Homeಕರ್ನಾಟಕಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

- Advertisement -
- Advertisement -

ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಿಮ್ಸ್‌ನಲ್ಲಿ ಅಕ್ರಮ ನೇಮಕಾತಿ, ಅವ್ಯವಹಾರ ಎಡೆಬಿಡದೆ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಡಾ. ಗಜಾನನ ನಾಯಕ್ ಡೀನ್ ಕಮ್ ಡೈರೆಕ್ಟರ್ ಆಗಿಬಂದ ನಂತರ ಕಿಮ್ಸ್‌ನಲ್ಲಿ ಆರ್ಥಿಕ ಅನುದಾನ ದುರ್ಬಳಕೆ ಮಿತಿ ಮೀರಿದೆಯೆಂದು ಅದೇ ಸಂಸ್ಥೆಯಲ್ಲಿ ಅಧೀಕ್ಷಕಿಯಾಗಿದ್ದ ವೀಣಾ ಪಾಟೀಲ್ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಬರೋಬ್ಬರಿ ಏಳು ಪುಟಗಳ ದೂರು ಕೊಟ್ಟಿದ್ದೂ ಆಗಿದೆ.

ಅಕ್ರಮ ನೇಮಕಾತಿ ಮನಸೋ ಇಚ್ಚೆ ಡೈರೆಕ್ಟರ್ ಸಾಹೇಬರು ಮಾಡಿಮುಗಿಸಿದ್ದಾರೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ. ಸುಮಾರು 100 ತಾಂತ್ರಿಕ ಸಿಬ್ಬಂದಿ ಕಿಮ್ಸ್‌ಗೆ ಅತೀ ಜರೂರ್ ಇರುವಾಗ ಲಾಭದಾಯಕವಾದ ತಾತ್ಕಾಲಿಕ ಸ್ವಚ್ಚತಾಗಾರ, ಕಾವಲುಗಾರ ನೇಮಕಾತಿ ಮಾಡಿಕೊಳ್ಳಲಾಗಿದೆ. 80 ಸ್ವಚ್ಛತಾ ಕರ್ಮಚಾರಿಗಳು ಮತ್ತು 30 ಕಾವಲುಗಾರರು ಇದ್ದರೂ ಸಹ ಸುಮಾರು 90 ಅನಾವಶ್ಯಕ ನೇಮಕಾತಿ ನಡೆದಿದೆ. 2021ರ ಜನವರಿಯಲ್ಲಿ ನೇಮಕವಾಗಿರುವ ಈ ಅನರ್ಹರಿಗೆ 2019ರ ಅಕ್ಟೋಬರ್‌ನಿಂದ ಪೂರ್ವಾನ್ವಯವಾಗುವಂತೆ ಸಂಬಳ ನೀಡಲಾಗಿದೆ. ಈ ಮೂರು ತಿಂಗಳ ವೇತವೇ ಹತ್ತಿರತ್ತಿರ 75 ಲಕ್ಷ. ಇದು ಸರ್ಕಾರಿ ಬೊಕ್ಕಸಕ್ಕೆ ಹೊರೆಯೆಂದು ದೂರಲಾಗಿದೆ.

ಡೀನ್ ಡಾ. ಗಜಾನನ ನಾಯಕ್ ಮಾಡಿರುವ ಹಲವು ನೇಮಕಾತಿಗಳಿಗೆ ಹಣಕಾಸು ಇಲಾಖೆಯಿಂದಾಗಲಿ, ಇನ್ನಿತರ ಸಕ್ಷಮ ಪ್ರಾಧಿಕಾರದ್ದಾಗಲಿ ಅನುಮತಿ ಇಲ್ಲ. ತಾತ್ಕಾಲಿಕ ಮತ್ತು ಖಾಯಂ ಬೊಧಕ ಸಿಬ್ಬಂದಿ ನೇಮಕಾತಿ ಎಲ್ಲ ನೀತಿ-ನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದೆ. ಸರ್ಕಾರದಿಂದ ಮಂಜೂರಾತಿಯಿಲ್ಲದ ಹುದ್ದೆಗಳನ್ನು ಹುಟ್ಟು ಹಾಕುವುದರಲ್ಲಿ ಈ ಡೈರೆಕ್ಟರ್ ನಿಸ್ಸೀಮನೆನ್ನುವ ಅಧೀಕ್ಷಕಿ ವೀಣಾ ಪಾಟೀಲ್ ತಾನು ಡೀನ್ ಹೇಳಿದಂತೆ ಕೇಳುವುದಿಲ್ಲವೆಂಬ ಕಾರಣಕ್ಕೆ ತನ್ನ ಕೈಲಿದ್ದ ಆರ್ಥಿಕ ವ್ಯವಹಾರ ಮತ್ತು ನಗದು ವಿಭಾಗ ಬೇರೆಯವರಿಗೆ ವಹಿಸಿದ್ದಾರೆ; ಅಷ್ಟೇ ಅಲ್ಲ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿಲ್ಲದ ’ಹಿರಿಯ ಕಚೇರಿ ಅಧೀಕ್ಷಕಿ’ ಎಂಬ ಬಿರುದು ದಯಪಾಲಿಸಿದ್ದಾರೆಂದು ಆರೋಪಿಸಿದ್ದಾರೆ.

