Homeಕರ್ನಾಟಕಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

- Advertisement -
- Advertisement -

ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಿಮ್ಸ್‌ನಲ್ಲಿ ಅಕ್ರಮ ನೇಮಕಾತಿ, ಅವ್ಯವಹಾರ ಎಡೆಬಿಡದೆ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಡಾ. ಗಜಾನನ ನಾಯಕ್ ಡೀನ್ ಕಮ್ ಡೈರೆಕ್ಟರ್ ಆಗಿಬಂದ ನಂತರ ಕಿಮ್ಸ್‌ನಲ್ಲಿ ಆರ್ಥಿಕ ಅನುದಾನ ದುರ್ಬಳಕೆ ಮಿತಿ ಮೀರಿದೆಯೆಂದು ಅದೇ ಸಂಸ್ಥೆಯಲ್ಲಿ ಅಧೀಕ್ಷಕಿಯಾಗಿದ್ದ ವೀಣಾ ಪಾಟೀಲ್ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಬರೋಬ್ಬರಿ ಏಳು ಪುಟಗಳ ದೂರು ಕೊಟ್ಟಿದ್ದೂ ಆಗಿದೆ.

ಅಕ್ರಮ ನೇಮಕಾತಿ ಮನಸೋ ಇಚ್ಚೆ ಡೈರೆಕ್ಟರ್ ಸಾಹೇಬರು ಮಾಡಿಮುಗಿಸಿದ್ದಾರೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ. ಸುಮಾರು 100 ತಾಂತ್ರಿಕ ಸಿಬ್ಬಂದಿ ಕಿಮ್ಸ್‌ಗೆ ಅತೀ ಜರೂರ್ ಇರುವಾಗ ಲಾಭದಾಯಕವಾದ ತಾತ್ಕಾಲಿಕ ಸ್ವಚ್ಚತಾಗಾರ, ಕಾವಲುಗಾರ ನೇಮಕಾತಿ ಮಾಡಿಕೊಳ್ಳಲಾಗಿದೆ. 80 ಸ್ವಚ್ಛತಾ ಕರ್ಮಚಾರಿಗಳು ಮತ್ತು 30 ಕಾವಲುಗಾರರು ಇದ್ದರೂ ಸಹ ಸುಮಾರು 90 ಅನಾವಶ್ಯಕ ನೇಮಕಾತಿ ನಡೆದಿದೆ. 2021ರ ಜನವರಿಯಲ್ಲಿ ನೇಮಕವಾಗಿರುವ ಈ ಅನರ್ಹರಿಗೆ 2019ರ ಅಕ್ಟೋಬರ್‌ನಿಂದ ಪೂರ್ವಾನ್ವಯವಾಗುವಂತೆ ಸಂಬಳ ನೀಡಲಾಗಿದೆ. ಈ ಮೂರು ತಿಂಗಳ ವೇತವೇ ಹತ್ತಿರತ್ತಿರ 75 ಲಕ್ಷ. ಇದು ಸರ್ಕಾರಿ ಬೊಕ್ಕಸಕ್ಕೆ ಹೊರೆಯೆಂದು ದೂರಲಾಗಿದೆ.

ಡೀನ್ ಡಾ. ಗಜಾನನ ನಾಯಕ್ ಮಾಡಿರುವ ಹಲವು ನೇಮಕಾತಿಗಳಿಗೆ ಹಣಕಾಸು ಇಲಾಖೆಯಿಂದಾಗಲಿ, ಇನ್ನಿತರ ಸಕ್ಷಮ ಪ್ರಾಧಿಕಾರದ್ದಾಗಲಿ ಅನುಮತಿ ಇಲ್ಲ. ತಾತ್ಕಾಲಿಕ ಮತ್ತು ಖಾಯಂ ಬೊಧಕ ಸಿಬ್ಬಂದಿ ನೇಮಕಾತಿ ಎಲ್ಲ ನೀತಿ-ನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದೆ. ಸರ್ಕಾರದಿಂದ ಮಂಜೂರಾತಿಯಿಲ್ಲದ ಹುದ್ದೆಗಳನ್ನು ಹುಟ್ಟು ಹಾಕುವುದರಲ್ಲಿ ಈ ಡೈರೆಕ್ಟರ್ ನಿಸ್ಸೀಮನೆನ್ನುವ ಅಧೀಕ್ಷಕಿ ವೀಣಾ ಪಾಟೀಲ್ ತಾನು ಡೀನ್ ಹೇಳಿದಂತೆ ಕೇಳುವುದಿಲ್ಲವೆಂಬ ಕಾರಣಕ್ಕೆ ತನ್ನ ಕೈಲಿದ್ದ ಆರ್ಥಿಕ ವ್ಯವಹಾರ ಮತ್ತು ನಗದು ವಿಭಾಗ ಬೇರೆಯವರಿಗೆ ವಹಿಸಿದ್ದಾರೆ; ಅಷ್ಟೇ ಅಲ್ಲ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿಲ್ಲದ ’ಹಿರಿಯ ಕಚೇರಿ ಅಧೀಕ್ಷಕಿ’ ಎಂಬ ಬಿರುದು ದಯಪಾಲಿಸಿದ್ದಾರೆಂದು ಆರೋಪಿಸಿದ್ದಾರೆ.

