“ಬೆಂಗಳೂರಿನ ಹಳೆಯ ಕೆರೆಗಳಲ್ಲೊಂದಾದ ಹೊಸಕೆರೆಹಳ್ಳಿಯ ಕೆರೆಯ ಮಧ್ಯೆ ಬಿಬಿಎಂಪಿ ಅಕ್ರಮವಾಗಿ ರಸ್ತೆ ನಿರ್ಮಿಸುತ್ತಿದೆ. ಇದು ಅಕ್ಷಮ್ಯ” ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.
ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ವಿಡಿಯೊ ತುಣುಕನ್ನು ಲಗತ್ತಿಸಿರುವ ಜೆಡಿಎಸ್, “ಅಪಾರ್ಟ್ಮೆಂಟೊಂದರ ಮೌಲ್ಯ ಹೆಚ್ಚಿಸಲು ಈ ಕೃತ್ಯ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಕೆರೆಯನ್ನು ಕಾಪಾಡಬೇಕಾದ ಶಾಸಕ ಮುನಿರತ್ನ ಅವರು ಯಾವುದೇ ಕಾಲ್ಪನಿಕ ವ್ಯಕ್ತಿಗಳ ಹಿಂದೆ ಬಿದ್ದಿದ್ದಾರೆ” ಎಂದು ಉರಿಗೌಡ, ನಂಜೇಗೌಡ ವಿವಾದವನ್ನು ಉಲ್ಲೇಖಿಸಿದೆ.
ಬೆಂಗಳೂರಿನ ಹಳೆಯ ಕೆರೆಗಳಲ್ಲೊಂದಾದ ಹೊಸಕೆರೆಹಳ್ಳಿಯ ಕೆರೆಯ ಮಧ್ಯೆ BBMP ಅಕ್ರಮ ರಸ್ತೆನಿರ್ಮಿಸುತ್ತಿದೆ.ಇದುಅಕ್ಷಮ್ಯ. ಅಪಾರ್ಟ್ಮೆಂಟೊಂದರ ಮೌಲ್ಯ ಹೆಚ್ಚಿಸಲು ಈ ಕೃತ್ಯ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಕೆರೆಯನ್ನು ಕಾಪಾಡಬೇಕಾದ ಶಾಸಕ @MunirathnaMLA ಯಾವುದೊ ಕಾಲ್ಪನಿಕ ವ್ಯಕ್ತಿಗಳ ಹಿಂದೆ ಬಿದ್ದಿದ್ದಾರೆ.1/3 pic.twitter.com/dioNkYIi5I
— Janata Dal Secular (@JanataDal_S) March 21, 2023
“ಕೆರೆಗಳು ನಗರದ ಜೀವಸೆಳೆ, ಅದನ್ನು ರಕ್ಷಿಸಬೇಕೆ ವಿನಃ ಹಾಳುಗೆಡವುದಲ್ಲ. ಕೆರೆಯ ಅಭಿವೃದ್ಧಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡಲಾಗಿದೆ, ಆದರೆ ಕೆರೆಯಿನ್ನೂ ದುರ್ನಾತ ಬೀರುತ್ತಿದೆ. ಕೆರೆಗೆ ಈಗಾಗಲೆ ಖರ್ಚು ಮಾಡಲಾದ ಹಣವನ್ನು ಏನು ಮಾಡಲಾಗಿದೆ ಎಂದು ಮುನಿರತ್ನ ಅವರು ಹೇಳಬೇಕಾಗಿದೆ” ಎಂದು ಒತ್ತಾಯಿಸಿದೆ.
“ಕರೆ ಮಧ್ಯೆ ರಸ್ತೆ ನಿರ್ಮಿಸಲು ಬಿಬಿಎಂಪಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಕೆಟಿಸಿಡಿಎ) ಅನುಮೋದನೆ ಕೂಡಾ ಪಡೆದಿಲ್ಲ ಎಂಬ ವರದಿಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕಮಿಷನ್ ದಂಧೆ ಬಿಟ್ಟು ಇತ್ತ ಕಡೆ ತಲೆ ಹಾಕಿ. ಕಾನೂನು ಮುರಿದು ಕರೆ ಮಧ್ಯೆ ರಸ್ತೆ ನಿರ್ಮಿಸಿದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿ” ಎಂದು ಜೆಡಿಎಸ್ ಆಗ್ರಹಿಸಿದೆ.