ್ರಮ ಉಲ್ಲಂಘನೆ ಕುರಿತು ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ 63ನೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಪಕುಲಪತಿಗಳು ನ್ಯಾಯಾಲಯವು ವಿಶ್ವವಿದ್ಯಾಲಯದ ಮೀಸಲು ಪಟ್ಟಿಯನ್ನು ಅನುಮೋದಿಸಿದೆ ಎಂದು ಹೇಳಿ ಸಭಾ ಸದಸ್ಯರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಪ್ಪು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನೊಂದೆಡೆ, University Grants Commission ನಿಯಮಗಳಿಗೆ ವಿರುದ್ಧವಾಗಿ ಕೆಲ ಅಭ್ಯರ್ಥಿಗಳನ್ನು ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಯುಜಿಸಿ ನಿಯಮಗಳ ಪ್ರಕಾರ ಸಹ ಪ್ರಾಧ್ಯಾಪಕರಾಗಲು ಕನಿಷ್ಠ ಎಂಟು ವರ್ಷಗಳ ಸಹಾಯಕ ಪ್ರಾಧ್ಯಾಪಕ ಸೇವೆ ಅಗತ್ಯವಿದೆ. ಆದರೆ ಕೆಲವು ಅಭ್ಯರ್ಥಿಗಳು ಈ ಅರ್ಹತೆಗಳನ್ನು ಪೂರೈಸದೆ ಇದ್ದರೂ ನೇಮಕಗೊಂಡಿರುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಡಾ. ಬಸವರಾಜ ಕುಬಕಡ್ಡಿ ಅವರನ್ನು 2022ರ ಡಿಸೆಂಬರ್ 8ರಂದು ಕಾನೂನು ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ನೇಮಕ ಮಾಡಲಾಗಿದೆ. ಅವರು ಪಿಎಚ್‌.ಡಿ ಪದವಿಯನ್ನು 2015ರಲ್ಲಿ ಪಡೆದಿದ್ದು, ನಿಯಮಗಳ ಪ್ರಕಾರ ಅದರ ನಂತರದ ಸೇವೆಯನ್ನಷ್ಟೇ ಪರಿಗಣಿಸಬೇಕು. ಆದರೆ ಎಂಟು ವರ್ಷಗಳ ಸೇವೆ ಪೂರ್ಣಗೊಳ್ಳುವ ಮೊದಲೇ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಇನ್ನುಳಿದ ಡಾ. ಕೋಟಾ ಸಾಯಿ ಕೃಷ್ಣ ಸೇರಿದಂತೆ ಹಲವು ಉಪನ್ಯಾಸಕರ ನೇಮಕಾತಿಗಳಲ್ಲಿಯೂ UGC ಅರ್ಹತಾ ನಿಯಮಗಳನ್ನು ಪಾಲಿಸಿಲ್ಲ ಎಂಬ ಅನುಮಾನಗಳಿವೆ. ಡಾ. ಎಸ್‌. ಲಿಂಗಮೂರ್ತಿ, ಡಾ.ಜಿ.ಮಹೇಂದ್ರ, ಡಾ.ಸಂದೀಪ್, ಡಾ.ಪ್ರಮೋದ್ ಕುಮಾರ್ ಸೇರಿದಂತೆ ಹಲವರ ನೇಮಕಾತಿಗಳಲ್ಲಿಯೂ ಅಕ್ರಮ ನಡೆದಿವೆ ಎಂಬ ಪ್ರಶ್ನೆಗಳು ಮೂಡುತ್ತಿದೆ.

ಅದೇ ವೇಳೆ ಡಾ. ಅಮರೇಂದ್ರ ಮತ್ಸ ಅವರು ಒಂದು ಶಿಕ್ಷಣ ಸಂಸ್ಥೆಯಿಂದ ತಂದ ಸರ್ಟಿಫಿಕೇಟ್ ನಲ್ಲಿ ಅರ್ಜಿ ಸಲ್ಲಿಕೆ, ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ, ಹುದ್ದೆಗೆ ಸೇರ್ಪಡೆ ಸೇರಿದಂತೆ ಒಂದೇ ದಿನದಲ್ಲಿ ನಡೆದಿರುವುದು ತಮಾಷೆ ಅನಿಸುತ್ತಿದೆ. ಈ ತರ ನಡೆಯಲು ಎಲ್ಲಿಯಾದರೂ ಸಾಧ್ಯವೇ ? ಇದೆಲ್ಲ ವಿಶ್ವವಿದ್ಯಾಲಯದ ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ನಡೆದಿರುವ ಮೀಸಲು ಕ್ರಮ ಉಲ್ಲಂಘನೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ಆಗಬೇಕೆಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜೇಂದ್ರ ರಾಜವಾಳ, ಮೈಲಾರಿ ದೊಡ್ಡಮನಿ, ಸಂತೋಷ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...