ಡೀನ್ ಡಾ. ಗಜಾನನ ನಾಯಕ್

ಡೀನ್ ಡಾ. ನಾಯಕ್ ತಮ್ಮ ಪರಮಾಪ್ತ ಶಿಷ್ಯೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರನ್ನು ಮೀಸಲಾತಿ ಹಾಗು ನೇಮಕಾತಿ ನಿಯಮಗಳನ್ನೆಲ್ಲ ಧಿಕ್ಕರಿಸಿ ವಿಧಿ ವಿಜ್ಞಾನ ಶಾಸ್ತ್ರ [ಫಾರೆನ್ಸಿಕ್ ಸೈನ್ಸ್] ವಿಭಾಗದ ಸಹಾಯಕ ಅಧ್ಯಾಪಕಿಯಾಗಿ ನೇಮಿಸಿರುವುದು ದೊಡ್ಡ ವಿವಾದ ಹುಟ್ಟು ಹಾಕಿದೆ. ಫೊರೆನ್ಸಿಕ್ ವಿಭಾಗದಲ್ಲಿ ಹುದ್ದೆ ಖಾಲಿಯಿಲ್ಲದಿದ್ದರೂ, ಅವಶ್ಯಕತೆಯಿಲ್ಲದಿದ್ದರೂ ಈ ನೇಮಕಾತಿ ಮಾಡಿಕೊಳ್ಳಲಾಗಿದೆಯೆಂದು ಹೆಸರು ಹೇಳಿಕೊಳ್ಳದ ನೌಕರರು ಹೇಳುತ್ತಾರೆ. ಕೆಲವು ತಿಂಗಳ ಹಿಂದೆ ಆ ಅಧ್ಯಾಪಕಿಗೆ ಯಾವುದೇ ನಿಯಮ ಬದ್ದ ಪ್ರಕಿಯೆಯಿಲ್ಲದೆ ಖಾಯಂ ಮಾಡಿ ಲಕ್ಷಗಟ್ಟಲೆ ಸಂಬಳ ಬರುವಂತೆ ನೋಡಿಕೊಳ್ಳಲಾಗಿದೆ!

ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಖಾಯಂ ಅಧ್ಯಾಪಕರ ನೇಮಿಸುವಾಗ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುಮತಿ, ಅನುಮೋದನೆ ಮತ್ತು ಆದೇಶವಿರಲೇಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರ ನೇಮಕಾತಿಯಲ್ಲಿ ಈ ನಿಯಮಗಳ್ಯಾವುದನ್ನು ಪ್ರಜ್ಞಾಪೂರ್ವಕವಾಗೆ ಪಾಲಿಸಿಲ್ಲ ಎನ್ನಲಾಗಿದೆ. ತರಾತುರಿಯಲ್ಲಿ ಈ ನೇಮಕಾತಿ ನಡೆಸಲಾಗಿದ್ದು, ಡಾ.ನಾಯಕ್ ಕಿಮ್ಸ್ ನಿರ್ದೇಶಕರಾಗಿ ಬಂದ ಒಂದೇ ತಿಂಗಳಲ್ಲಿ ಅಂದರೆ 07-02-2020ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಫೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಗೆ ಬ್ಯಾಕ್‌ಲಾಗ್‌ನಲ್ಲಿ ಒಂದು ಸಹಾಯಕ ಪ್ರಾಧ್ಯಾಪಕಿ ಹುದ್ದಗೆ ಅರ್ಜಿ ಕರೆಯಲಾಗಿದೆ. ವಾಸ್ತವಿಕವಾಗಿ ಕಿಮ್ಸ್‌ನಲ್ಲಿ ಇಂತದೊಂದು ಹುದ್ದೆ ಖಾಲಿಯಿರುವುದಿಲ್ಲ.

