Homeಕರ್ನಾಟಕಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

- Advertisement -
- Advertisement -

ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಿಮ್ಸ್‌ನಲ್ಲಿ ಅಕ್ರಮ ನೇಮಕಾತಿ, ಅವ್ಯವಹಾರ ಎಡೆಬಿಡದೆ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಡಾ. ಗಜಾನನ ನಾಯಕ್ ಡೀನ್ ಕಮ್ ಡೈರೆಕ್ಟರ್ ಆಗಿಬಂದ ನಂತರ ಕಿಮ್ಸ್‌ನಲ್ಲಿ ಆರ್ಥಿಕ ಅನುದಾನ ದುರ್ಬಳಕೆ ಮಿತಿ ಮೀರಿದೆಯೆಂದು ಅದೇ ಸಂಸ್ಥೆಯಲ್ಲಿ ಅಧೀಕ್ಷಕಿಯಾಗಿದ್ದ ವೀಣಾ ಪಾಟೀಲ್ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಬರೋಬ್ಬರಿ ಏಳು ಪುಟಗಳ ದೂರು ಕೊಟ್ಟಿದ್ದೂ ಆಗಿದೆ.

ಅಕ್ರಮ ನೇಮಕಾತಿ ಮನಸೋ ಇಚ್ಚೆ ಡೈರೆಕ್ಟರ್ ಸಾಹೇಬರು ಮಾಡಿಮುಗಿಸಿದ್ದಾರೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ. ಸುಮಾರು 100 ತಾಂತ್ರಿಕ ಸಿಬ್ಬಂದಿ ಕಿಮ್ಸ್‌ಗೆ ಅತೀ ಜರೂರ್ ಇರುವಾಗ ಲಾಭದಾಯಕವಾದ ತಾತ್ಕಾಲಿಕ ಸ್ವಚ್ಚತಾಗಾರ, ಕಾವಲುಗಾರ ನೇಮಕಾತಿ ಮಾಡಿಕೊಳ್ಳಲಾಗಿದೆ. 80 ಸ್ವಚ್ಛತಾ ಕರ್ಮಚಾರಿಗಳು ಮತ್ತು 30 ಕಾವಲುಗಾರರು ಇದ್ದರೂ ಸಹ ಸುಮಾರು 90 ಅನಾವಶ್ಯಕ ನೇಮಕಾತಿ ನಡೆದಿದೆ. 2021ರ ಜನವರಿಯಲ್ಲಿ ನೇಮಕವಾಗಿರುವ ಈ ಅನರ್ಹರಿಗೆ 2019ರ ಅಕ್ಟೋಬರ್‌ನಿಂದ ಪೂರ್ವಾನ್ವಯವಾಗುವಂತೆ ಸಂಬಳ ನೀಡಲಾಗಿದೆ. ಈ ಮೂರು ತಿಂಗಳ ವೇತವೇ ಹತ್ತಿರತ್ತಿರ 75 ಲಕ್ಷ. ಇದು ಸರ್ಕಾರಿ ಬೊಕ್ಕಸಕ್ಕೆ ಹೊರೆಯೆಂದು ದೂರಲಾಗಿದೆ.

ಡೀನ್ ಡಾ. ಗಜಾನನ ನಾಯಕ್ ಮಾಡಿರುವ ಹಲವು ನೇಮಕಾತಿಗಳಿಗೆ ಹಣಕಾಸು ಇಲಾಖೆಯಿಂದಾಗಲಿ, ಇನ್ನಿತರ ಸಕ್ಷಮ ಪ್ರಾಧಿಕಾರದ್ದಾಗಲಿ ಅನುಮತಿ ಇಲ್ಲ. ತಾತ್ಕಾಲಿಕ ಮತ್ತು ಖಾಯಂ ಬೊಧಕ ಸಿಬ್ಬಂದಿ ನೇಮಕಾತಿ ಎಲ್ಲ ನೀತಿ-ನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದೆ. ಸರ್ಕಾರದಿಂದ ಮಂಜೂರಾತಿಯಿಲ್ಲದ ಹುದ್ದೆಗಳನ್ನು ಹುಟ್ಟು ಹಾಕುವುದರಲ್ಲಿ ಈ ಡೈರೆಕ್ಟರ್ ನಿಸ್ಸೀಮನೆನ್ನುವ ಅಧೀಕ್ಷಕಿ ವೀಣಾ ಪಾಟೀಲ್ ತಾನು ಡೀನ್ ಹೇಳಿದಂತೆ ಕೇಳುವುದಿಲ್ಲವೆಂಬ ಕಾರಣಕ್ಕೆ ತನ್ನ ಕೈಲಿದ್ದ ಆರ್ಥಿಕ ವ್ಯವಹಾರ ಮತ್ತು ನಗದು ವಿಭಾಗ ಬೇರೆಯವರಿಗೆ ವಹಿಸಿದ್ದಾರೆ; ಅಷ್ಟೇ ಅಲ್ಲ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿಲ್ಲದ ’ಹಿರಿಯ ಕಚೇರಿ ಅಧೀಕ್ಷಕಿ’ ಎಂಬ ಬಿರುದು ದಯಪಾಲಿಸಿದ್ದಾರೆಂದು ಆರೋಪಿಸಿದ್ದಾರೆ.

