Homeಮುಖಪುಟನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ:...

ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ: ಅಮಿತ್ ಶಾಗೆ ಪತ್ರ

- Advertisement -
- Advertisement -

“ಕಾಶ್ಮೀರಿ ಜನರನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿಹಾಕಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿಸಲಾಗಿದೆ” ಎಂದು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪಿಸಿದ್ದು ಈ ಕುರಿತು ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿದ ಮರುದಿನವೇ ನನ್ನನ್ನು ಬಂಧಿಸಲಾಗಿದೆ ಎಂದು ಅವರು ತಮ್ಮ ಎರಡನೇ ಧ್ವನಿ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇಲ್ತಿಜಾ ಜಾವೇದ್ ಅವರು ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ಅವರು ಮತ್ತೆ ಮಾಧ್ಯಮಗಳೊಂದಿಗೆ ಮಾತನಾಡಿದರೆ “ಭೀಕರ ಪರಿಣಾಮಗಳ ಎದುರಿಸಬೇಕಾದಗುತ್ತದೆ ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿ ಹನ್ನೆರಡನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಮುಖ್ಯವಾಹಿನಿಯ ರಾಜಕೀಯ ನಾಯಕರು ಇನ್ನೂ ಬಂಧನದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಬಂಧಿತರಾಗಿದ್ದಾರೆ.

“ಇಂದು ದೇಶದ ಉಳಿದ ಭಾಗವು ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದರೆ, ಕಾಶ್ಮೀರಿಗಳನ್ನು ಪ್ರಾಣಿಗಳಂತೆ ಪಂಜರ ಇಡಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿತವಾಗಿದೆ” ಎಂದಿರುವ ಅವರು ನನ್ನನ್ನು ನೋಡಲು ಯಾರು ಬರುತ್ತಿದ್ದಾರೆ, ಅವರನ್ನು ಒಳಗೆ ಬಿಡದೇ ಕಳುಹಿಸಲಾಗುತ್ತಿದೆ. ಅವರು ಯಾರೆಂದು ಸಹ ನನಗೆ ಹೇಳುತ್ತಿಲ್ಲ. ನನ್ನನ್ನು ಮನೆಯಿಂದ ಹೊರಬರಲು ಬಿಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ತನ್ನ ಬಂಧನದ ಬಗ್ಗೆ ವಿವರಣೆ ಕೇಳಲು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ, ಭದ್ರತಾ ಸಿಬ್ಬಂದಿಯು ನನ್ನ ಮಾಧ್ಯಮ ಸಂದರ್ಶನಗಳು ನನ್ನ ಬಂಧನಕ್ಕೆ ಕಾರಣವೆಂದು ಉಲ್ಲೇಖಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಇಲ್ಲಿ ನಾಗರಿಕನಿಗೆ ಮಾತನಾಡಲು ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ… ನಿಮ್ಮ ವಿರುದ್ಧ ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಯುದ್ಧ ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಎಂದು ಆಡಿಯೊ ಸಂದೇಶದೊಂದಿಗೆ ಬಿಡುಗಡೆಯಾದ ಪತ್ರದಲ್ಲಿ ಹೇಳಿದ್ದಾರೆ.

“ನನ್ನನ್ನು ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಮತ್ತು ನಾನು ನಿರಂತರ ಕಣ್ಗಾವಲಿನಲ್ಲಿದ್ದೇನೆ. ಕಾಶ್ಮೀರಿಗಳ ಜೊತೆಗೆ ನನ್ನ ಜೀವನಕ್ಕೂ ಬೆದರಿಕೆಯಿದೆ” ಎಂದು ಅವರು ಆಡಿಯೋ ಸಂದೇಶದಲ್ಲಿ ವಿವರಿಸಿದ್ದಾರೆ.

ಕಳೆದ ಭಾನುವಾರ ಮಧ್ಯರಾತ್ರಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರೊಂದಿಗೆ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿ ಶ್ರೀನಗರದ ಮನೆಯಿಂದ ಮರುದಿನ ಹತ್ತಿರದ ಸರ್ಕಾರಿ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಈಗ ಅವರನ್ನು ಗೃಹಬಂಧನದಲ್ಲಿರಿಸಿದ್ದು ಜೈಲು ಖೈದಿಗಳಿಗೆ ಕೊಡುವ ಊಟ ಕೊಡಲಾಗುತ್ತಿದೆ ಎಂದು ವರದಿಯಾಗಿದೆ.

ಅದೇ ರೀತಿ ಐಎಎಸ್ ಅಧಿಕಾರಿಯಾಗಿದ್ದ ರಾಜಕಾರಣಿ ಷಾ ಫಾಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಿ ಶ್ರೀನಗರಕ್ಕೆ ಕಳುಹಿಸಲಾಯಿತು, ಅಲ್ಲಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿರಿಸಲಾಗಿದೆ. ಅವರು ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕಳೆದ ವಾರ ತನ್ನ ಮೊದಲ ಆಡಿಯೊ ಸಂದೇಶದಲ್ಲಿ, ಇಲ್ತಿಜಾ ಜಾವೇದ್ ತನ್ನ ತಾಯಿಗೆ ವಕೀಲರು ಅಥವಾ ಪಕ್ಷದ ಕಾರ್ಯಕರ್ತರೊಡನೆ ಮಾತನಾಡಲು ಸಹ ಅವಕಾಶ ನೀಡದೆ, ಏಕಾಂತದ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಸಂಪೂರ್ಣ ಸಂವಹನ ಕಡಿತದ ಭಾಗವಾಗಿ, ಕಾಶ್ಮೀರ ಕಣಿವೆಯಲ್ಲಿ ಫೋನ್ ಸೇವೆಗಳು ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ತರಹದ ನಿರ್ಬಂಧಗಳು ಜಾರಿಯಲ್ಲಿವೆ. ಉನ್ನತ ಅಧಿಕಾರಿಗಳು ಸಂವಹನ ನಡೆಸಲು ಉಪಗ್ರಹ ಫೋನ್‌ಗಳನ್ನು ಬಳಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...