ಹಿಂದಿನ ನೇಮಕಾತಿ ಪ್ರಕಟಣೆಯಲ್ಲಿ ಸೂಚಿಸಿದ್ದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹುದ್ದೆಗಳು ಭರ್ತಿಯಾಗದಿದ್ದರಷ್ಟೇ ಅದನ್ನು ಮುಂದಿನ ಅಧಿಸೂಚನೆಯಲ್ಲಿ ಬ್ಯಾಕ್‌ಲಾಗ್ ಎಂದು ಪರಿಗಣಿಸಲಾಗುತ್ತದೆ. ಆದರೆ 8-8-2019 ಮತ್ತು 12-12-2019ರ ನೇಮಕಾತಿ ಪ್ರಕಟಣೆಯಲ್ಲಿ ಸದ್ರಿ ಹುದ್ದೆಯ ಪ್ರಸ್ತಾಪವೇ ಇಲ್ಲ. ಆದರೂ ಫೊರೆನ್ಸಿಕ್ ಸೈನ್ಸ್ -ಅಸಿಸ್ಟೆಂಟ್ ಪ್ರೊಫೆಸರ್ ಎಸ್‌ಟಿ ಲೇಡಿ ಬ್ಯಾಕ್ ಲಾಗ್ ಎಂದು ಸುಳ್ಳು ನಮೂದಿಸಲಾಗಿದೆ! ಕಿಮ್ಸ್‌ನಲ್ಲಿ ಒಟ್ಟೂ 49 ಸಹಾಯಕ ಅಧ್ಯಾಪಕ ಹುದ್ದೆಗಳಿವೆ. ಮೀಸಲಾತಿ ಅನುಪಾತದಂತೆ ಇದರಲ್ಲಿ ಎಸ್‌ಟಿ ವರ್ಗಕ್ಕೆ ಎರಡು ಹುದ್ದೆ ಮೀಸಲಿರಬೇಕು. ಡಾ.ಆಂಜನೇಯ ಎಸ್‌ಟಿ ಪುರುಷ ಮತ್ತು ಭಾಗ್ಯ ಶ್ರೀ ಬೋಯರ್ ಎಸ್‌ಟಿ ಮಹಿಳೆ ಕೋಟಾದಲ್ಲಿ ಆಯ್ಕೆಯಾಗಿದ್ದಾರೆ. ಹೀಗಾಗಿ ಸಧ್ಯ ಎಸ್‌ಟಿ ಪ್ರವರ್ಗದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅವಕಾಶವಿಲ್ಲ. ವಿಧಿವಿಜ್ಞಾನ ವಿಭಾಗಕ್ಕೆ ಮಂಜೂರಾಗಿರುವುದು ಒಂದೇ ಒಂದು ಸಹಾಯಕ ಪ್ರಾಧ್ಯಾಪಕ ಸ್ಥಾನ. ಇದೂ ಕೂಡ ಭರ್ತಿಯಾಗಿದೆ. ಆದ್ದರಿಂದ ಮತ್ತೊಂದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆ ನಡೆಸುವಂತಿಲ್ಲ.