ಡೀನ್ ಡಾ. ಗಜಾನನ ನಾಯಕ್

ಡೀನ್ ಡಾ. ನಾಯಕ್ ತಮ್ಮ ಪರಮಾಪ್ತ ಶಿಷ್ಯೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರನ್ನು ಮೀಸಲಾತಿ ಹಾಗು ನೇಮಕಾತಿ ನಿಯಮಗಳನ್ನೆಲ್ಲ ಧಿಕ್ಕರಿಸಿ ವಿಧಿ ವಿಜ್ಞಾನ ಶಾಸ್ತ್ರ [ಫಾರೆನ್ಸಿಕ್ ಸೈನ್ಸ್] ವಿಭಾಗದ ಸಹಾಯಕ ಅಧ್ಯಾಪಕಿಯಾಗಿ ನೇಮಿಸಿರುವುದು ದೊಡ್ಡ ವಿವಾದ ಹುಟ್ಟು ಹಾಕಿದೆ. ಫೊರೆನ್ಸಿಕ್ ವಿಭಾಗದಲ್ಲಿ ಹುದ್ದೆ ಖಾಲಿಯಿಲ್ಲದಿದ್ದರೂ, ಅವಶ್ಯಕತೆಯಿಲ್ಲದಿದ್ದರೂ ಈ ನೇಮಕಾತಿ ಮಾಡಿಕೊಳ್ಳಲಾಗಿದೆಯೆಂದು ಹೆಸರು ಹೇಳಿಕೊಳ್ಳದ ನೌಕರರು ಹೇಳುತ್ತಾರೆ. ಕೆಲವು ತಿಂಗಳ ಹಿಂದೆ ಆ ಅಧ್ಯಾಪಕಿಗೆ ಯಾವುದೇ ನಿಯಮ ಬದ್ದ ಪ್ರಕಿಯೆಯಿಲ್ಲದೆ ಖಾಯಂ ಮಾಡಿ ಲಕ್ಷಗಟ್ಟಲೆ ಸಂಬಳ ಬರುವಂತೆ ನೋಡಿಕೊಳ್ಳಲಾಗಿದೆ!

ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಖಾಯಂ ಅಧ್ಯಾಪಕರ ನೇಮಿಸುವಾಗ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುಮತಿ, ಅನುಮೋದನೆ ಮತ್ತು ಆದೇಶವಿರಲೇಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರ ನೇಮಕಾತಿಯಲ್ಲಿ ಈ ನಿಯಮಗಳ್ಯಾವುದನ್ನು ಪ್ರಜ್ಞಾಪೂರ್ವಕವಾಗೆ ಪಾಲಿಸಿಲ್ಲ ಎನ್ನಲಾಗಿದೆ. ತರಾತುರಿಯಲ್ಲಿ ಈ ನೇಮಕಾತಿ ನಡೆಸಲಾಗಿದ್ದು, ಡಾ.ನಾಯಕ್ ಕಿಮ್ಸ್ ನಿರ್ದೇಶಕರಾಗಿ ಬಂದ ಒಂದೇ ತಿಂಗಳಲ್ಲಿ ಅಂದರೆ 07-02-2020ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಫೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಗೆ ಬ್ಯಾಕ್‌ಲಾಗ್‌ನಲ್ಲಿ ಒಂದು ಸಹಾಯಕ ಪ್ರಾಧ್ಯಾಪಕಿ ಹುದ್ದಗೆ ಅರ್ಜಿ ಕರೆಯಲಾಗಿದೆ. ವಾಸ್ತವಿಕವಾಗಿ ಕಿಮ್ಸ್‌ನಲ್ಲಿ ಇಂತದೊಂದು ಹುದ್ದೆ ಖಾಲಿಯಿರುವುದಿಲ್ಲ.

