Homeಮುಖಪುಟನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ:...

ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ: ಅಮಿತ್ ಶಾಗೆ ಪತ್ರ

- Advertisement -
- Advertisement -

“ಕಾಶ್ಮೀರಿ ಜನರನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿಹಾಕಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿಸಲಾಗಿದೆ” ಎಂದು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪಿಸಿದ್ದು ಈ ಕುರಿತು ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿದ ಮರುದಿನವೇ ನನ್ನನ್ನು ಬಂಧಿಸಲಾಗಿದೆ ಎಂದು ಅವರು ತಮ್ಮ ಎರಡನೇ ಧ್ವನಿ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇಲ್ತಿಜಾ ಜಾವೇದ್ ಅವರು ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ಅವರು ಮತ್ತೆ ಮಾಧ್ಯಮಗಳೊಂದಿಗೆ ಮಾತನಾಡಿದರೆ “ಭೀಕರ ಪರಿಣಾಮಗಳ ಎದುರಿಸಬೇಕಾದಗುತ್ತದೆ ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿ ಹನ್ನೆರಡನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಮುಖ್ಯವಾಹಿನಿಯ ರಾಜಕೀಯ ನಾಯಕರು ಇನ್ನೂ ಬಂಧನದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಬಂಧಿತರಾಗಿದ್ದಾರೆ.

“ಇಂದು ದೇಶದ ಉಳಿದ ಭಾಗವು ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದರೆ, ಕಾಶ್ಮೀರಿಗಳನ್ನು ಪ್ರಾಣಿಗಳಂತೆ ಪಂಜರ ಇಡಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿತವಾಗಿದೆ” ಎಂದಿರುವ ಅವರು ನನ್ನನ್ನು ನೋಡಲು ಯಾರು ಬರುತ್ತಿದ್ದಾರೆ, ಅವರನ್ನು ಒಳಗೆ ಬಿಡದೇ ಕಳುಹಿಸಲಾಗುತ್ತಿದೆ. ಅವರು ಯಾರೆಂದು ಸಹ ನನಗೆ ಹೇಳುತ್ತಿಲ್ಲ. ನನ್ನನ್ನು ಮನೆಯಿಂದ ಹೊರಬರಲು ಬಿಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ತನ್ನ ಬಂಧನದ ಬಗ್ಗೆ ವಿವರಣೆ ಕೇಳಲು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ, ಭದ್ರತಾ ಸಿಬ್ಬಂದಿಯು ನನ್ನ ಮಾಧ್ಯಮ ಸಂದರ್ಶನಗಳು ನನ್ನ ಬಂಧನಕ್ಕೆ ಕಾರಣವೆಂದು ಉಲ್ಲೇಖಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಇಲ್ಲಿ ನಾಗರಿಕನಿಗೆ ಮಾತನಾಡಲು ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ… ನಿಮ್ಮ ವಿರುದ್ಧ ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಯುದ್ಧ ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಎಂದು ಆಡಿಯೊ ಸಂದೇಶದೊಂದಿಗೆ ಬಿಡುಗಡೆಯಾದ ಪತ್ರದಲ್ಲಿ ಹೇಳಿದ್ದಾರೆ.

“ನನ್ನನ್ನು ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಮತ್ತು ನಾನು ನಿರಂತರ ಕಣ್ಗಾವಲಿನಲ್ಲಿದ್ದೇನೆ. ಕಾಶ್ಮೀರಿಗಳ ಜೊತೆಗೆ ನನ್ನ ಜೀವನಕ್ಕೂ ಬೆದರಿಕೆಯಿದೆ” ಎಂದು ಅವರು ಆಡಿಯೋ ಸಂದೇಶದಲ್ಲಿ ವಿವರಿಸಿದ್ದಾರೆ.

ಕಳೆದ ಭಾನುವಾರ ಮಧ್ಯರಾತ್ರಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರೊಂದಿಗೆ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿ ಶ್ರೀನಗರದ ಮನೆಯಿಂದ ಮರುದಿನ ಹತ್ತಿರದ ಸರ್ಕಾರಿ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಈಗ ಅವರನ್ನು ಗೃಹಬಂಧನದಲ್ಲಿರಿಸಿದ್ದು ಜೈಲು ಖೈದಿಗಳಿಗೆ ಕೊಡುವ ಊಟ ಕೊಡಲಾಗುತ್ತಿದೆ ಎಂದು ವರದಿಯಾಗಿದೆ.

ಅದೇ ರೀತಿ ಐಎಎಸ್ ಅಧಿಕಾರಿಯಾಗಿದ್ದ ರಾಜಕಾರಣಿ ಷಾ ಫಾಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಿ ಶ್ರೀನಗರಕ್ಕೆ ಕಳುಹಿಸಲಾಯಿತು, ಅಲ್ಲಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿರಿಸಲಾಗಿದೆ. ಅವರು ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕಳೆದ ವಾರ ತನ್ನ ಮೊದಲ ಆಡಿಯೊ ಸಂದೇಶದಲ್ಲಿ, ಇಲ್ತಿಜಾ ಜಾವೇದ್ ತನ್ನ ತಾಯಿಗೆ ವಕೀಲರು ಅಥವಾ ಪಕ್ಷದ ಕಾರ್ಯಕರ್ತರೊಡನೆ ಮಾತನಾಡಲು ಸಹ ಅವಕಾಶ ನೀಡದೆ, ಏಕಾಂತದ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಸಂಪೂರ್ಣ ಸಂವಹನ ಕಡಿತದ ಭಾಗವಾಗಿ, ಕಾಶ್ಮೀರ ಕಣಿವೆಯಲ್ಲಿ ಫೋನ್ ಸೇವೆಗಳು ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ತರಹದ ನಿರ್ಬಂಧಗಳು ಜಾರಿಯಲ್ಲಿವೆ. ಉನ್ನತ ಅಧಿಕಾರಿಗಳು ಸಂವಹನ ನಡೆಸಲು ಉಪಗ್ರಹ ಫೋನ್‌ಗಳನ್ನು ಬಳಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...