ಇದೆಲ್ಲ ಮರೆಮಾಚಿ ನೇಮಕಾತಿಗೆ ರಹಸ್ಯ ಅಧಿಸೂಚನೆ ಹೊರಡಿಸಲಾಗಿದೆ. ಇದೊಂದು ರಾಜ್ಯ ಮಟ್ಟದ ಆಯ್ಕೆಯಾದ್ದರಿಂದ ರಾಜ್ಯ ಮಟ್ಟದ ಎರಡು ದಿನ ಪತ್ರಿಕೆ [ಒಂದು ಕನ್ನಡ ಮತ್ತೊಂದು ಇಂಗ್ಲಿಷ್] ಎಲ್ಲಾ ಆವೃತ್ತಿಯಲ್ಲಿ ಜಾಹೀರಾತು ನೀಡಬೇಕು. ಆದರೆ ಸ್ಥಳೀಯ ಪತ್ರಿಕೆಯಲ್ಲಷ್ಟೇ ಪ್ರಕಟಣೆ ಬರುವಂತೆ ನೋಡಿಕೊಳ್ಳಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದವರಿಗೆ ನೀಡಬೇಕಾದ 371 [ಜೆ]ದಂತೆ ಶೇ.8 ಮೀಸಲಾತಿಗೂ ಆಸ್ಪದ ಕೊಡದೆ ಸರ್ಕಾರಿ ಆದೇಶ ಧಿಕ್ಕರಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಕ್ಷೇಪಗಳಿಗೆ ಕನಿಷ್ಟ 15 ದಿನ ಕಾಲಾವಕಾಶ ಕೊಡಬೇಕು. ಅಂತಿಮ ಆಯ್ಕೆ ಪಟ್ಟಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆ ಪಡೆದು ನೇಮಕಾತಿ ಆದೇಶ ಕೊಡಬೇಕು. ಆದರೆ ಕಿಮ್ಸ್‌ನ ಫೊರೆನ್ಸಿಕ್ ಪ್ರಾಧ್ಯಾಪಕಿ ನೇಮಕಾತಿ ಪ್ರಹಸನದಲ್ಲಿ 17-02-2020ರಂದು ಸಂದರ್ಶನ ನಡೆಸಿದಂತೆ ದಾಖಲೆ ಸೃಷ್ಟಿಸಲಾಗಿದೆ. 20-07-2020ರಂದು ಡಾ.ಮಹಾಲಕ್ಷ್ಮಿ ಕರ್ಲವಾಡ್‌ಗೆ ನೇಮಕಾತಿ ಆದೇಶ ಸಿಕ್ಕಿಬಿಟ್ಟಿದೆ! ತಾತ್ಕಾಲಿಕ ಪಟ್ಟಿ ಪ್ರಕಟವಾದಂದೇ ನೇಮಕಾತಿಯೂ ನಡೆದುಹೋಗಿದೆ!! ಆಕ್ಷೇಪಣೆಗೆ ಯಾವ ಅವಕಾಶವು ಕೊಟ್ಟಿಲ್ಲ. ಈ ಆದೇಶಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆಯೂ ಇಲ್ಲ. ಹಾಗಾಗಿ ಈ ನೇಮಕಾತಿಗೆ ಯಾವುದೆ ಸಿಂಧುತ್ವವಿಲ್ಲ. ಇಡೀ ಖೋಟಾ ಪ್ರಕ್ರಿಯೆಯಲ್ಲಿ ಕಿಮ್ಸ್ ನಿರ್ದೇಶಕ ಡಾ.ನಾಯಕ್ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ರನ್ನು ಯಾಮಾರಿಸಿದರೋ? ಅಥವಾ ಅನಿಲ್‌ಕುಮಾರ್ ಗೊತ್ತಿದ್ದೂ ಸುಮ್ಮನಿದ್ದಾರೋ ಅರ್ಥವಾಗುವುದಿಲ್ಲವೆಂದು ಕಿಮ್ಸ್‌ನಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿ ಡಾ.ಸುಧಾಕರ್‌ಗೆ ಕಿಮ್ಸ್‌ನ ಅಕ್ರಮ ನೇಮಕಾತಿ ಬಗ್ಗೆ ತಿಳಿದಿದೆಯೇ? ಇನ್ನಾದರು ಸಂಬಂಧಿಸಿದವರು ಎಚ್ಚೆತ್ತು ಪರಿಶಿಷ್ಟ ಪಂಗಡ ಅರ್ಹರಿಗಾದ ಅನ್ಯಾಯ ಸರಿಪಡಿಸುವರಾ? ಅನುದಾನಗಳು ಪೋಲಾಗುತ್ತಿರುವುದು, ಆಗುತ್ತಿರುವ ಆಧ್ವಾನಗಳ ತನಿಖೆ ನಡೆಸುವರಾ? ಕಾದು ನೋಡಬೇಕು.


ಇದನ್ನೂ ಓದಿ: ಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ – ಠಾಣೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...