Homeಮುಖಪುಟನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ:...

ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ: ಅಮಿತ್ ಶಾಗೆ ಪತ್ರ

- Advertisement -
- Advertisement -

“ಕಾಶ್ಮೀರಿ ಜನರನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿಹಾಕಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿಸಲಾಗಿದೆ” ಎಂದು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪಿಸಿದ್ದು ಈ ಕುರಿತು ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿದ ಮರುದಿನವೇ ನನ್ನನ್ನು ಬಂಧಿಸಲಾಗಿದೆ ಎಂದು ಅವರು ತಮ್ಮ ಎರಡನೇ ಧ್ವನಿ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇಲ್ತಿಜಾ ಜಾವೇದ್ ಅವರು ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ಅವರು ಮತ್ತೆ ಮಾಧ್ಯಮಗಳೊಂದಿಗೆ ಮಾತನಾಡಿದರೆ “ಭೀಕರ ಪರಿಣಾಮಗಳ ಎದುರಿಸಬೇಕಾದಗುತ್ತದೆ ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿ ಹನ್ನೆರಡನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಮುಖ್ಯವಾಹಿನಿಯ ರಾಜಕೀಯ ನಾಯಕರು ಇನ್ನೂ ಬಂಧನದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಬಂಧಿತರಾಗಿದ್ದಾರೆ.

“ಇಂದು ದೇಶದ ಉಳಿದ ಭಾಗವು ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದರೆ, ಕಾಶ್ಮೀರಿಗಳನ್ನು ಪ್ರಾಣಿಗಳಂತೆ ಪಂಜರ ಇಡಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿತವಾಗಿದೆ” ಎಂದಿರುವ ಅವರು ನನ್ನನ್ನು ನೋಡಲು ಯಾರು ಬರುತ್ತಿದ್ದಾರೆ, ಅವರನ್ನು ಒಳಗೆ ಬಿಡದೇ ಕಳುಹಿಸಲಾಗುತ್ತಿದೆ. ಅವರು ಯಾರೆಂದು ಸಹ ನನಗೆ ಹೇಳುತ್ತಿಲ್ಲ. ನನ್ನನ್ನು ಮನೆಯಿಂದ ಹೊರಬರಲು ಬಿಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ತನ್ನ ಬಂಧನದ ಬಗ್ಗೆ ವಿವರಣೆ ಕೇಳಲು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ, ಭದ್ರತಾ ಸಿಬ್ಬಂದಿಯು ನನ್ನ ಮಾಧ್ಯಮ ಸಂದರ್ಶನಗಳು ನನ್ನ ಬಂಧನಕ್ಕೆ ಕಾರಣವೆಂದು ಉಲ್ಲೇಖಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಇಲ್ಲಿ ನಾಗರಿಕನಿಗೆ ಮಾತನಾಡಲು ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ… ನಿಮ್ಮ ವಿರುದ್ಧ ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಯುದ್ಧ ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಎಂದು ಆಡಿಯೊ ಸಂದೇಶದೊಂದಿಗೆ ಬಿಡುಗಡೆಯಾದ ಪತ್ರದಲ್ಲಿ ಹೇಳಿದ್ದಾರೆ.

“ನನ್ನನ್ನು ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಮತ್ತು ನಾನು ನಿರಂತರ ಕಣ್ಗಾವಲಿನಲ್ಲಿದ್ದೇನೆ. ಕಾಶ್ಮೀರಿಗಳ ಜೊತೆಗೆ ನನ್ನ ಜೀವನಕ್ಕೂ ಬೆದರಿಕೆಯಿದೆ” ಎಂದು ಅವರು ಆಡಿಯೋ ಸಂದೇಶದಲ್ಲಿ ವಿವರಿಸಿದ್ದಾರೆ.

ಕಳೆದ ಭಾನುವಾರ ಮಧ್ಯರಾತ್ರಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರೊಂದಿಗೆ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿ ಶ್ರೀನಗರದ ಮನೆಯಿಂದ ಮರುದಿನ ಹತ್ತಿರದ ಸರ್ಕಾರಿ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಈಗ ಅವರನ್ನು ಗೃಹಬಂಧನದಲ್ಲಿರಿಸಿದ್ದು ಜೈಲು ಖೈದಿಗಳಿಗೆ ಕೊಡುವ ಊಟ ಕೊಡಲಾಗುತ್ತಿದೆ ಎಂದು ವರದಿಯಾಗಿದೆ.

ಅದೇ ರೀತಿ ಐಎಎಸ್ ಅಧಿಕಾರಿಯಾಗಿದ್ದ ರಾಜಕಾರಣಿ ಷಾ ಫಾಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಿ ಶ್ರೀನಗರಕ್ಕೆ ಕಳುಹಿಸಲಾಯಿತು, ಅಲ್ಲಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿರಿಸಲಾಗಿದೆ. ಅವರು ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕಳೆದ ವಾರ ತನ್ನ ಮೊದಲ ಆಡಿಯೊ ಸಂದೇಶದಲ್ಲಿ, ಇಲ್ತಿಜಾ ಜಾವೇದ್ ತನ್ನ ತಾಯಿಗೆ ವಕೀಲರು ಅಥವಾ ಪಕ್ಷದ ಕಾರ್ಯಕರ್ತರೊಡನೆ ಮಾತನಾಡಲು ಸಹ ಅವಕಾಶ ನೀಡದೆ, ಏಕಾಂತದ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಸಂಪೂರ್ಣ ಸಂವಹನ ಕಡಿತದ ಭಾಗವಾಗಿ, ಕಾಶ್ಮೀರ ಕಣಿವೆಯಲ್ಲಿ ಫೋನ್ ಸೇವೆಗಳು ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ತರಹದ ನಿರ್ಬಂಧಗಳು ಜಾರಿಯಲ್ಲಿವೆ. ಉನ್ನತ ಅಧಿಕಾರಿಗಳು ಸಂವಹನ ನಡೆಸಲು ಉಪಗ್ರಹ ಫೋನ್‌ಗಳನ್ನು ಬಳಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...