ಹಿಂದಿನ ನೇಮಕಾತಿ ಪ್ರಕಟಣೆಯಲ್ಲಿ ಸೂಚಿಸಿದ್ದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹುದ್ದೆಗಳು ಭರ್ತಿಯಾಗದಿದ್ದರಷ್ಟೇ ಅದನ್ನು ಮುಂದಿನ ಅಧಿಸೂಚನೆಯಲ್ಲಿ ಬ್ಯಾಕ್‌ಲಾಗ್ ಎಂದು ಪರಿಗಣಿಸಲಾಗುತ್ತದೆ. ಆದರೆ 8-8-2019 ಮತ್ತು 12-12-2019ರ ನೇಮಕಾತಿ ಪ್ರಕಟಣೆಯಲ್ಲಿ ಸದ್ರಿ ಹುದ್ದೆಯ ಪ್ರಸ್ತಾಪವೇ ಇಲ್ಲ. ಆದರೂ ಫೊರೆನ್ಸಿಕ್ ಸೈನ್ಸ್ -ಅಸಿಸ್ಟೆಂಟ್ ಪ್ರೊಫೆಸರ್ ಎಸ್‌ಟಿ ಲೇಡಿ ಬ್ಯಾಕ್ ಲಾಗ್ ಎಂದು ಸುಳ್ಳು ನಮೂದಿಸಲಾಗಿದೆ! ಕಿಮ್ಸ್‌ನಲ್ಲಿ ಒಟ್ಟೂ 49 ಸಹಾಯಕ ಅಧ್ಯಾಪಕ ಹುದ್ದೆಗಳಿವೆ. ಮೀಸಲಾತಿ ಅನುಪಾತದಂತೆ ಇದರಲ್ಲಿ ಎಸ್‌ಟಿ ವರ್ಗಕ್ಕೆ ಎರಡು ಹುದ್ದೆ ಮೀಸಲಿರಬೇಕು. ಡಾ.ಆಂಜನೇಯ ಎಸ್‌ಟಿ ಪುರುಷ ಮತ್ತು ಭಾಗ್ಯ ಶ್ರೀ ಬೋಯರ್ ಎಸ್‌ಟಿ ಮಹಿಳೆ ಕೋಟಾದಲ್ಲಿ ಆಯ್ಕೆಯಾಗಿದ್ದಾರೆ. ಹೀಗಾಗಿ ಸಧ್ಯ ಎಸ್‌ಟಿ ಪ್ರವರ್ಗದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅವಕಾಶವಿಲ್ಲ. ವಿಧಿವಿಜ್ಞಾನ ವಿಭಾಗಕ್ಕೆ ಮಂಜೂರಾಗಿರುವುದು ಒಂದೇ ಒಂದು ಸಹಾಯಕ ಪ್ರಾಧ್ಯಾಪಕ ಸ್ಥಾನ. ಇದೂ ಕೂಡ ಭರ್ತಿಯಾಗಿದೆ. ಆದ್ದರಿಂದ ಮತ್ತೊಂದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆ ನಡೆಸುವಂತಿಲ್ಲ.

