Homeಮುಖಪುಟಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ...

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

- Advertisement -
- Advertisement -

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕಣದ ವಿಚಾರಣೆಯು ವಿಳಂಬವಾಗುತ್ತಿದ್ದು, ಜೊತೆಗೆ ಆರೋಪಿ ದೀರ್ಘ ಕಾಲದಿಂದ ಸೆರೆವಾಸದಲ್ಲಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿರುವ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ 2022ರ ಮೇ 30ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದಾಗ್ಯೂ, ಅವರು 2023ರ ಮೇ ಮತ್ತು 2024ರ ಮಾರ್ಚ್ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಚಾರಣೆಯಲ್ಲಿನ ವಿಳಂಬ ಮತ್ತು 18 ತಿಂಗಳ ಸುದೀರ್ಘ ಸೆರೆವಾಸವನ್ನು ಪರಿಗಣಿಸಿ ಮತ್ತು ಪ್ರಕರಣದ ತನಿಖೆ ಪ್ರಾರಂಭಿಸಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಎಂಬ ಅಂಶವನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬಂದಿದ್ದು, ಆರೋಪಿಯು ಜಾಮೀನಿಗೆ ಅರ್ಹರಾಗಿದ್ದಾರೆ” ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.

ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯೊಂದಿಗೆ 50,000 ರೂಪಾಯಿ ಜಾಮೀನಿನ ಮೇಲೆ ನ್ಯಾಯಾಧೀಶರು  ಜಾಮೀನು ಮಂಜೂರು ಮಾಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ 2017ರಲ್ಲಿ ಕೇಂದ್ರೀಯ ತನಿಖಾ ದಳವು(ಸಿಬಿಐ) ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಹಿನ್ನೆಲೆಯಲ್ಲಿ ಇಡಿ ಪ್ರಕರಣದ ದಾಖಲಿಸಿತ್ತು.

ವಿಚಾರಣಾ ನ್ಯಾಯಾಲಯವು ಈ ಹಿಂದೆ 2022ರ ನವೆಂಬರ್ 17ರಂದು ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಅವರು ದೆಹಲಿ ಹೈಕೋರ್ಟ್‌ನಲ್ಲಿ ಆದೇಶವನ್ನು ಪ್ರಶ್ನಿಸಿದ್ದರು. 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡಾ ಅವರಿಗೆ ಜಾಮೀನು ನಿರಾಕರಿಸಿತ್ತು.

ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...