Homeಮುಖಪುಟಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ...

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

- Advertisement -
- Advertisement -

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕಣದ ವಿಚಾರಣೆಯು ವಿಳಂಬವಾಗುತ್ತಿದ್ದು, ಜೊತೆಗೆ ಆರೋಪಿ ದೀರ್ಘ ಕಾಲದಿಂದ ಸೆರೆವಾಸದಲ್ಲಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿರುವ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ 2022ರ ಮೇ 30ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದಾಗ್ಯೂ, ಅವರು 2023ರ ಮೇ ಮತ್ತು 2024ರ ಮಾರ್ಚ್ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಚಾರಣೆಯಲ್ಲಿನ ವಿಳಂಬ ಮತ್ತು 18 ತಿಂಗಳ ಸುದೀರ್ಘ ಸೆರೆವಾಸವನ್ನು ಪರಿಗಣಿಸಿ ಮತ್ತು ಪ್ರಕರಣದ ತನಿಖೆ ಪ್ರಾರಂಭಿಸಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಎಂಬ ಅಂಶವನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬಂದಿದ್ದು, ಆರೋಪಿಯು ಜಾಮೀನಿಗೆ ಅರ್ಹರಾಗಿದ್ದಾರೆ” ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.

ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯೊಂದಿಗೆ 50,000 ರೂಪಾಯಿ ಜಾಮೀನಿನ ಮೇಲೆ ನ್ಯಾಯಾಧೀಶರು  ಜಾಮೀನು ಮಂಜೂರು ಮಾಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ 2017ರಲ್ಲಿ ಕೇಂದ್ರೀಯ ತನಿಖಾ ದಳವು(ಸಿಬಿಐ) ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಹಿನ್ನೆಲೆಯಲ್ಲಿ ಇಡಿ ಪ್ರಕರಣದ ದಾಖಲಿಸಿತ್ತು.

ವಿಚಾರಣಾ ನ್ಯಾಯಾಲಯವು ಈ ಹಿಂದೆ 2022ರ ನವೆಂಬರ್ 17ರಂದು ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಅವರು ದೆಹಲಿ ಹೈಕೋರ್ಟ್‌ನಲ್ಲಿ ಆದೇಶವನ್ನು ಪ್ರಶ್ನಿಸಿದ್ದರು. 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡಾ ಅವರಿಗೆ ಜಾಮೀನು ನಿರಾಕರಿಸಿತ್ತು.

ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...