ಇದೆಲ್ಲ ಮರೆಮಾಚಿ ನೇಮಕಾತಿಗೆ ರಹಸ್ಯ ಅಧಿಸೂಚನೆ ಹೊರಡಿಸಲಾಗಿದೆ. ಇದೊಂದು ರಾಜ್ಯ ಮಟ್ಟದ ಆಯ್ಕೆಯಾದ್ದರಿಂದ ರಾಜ್ಯ ಮಟ್ಟದ ಎರಡು ದಿನ ಪತ್ರಿಕೆ [ಒಂದು ಕನ್ನಡ ಮತ್ತೊಂದು ಇಂಗ್ಲಿಷ್] ಎಲ್ಲಾ ಆವೃತ್ತಿಯಲ್ಲಿ ಜಾಹೀರಾತು ನೀಡಬೇಕು. ಆದರೆ ಸ್ಥಳೀಯ ಪತ್ರಿಕೆಯಲ್ಲಷ್ಟೇ ಪ್ರಕಟಣೆ ಬರುವಂತೆ ನೋಡಿಕೊಳ್ಳಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದವರಿಗೆ ನೀಡಬೇಕಾದ 371 [ಜೆ]ದಂತೆ ಶೇ.8 ಮೀಸಲಾತಿಗೂ ಆಸ್ಪದ ಕೊಡದೆ ಸರ್ಕಾರಿ ಆದೇಶ ಧಿಕ್ಕರಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಕ್ಷೇಪಗಳಿಗೆ ಕನಿಷ್ಟ 15 ದಿನ ಕಾಲಾವಕಾಶ ಕೊಡಬೇಕು. ಅಂತಿಮ ಆಯ್ಕೆ ಪಟ್ಟಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆ ಪಡೆದು ನೇಮಕಾತಿ ಆದೇಶ ಕೊಡಬೇಕು. ಆದರೆ ಕಿಮ್ಸ್‌ನ ಫೊರೆನ್ಸಿಕ್ ಪ್ರಾಧ್ಯಾಪಕಿ ನೇಮಕಾತಿ ಪ್ರಹಸನದಲ್ಲಿ 17-02-2020ರಂದು ಸಂದರ್ಶನ ನಡೆಸಿದಂತೆ ದಾಖಲೆ ಸೃಷ್ಟಿಸಲಾಗಿದೆ. 20-07-2020ರಂದು ಡಾ.ಮಹಾಲಕ್ಷ್ಮಿ ಕರ್ಲವಾಡ್‌ಗೆ ನೇಮಕಾತಿ ಆದೇಶ ಸಿಕ್ಕಿಬಿಟ್ಟಿದೆ! ತಾತ್ಕಾಲಿಕ ಪಟ್ಟಿ ಪ್ರಕಟವಾದಂದೇ ನೇಮಕಾತಿಯೂ ನಡೆದುಹೋಗಿದೆ!! ಆಕ್ಷೇಪಣೆಗೆ ಯಾವ ಅವಕಾಶವು ಕೊಟ್ಟಿಲ್ಲ. ಈ ಆದೇಶಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆಯೂ ಇಲ್ಲ. ಹಾಗಾಗಿ ಈ ನೇಮಕಾತಿಗೆ ಯಾವುದೆ ಸಿಂಧುತ್ವವಿಲ್ಲ. ಇಡೀ ಖೋಟಾ ಪ್ರಕ್ರಿಯೆಯಲ್ಲಿ ಕಿಮ್ಸ್ ನಿರ್ದೇಶಕ ಡಾ.ನಾಯಕ್ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ರನ್ನು ಯಾಮಾರಿಸಿದರೋ? ಅಥವಾ ಅನಿಲ್‌ಕುಮಾರ್ ಗೊತ್ತಿದ್ದೂ ಸುಮ್ಮನಿದ್ದಾರೋ ಅರ್ಥವಾಗುವುದಿಲ್ಲವೆಂದು ಕಿಮ್ಸ್‌ನಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿ ಡಾ.ಸುಧಾಕರ್‌ಗೆ ಕಿಮ್ಸ್‌ನ ಅಕ್ರಮ ನೇಮಕಾತಿ ಬಗ್ಗೆ ತಿಳಿದಿದೆಯೇ? ಇನ್ನಾದರು ಸಂಬಂಧಿಸಿದವರು ಎಚ್ಚೆತ್ತು ಪರಿಶಿಷ್ಟ ಪಂಗಡ ಅರ್ಹರಿಗಾದ ಅನ್ಯಾಯ ಸರಿಪಡಿಸುವರಾ? ಅನುದಾನಗಳು ಪೋಲಾಗುತ್ತಿರುವುದು, ಆಗುತ್ತಿರುವ ಆಧ್ವಾನಗಳ ತನಿಖೆ ನಡೆಸುವರಾ? ಕಾದು ನೋಡಬೇಕು.


ಇದನ್ನೂ ಓದಿ: ಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ – ಠಾಣೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...