Homeಮುಖಪುಟನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ:...

ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ: ಅಮಿತ್ ಶಾಗೆ ಪತ್ರ

- Advertisement -
- Advertisement -

“ಕಾಶ್ಮೀರಿ ಜನರನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿಹಾಕಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿಸಲಾಗಿದೆ” ಎಂದು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪಿಸಿದ್ದು ಈ ಕುರಿತು ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿದ ಮರುದಿನವೇ ನನ್ನನ್ನು ಬಂಧಿಸಲಾಗಿದೆ ಎಂದು ಅವರು ತಮ್ಮ ಎರಡನೇ ಧ್ವನಿ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇಲ್ತಿಜಾ ಜಾವೇದ್ ಅವರು ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ಅವರು ಮತ್ತೆ ಮಾಧ್ಯಮಗಳೊಂದಿಗೆ ಮಾತನಾಡಿದರೆ “ಭೀಕರ ಪರಿಣಾಮಗಳ ಎದುರಿಸಬೇಕಾದಗುತ್ತದೆ ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿ ಹನ್ನೆರಡನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಮುಖ್ಯವಾಹಿನಿಯ ರಾಜಕೀಯ ನಾಯಕರು ಇನ್ನೂ ಬಂಧನದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಬಂಧಿತರಾಗಿದ್ದಾರೆ.

“ಇಂದು ದೇಶದ ಉಳಿದ ಭಾಗವು ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದರೆ, ಕಾಶ್ಮೀರಿಗಳನ್ನು ಪ್ರಾಣಿಗಳಂತೆ ಪಂಜರ ಇಡಲಾಗಿದೆ ಮತ್ತು ಮೂಲಭೂತ ಮಾನವ ಹಕ್ಕುಗಳಿಂದ ವಂಚಿತವಾಗಿದೆ” ಎಂದಿರುವ ಅವರು ನನ್ನನ್ನು ನೋಡಲು ಯಾರು ಬರುತ್ತಿದ್ದಾರೆ, ಅವರನ್ನು ಒಳಗೆ ಬಿಡದೇ ಕಳುಹಿಸಲಾಗುತ್ತಿದೆ. ಅವರು ಯಾರೆಂದು ಸಹ ನನಗೆ ಹೇಳುತ್ತಿಲ್ಲ. ನನ್ನನ್ನು ಮನೆಯಿಂದ ಹೊರಬರಲು ಬಿಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ತನ್ನ ಬಂಧನದ ಬಗ್ಗೆ ವಿವರಣೆ ಕೇಳಲು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ, ಭದ್ರತಾ ಸಿಬ್ಬಂದಿಯು ನನ್ನ ಮಾಧ್ಯಮ ಸಂದರ್ಶನಗಳು ನನ್ನ ಬಂಧನಕ್ಕೆ ಕಾರಣವೆಂದು ಉಲ್ಲೇಖಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಇಲ್ಲಿ ನಾಗರಿಕನಿಗೆ ಮಾತನಾಡಲು ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ… ನಿಮ್ಮ ವಿರುದ್ಧ ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಯುದ್ಧ ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಎಂದು ಆಡಿಯೊ ಸಂದೇಶದೊಂದಿಗೆ ಬಿಡುಗಡೆಯಾದ ಪತ್ರದಲ್ಲಿ ಹೇಳಿದ್ದಾರೆ.

“ನನ್ನನ್ನು ಅಪರಾಧಿಯಂತೆ ಪರಿಗಣಿಸಲಾಗುತ್ತಿದೆ ಮತ್ತು ನಾನು ನಿರಂತರ ಕಣ್ಗಾವಲಿನಲ್ಲಿದ್ದೇನೆ. ಕಾಶ್ಮೀರಿಗಳ ಜೊತೆಗೆ ನನ್ನ ಜೀವನಕ್ಕೂ ಬೆದರಿಕೆಯಿದೆ” ಎಂದು ಅವರು ಆಡಿಯೋ ಸಂದೇಶದಲ್ಲಿ ವಿವರಿಸಿದ್ದಾರೆ.

ಕಳೆದ ಭಾನುವಾರ ಮಧ್ಯರಾತ್ರಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರೊಂದಿಗೆ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿ ಶ್ರೀನಗರದ ಮನೆಯಿಂದ ಮರುದಿನ ಹತ್ತಿರದ ಸರ್ಕಾರಿ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಈಗ ಅವರನ್ನು ಗೃಹಬಂಧನದಲ್ಲಿರಿಸಿದ್ದು ಜೈಲು ಖೈದಿಗಳಿಗೆ ಕೊಡುವ ಊಟ ಕೊಡಲಾಗುತ್ತಿದೆ ಎಂದು ವರದಿಯಾಗಿದೆ.

ಅದೇ ರೀತಿ ಐಎಎಸ್ ಅಧಿಕಾರಿಯಾಗಿದ್ದ ರಾಜಕಾರಣಿ ಷಾ ಫಾಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಿ ಶ್ರೀನಗರಕ್ಕೆ ಕಳುಹಿಸಲಾಯಿತು, ಅಲ್ಲಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿರಿಸಲಾಗಿದೆ. ಅವರು ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕಳೆದ ವಾರ ತನ್ನ ಮೊದಲ ಆಡಿಯೊ ಸಂದೇಶದಲ್ಲಿ, ಇಲ್ತಿಜಾ ಜಾವೇದ್ ತನ್ನ ತಾಯಿಗೆ ವಕೀಲರು ಅಥವಾ ಪಕ್ಷದ ಕಾರ್ಯಕರ್ತರೊಡನೆ ಮಾತನಾಡಲು ಸಹ ಅವಕಾಶ ನೀಡದೆ, ಏಕಾಂತದ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಸಂಪೂರ್ಣ ಸಂವಹನ ಕಡಿತದ ಭಾಗವಾಗಿ, ಕಾಶ್ಮೀರ ಕಣಿವೆಯಲ್ಲಿ ಫೋನ್ ಸೇವೆಗಳು ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕರ್ಫ್ಯೂ ತರಹದ ನಿರ್ಬಂಧಗಳು ಜಾರಿಯಲ್ಲಿವೆ. ಉನ್ನತ ಅಧಿಕಾರಿಗಳು ಸಂವಹನ ನಡೆಸಲು ಉಪಗ್ರಹ ಫೋನ್‌ಗಳನ್ನು ಬಳಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....