ಡೀನ್ ಡಾ. ಗಜಾನನ ನಾಯಕ್

ಡೀನ್ ಡಾ. ನಾಯಕ್ ತಮ್ಮ ಪರಮಾಪ್ತ ಶಿಷ್ಯೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರನ್ನು ಮೀಸಲಾತಿ ಹಾಗು ನೇಮಕಾತಿ ನಿಯಮಗಳನ್ನೆಲ್ಲ ಧಿಕ್ಕರಿಸಿ ವಿಧಿ ವಿಜ್ಞಾನ ಶಾಸ್ತ್ರ [ಫಾರೆನ್ಸಿಕ್ ಸೈನ್ಸ್] ವಿಭಾಗದ ಸಹಾಯಕ ಅಧ್ಯಾಪಕಿಯಾಗಿ ನೇಮಿಸಿರುವುದು ದೊಡ್ಡ ವಿವಾದ ಹುಟ್ಟು ಹಾಕಿದೆ. ಫೊರೆನ್ಸಿಕ್ ವಿಭಾಗದಲ್ಲಿ ಹುದ್ದೆ ಖಾಲಿಯಿಲ್ಲದಿದ್ದರೂ, ಅವಶ್ಯಕತೆಯಿಲ್ಲದಿದ್ದರೂ ಈ ನೇಮಕಾತಿ ಮಾಡಿಕೊಳ್ಳಲಾಗಿದೆಯೆಂದು ಹೆಸರು ಹೇಳಿಕೊಳ್ಳದ ನೌಕರರು ಹೇಳುತ್ತಾರೆ. ಕೆಲವು ತಿಂಗಳ ಹಿಂದೆ ಆ ಅಧ್ಯಾಪಕಿಗೆ ಯಾವುದೇ ನಿಯಮ ಬದ್ದ ಪ್ರಕಿಯೆಯಿಲ್ಲದೆ ಖಾಯಂ ಮಾಡಿ ಲಕ್ಷಗಟ್ಟಲೆ ಸಂಬಳ ಬರುವಂತೆ ನೋಡಿಕೊಳ್ಳಲಾಗಿದೆ!

ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಖಾಯಂ ಅಧ್ಯಾಪಕರ ನೇಮಿಸುವಾಗ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುಮತಿ, ಅನುಮೋದನೆ ಮತ್ತು ಆದೇಶವಿರಲೇಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರ ನೇಮಕಾತಿಯಲ್ಲಿ ಈ ನಿಯಮಗಳ್ಯಾವುದನ್ನು ಪ್ರಜ್ಞಾಪೂರ್ವಕವಾಗೆ ಪಾಲಿಸಿಲ್ಲ ಎನ್ನಲಾಗಿದೆ. ತರಾತುರಿಯಲ್ಲಿ ಈ ನೇಮಕಾತಿ ನಡೆಸಲಾಗಿದ್ದು, ಡಾ.ನಾಯಕ್ ಕಿಮ್ಸ್ ನಿರ್ದೇಶಕರಾಗಿ ಬಂದ ಒಂದೇ ತಿಂಗಳಲ್ಲಿ ಅಂದರೆ 07-02-2020ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಫೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಗೆ ಬ್ಯಾಕ್‌ಲಾಗ್‌ನಲ್ಲಿ ಒಂದು ಸಹಾಯಕ ಪ್ರಾಧ್ಯಾಪಕಿ ಹುದ್ದಗೆ ಅರ್ಜಿ ಕರೆಯಲಾಗಿದೆ. ವಾಸ್ತವಿಕವಾಗಿ ಕಿಮ್ಸ್‌ನಲ್ಲಿ ಇಂತದೊಂದು ಹುದ್ದೆ ಖಾಲಿಯಿರುವುದಿಲ್ಲ.

