Homeಕರ್ನಾಟಕಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

- Advertisement -
- Advertisement -

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮುಖಂಡ ಲಕ್ಷ್ಮಣ್ ಮಂಡಲಗೇರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಭಟ್ಟು ಸತ್ಯನಾರಾಯಣ ಅವರ ಅವಧಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಗಂಭೀರ ಅಕ್ರಮಗಳು ನಡೆದಿರುವುದಾಗಿ ಆರೋಪಿಸಿದರು.

ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜಾರಿಗೆ ತಂದಿರುವ ಹುದ್ದೆ ಆಧಾರಿತ ಮೀಸಲು ಕ್ರಮದ ನಿಯಮಗಳ ಪ್ರಕಾರ ಪ್ರತಿಯೊಂದು ಹುದ್ದೆಗೆ ನಿರ್ದಿಷ್ಟ ಕ್ರಮ ಸಂಖ್ಯೆ ಇರಬೇಕು. ಹಾಗೆಯೇ ಮೀಸಲು ಪಟ್ಟಿಯಲ್ಲಿ ಭರ್ತಿಯಾದ ಹಾಗೂ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಕಡ್ಡಾಯವಾಗಿ ತೋರಿಸಬೇಕು. ಆದರೆ 2019ರ ಪಟ್ಟಿಯಲ್ಲಿ ಖಾಲಿ ಹಾಗೂ ಭರ್ತಿಯಾದ ಹುದ್ದೆಗಳ ವಿವರಗಳನ್ನು ತೋರಿಸಲಾಗಿದೆ. ಆದರೆ 2025ರ ಪಟ್ಟಿಯಲ್ಲಿ ಭರ್ತಿಯಾದ ಹುದ್ದೆಗಳನ್ನಷ್ಟೇ ತೋರಿಸಿ ಖಾಲಿ ಹುದ್ದೆಗಳ ವಿವರಗಳನ್ನು ಪ್ರಕಟಿಸಿಲ್ಲ ಯಾಕೆ ತೋರಿಸಿಲ್ಲ ಎಂಬುದನ್ನು ಪ್ರಶ್ನಿಸಿದರು.

ಈ ಹಿಂದೆ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘವು ಮೀಸಲು ಕ್ರಮ ಉಲ್ಲಂಘನೆ ಕುರಿತು ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ 63ನೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಪಕುಲಪತಿಗಳು ನ್ಯಾಯಾಲಯವು ವಿಶ್ವವಿದ್ಯಾಲಯದ ಮೀಸಲು ಪಟ್ಟಿಯನ್ನು ಅನುಮೋದಿಸಿದೆ ಎಂದು ಹೇಳಿ ಸಭಾ ಸದಸ್ಯರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಪ್ಪು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನೊಂದೆಡೆ, University Grants Commission ನಿಯಮಗಳಿಗೆ ವಿರುದ್ಧವಾಗಿ ಕೆಲ ಅಭ್ಯರ್ಥಿಗಳನ್ನು ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಯುಜಿಸಿ ನಿಯಮಗಳ ಪ್ರಕಾರ ಸಹ ಪ್ರಾಧ್ಯಾಪಕರಾಗಲು ಕನಿಷ್ಠ ಎಂಟು ವರ್ಷಗಳ ಸಹಾಯಕ ಪ್ರಾಧ್ಯಾಪಕ ಸೇವೆ ಅಗತ್ಯವಿದೆ. ಆದರೆ ಕೆಲವು ಅಭ್ಯರ್ಥಿಗಳು ಈ ಅರ್ಹತೆಗಳನ್ನು ಪೂರೈಸದೆ ಇದ್ದರೂ ನೇಮಕಗೊಂಡಿರುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಡಾ. ಬಸವರಾಜ ಕುಬಕಡ್ಡಿ ಅವರನ್ನು 2022ರ ಡಿಸೆಂಬರ್ 8ರಂದು ಕಾನೂನು ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ನೇಮಕ ಮಾಡಲಾಗಿದೆ. ಅವರು ಪಿಎಚ್‌.ಡಿ ಪದವಿಯನ್ನು 2015ರಲ್ಲಿ ಪಡೆದಿದ್ದು, ನಿಯಮಗಳ ಪ್ರಕಾರ ಅದರ ನಂತರದ ಸೇವೆಯನ್ನಷ್ಟೇ ಪರಿಗಣಿಸಬೇಕು. ಆದರೆ ಎಂಟು ವರ್ಷಗಳ ಸೇವೆ ಪೂರ್ಣಗೊಳ್ಳುವ ಮೊದಲೇ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಇನ್ನುಳಿದ ಡಾ. ಕೋಟಾ ಸಾಯಿ ಕೃಷ್ಣ ಸೇರಿದಂತೆ ಹಲವು ಉಪನ್ಯಾಸಕರ ನೇಮಕಾತಿಗಳಲ್ಲಿಯೂ UGC ಅರ್ಹತಾ ನಿಯಮಗಳನ್ನು ಪಾಲಿಸಿಲ್ಲ ಎಂಬ ಅನುಮಾನಗಳಿವೆ. ಡಾ. ಎಸ್‌. ಲಿಂಗಮೂರ್ತಿ, ಡಾ.ಜಿ.ಮಹೇಂದ್ರ, ಡಾ.ಸಂದೀಪ್, ಡಾ.ಪ್ರಮೋದ್ ಕುಮಾರ್ ಸೇರಿದಂತೆ ಹಲವರ ನೇಮಕಾತಿಗಳಲ್ಲಿಯೂ ಅಕ್ರಮ ನಡೆದಿವೆ ಎಂಬ ಪ್ರಶ್ನೆಗಳು ಮೂಡುತ್ತಿದೆ.

ಅದೇ ವೇಳೆ ಡಾ. ಅಮರೇಂದ್ರ ಮತ್ಸ ಅವರು ಒಂದು ಶಿಕ್ಷಣ ಸಂಸ್ಥೆಯಿಂದ ತಂದ ಸರ್ಟಿಫಿಕೇಟ್ ನಲ್ಲಿ ಅರ್ಜಿ ಸಲ್ಲಿಕೆ, ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ, ಹುದ್ದೆಗೆ ಸೇರ್ಪಡೆ ಸೇರಿದಂತೆ ಒಂದೇ ದಿನದಲ್ಲಿ ನಡೆದಿರುವುದು ತಮಾಷೆ ಅನಿಸುತ್ತಿದೆ. ಈ ತರ ನಡೆಯಲು ಎಲ್ಲಿಯಾದರೂ ಸಾಧ್ಯವೇ ? ಇದೆಲ್ಲ ವಿಶ್ವವಿದ್ಯಾಲಯದ ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ನಡೆದಿರುವ ಮೀಸಲು ಕ್ರಮ ಉಲ್ಲಂಘನೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ಆಗಬೇಕೆಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜೇಂದ್ರ ರಾಜವಾಳ, ಮೈಲಾರಿ ದೊಡ್ಡಮನಿ, ಸಂತೋಷ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...