ಹಿಂದಿನ ನೇಮಕಾತಿ ಪ್ರಕಟಣೆಯಲ್ಲಿ ಸೂಚಿಸಿದ್ದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹುದ್ದೆಗಳು ಭರ್ತಿಯಾಗದಿದ್ದರಷ್ಟೇ ಅದನ್ನು ಮುಂದಿನ ಅಧಿಸೂಚನೆಯಲ್ಲಿ ಬ್ಯಾಕ್‌ಲಾಗ್ ಎಂದು ಪರಿಗಣಿಸಲಾಗುತ್ತದೆ. ಆದರೆ 8-8-2019 ಮತ್ತು 12-12-2019ರ ನೇಮಕಾತಿ ಪ್ರಕಟಣೆಯಲ್ಲಿ ಸದ್ರಿ ಹುದ್ದೆಯ ಪ್ರಸ್ತಾಪವೇ ಇಲ್ಲ. ಆದರೂ ಫೊರೆನ್ಸಿಕ್ ಸೈನ್ಸ್ -ಅಸಿಸ್ಟೆಂಟ್ ಪ್ರೊಫೆಸರ್ ಎಸ್‌ಟಿ ಲೇಡಿ ಬ್ಯಾಕ್ ಲಾಗ್ ಎಂದು ಸುಳ್ಳು ನಮೂದಿಸಲಾಗಿದೆ! ಕಿಮ್ಸ್‌ನಲ್ಲಿ ಒಟ್ಟೂ 49 ಸಹಾಯಕ ಅಧ್ಯಾಪಕ ಹುದ್ದೆಗಳಿವೆ. ಮೀಸಲಾತಿ ಅನುಪಾತದಂತೆ ಇದರಲ್ಲಿ ಎಸ್‌ಟಿ ವರ್ಗಕ್ಕೆ ಎರಡು ಹುದ್ದೆ ಮೀಸಲಿರಬೇಕು. ಡಾ.ಆಂಜನೇಯ ಎಸ್‌ಟಿ ಪುರುಷ ಮತ್ತು ಭಾಗ್ಯ ಶ್ರೀ ಬೋಯರ್ ಎಸ್‌ಟಿ ಮಹಿಳೆ ಕೋಟಾದಲ್ಲಿ ಆಯ್ಕೆಯಾಗಿದ್ದಾರೆ. ಹೀಗಾಗಿ ಸಧ್ಯ ಎಸ್‌ಟಿ ಪ್ರವರ್ಗದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅವಕಾಶವಿಲ್ಲ. ವಿಧಿವಿಜ್ಞಾನ ವಿಭಾಗಕ್ಕೆ ಮಂಜೂರಾಗಿರುವುದು ಒಂದೇ ಒಂದು ಸಹಾಯಕ ಪ್ರಾಧ್ಯಾಪಕ ಸ್ಥಾನ. ಇದೂ ಕೂಡ ಭರ್ತಿಯಾಗಿದೆ. ಆದ್ದರಿಂದ ಮತ್ತೊಂದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆ ನಡೆಸುವಂತಿಲ್ಲ.

ಇದೆಲ್ಲ ಮರೆಮಾಚಿ ನೇಮಕಾತಿಗೆ ರಹಸ್ಯ ಅಧಿಸೂಚನೆ ಹೊರಡಿಸಲಾಗಿದೆ. ಇದೊಂದು ರಾಜ್ಯ ಮಟ್ಟದ ಆಯ್ಕೆಯಾದ್ದರಿಂದ ರಾಜ್ಯ ಮಟ್ಟದ ಎರಡು ದಿನ ಪತ್ರಿಕೆ [ಒಂದು ಕನ್ನಡ ಮತ್ತೊಂದು ಇಂಗ್ಲಿಷ್] ಎಲ್ಲಾ ಆವೃತ್ತಿಯಲ್ಲಿ ಜಾಹೀರಾತು ನೀಡಬೇಕು. ಆದರೆ ಸ್ಥಳೀಯ ಪತ್ರಿಕೆಯಲ್ಲಷ್ಟೇ ಪ್ರಕಟಣೆ ಬರುವಂತೆ ನೋಡಿಕೊಳ್ಳಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದವರಿಗೆ ನೀಡಬೇಕಾದ 371 [ಜೆ]ದಂತೆ ಶೇ.8 ಮೀಸಲಾತಿಗೂ ಆಸ್ಪದ ಕೊಡದೆ ಸರ್ಕಾರಿ ಆದೇಶ ಧಿಕ್ಕರಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಕ್ಷೇಪಗಳಿಗೆ ಕನಿಷ್ಟ 15 ದಿನ ಕಾಲಾವಕಾಶ ಕೊಡಬೇಕು. ಅಂತಿಮ ಆಯ್ಕೆ ಪಟ್ಟಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆ ಪಡೆದು ನೇಮಕಾತಿ ಆದೇಶ ಕೊಡಬೇಕು. ಆದರೆ ಕಿಮ್ಸ್‌ನ ಫೊರೆನ್ಸಿಕ್ ಪ್ರಾಧ್ಯಾಪಕಿ ನೇಮಕಾತಿ ಪ್ರಹಸನದಲ್ಲಿ 17-02-2020ರಂದು ಸಂದರ್ಶನ ನಡೆಸಿದಂತೆ ದಾಖಲೆ ಸೃಷ್ಟಿಸಲಾಗಿದೆ. 20-07-2020ರಂದು ಡಾ.ಮಹಾಲಕ್ಷ್ಮಿ ಕರ್ಲವಾಡ್‌ಗೆ ನೇಮಕಾತಿ ಆದೇಶ ಸಿಕ್ಕಿಬಿಟ್ಟಿದೆ! ತಾತ್ಕಾಲಿಕ ಪಟ್ಟಿ ಪ್ರಕಟವಾದಂದೇ ನೇಮಕಾತಿಯೂ ನಡೆದುಹೋಗಿದೆ!! ಆಕ್ಷೇಪಣೆಗೆ ಯಾವ ಅವಕಾಶವು ಕೊಟ್ಟಿಲ್ಲ. ಈ ಆದೇಶಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆಯೂ ಇಲ್ಲ. ಹಾಗಾಗಿ ಈ ನೇಮಕಾತಿಗೆ ಯಾವುದೆ ಸಿಂಧುತ್ವವಿಲ್ಲ. ಇಡೀ ಖೋಟಾ ಪ್ರಕ್ರಿಯೆಯಲ್ಲಿ ಕಿಮ್ಸ್ ನಿರ್ದೇಶಕ ಡಾ.ನಾಯಕ್ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ರನ್ನು ಯಾಮಾರಿಸಿದರೋ? ಅಥವಾ ಅನಿಲ್‌ಕುಮಾರ್ ಗೊತ್ತಿದ್ದೂ ಸುಮ್ಮನಿದ್ದಾರೋ ಅರ್ಥವಾಗುವುದಿಲ್ಲವೆಂದು ಕಿಮ್ಸ್‌ನಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿ ಡಾ.ಸುಧಾಕರ್‌ಗೆ ಕಿಮ್ಸ್‌ನ ಅಕ್ರಮ ನೇಮಕಾತಿ ಬಗ್ಗೆ ತಿಳಿದಿದೆಯೇ? ಇನ್ನಾದರು ಸಂಬಂಧಿಸಿದವರು ಎಚ್ಚೆತ್ತು ಪರಿಶಿಷ್ಟ ಪಂಗಡ ಅರ್ಹರಿಗಾದ ಅನ್ಯಾಯ ಸರಿಪಡಿಸುವರಾ? ಅನುದಾನಗಳು ಪೋಲಾಗುತ್ತಿರುವುದು, ಆಗುತ್ತಿರುವ ಆಧ್ವಾನಗಳ ತನಿಖೆ ನಡೆಸುವರಾ? ಕಾದು ನೋಡಬೇಕು.


ಇದನ್ನೂ ಓದಿ: ಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ – ಠಾಣೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...