Homeಕರ್ನಾಟಕನನಗೆ 70 ವರ್ಷ ವಯಸ್ಸಾಗಿದೆ, 700 ಕಿ.ಮೀ. ಸಂಚಾರ ಮಾಡಲು ಆಗುವುದಿಲ್ಲ: ಡಿಸಿಎಂ ಕಾರಜೋಳ

ನನಗೆ 70 ವರ್ಷ ವಯಸ್ಸಾಗಿದೆ, 700 ಕಿ.ಮೀ. ಸಂಚಾರ ಮಾಡಲು ಆಗುವುದಿಲ್ಲ: ಡಿಸಿಎಂ ಕಾರಜೋಳ

- Advertisement -
- Advertisement -

ನನಗೆ ಎಪ್ಪತ್ತು ವರ್ಷ ವಯಸ್ಸಾಗಿದೆ, ನಾನು ಮತ್ತು ನನ್ನ ಕುಟುಂಬದ ಸದಸ್ಯರು ಕೊರೋನ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ. ಆದ್ದರಿಂದ 700 ಕಿ.ಮೀ ಸಂಚಾರ ಮಾಡಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಣ್ಣೀರಿಟ್ಟಿದ್ದಾರೆ.

ಉಪಚುನಾವಣಾ ಪ್ರಚಾರಕ್ಕೆ ತೆರಳುವ ನಾಯಕರು ತಮ್ಮ ಕ್ಷೇತ್ರಗಳಲ್ಲಿನ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವುದಿಲ್ಲ ಎಂದು ಪ್ರತಿಪಕ್ಷಗಳು ಉತ್ತರ ಕರ್ನಾಟಕದಲ್ಲಿನ ಪ್ರವಾಹದ ಹಿನ್ನಲೆಯಲ್ಲಿ ಆರೋಪಿಸಿದ್ದವು.

ಇದನ್ನೂ ಓದಿ: ಕಾರಜೋಳರಿಗೊಂದು ಕಿವಿಮಾತು : ಬಿ.ಚಂದ್ರೇಗೌಡರ ಬಹಿರಂಗ ಪತ್ರ

ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಖಾಸಗಿ ವಾಹಿನಿಯ ಜೊತೆ ಮಾತನಾಡುತ್ತಾ, ”ನನ್ನ ಪರಿಸ್ಥಿತಿಯನ್ನು ತಿಳಿಯದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಕಳುಹಿಸಿದ್ದಾರೆ. ನಾನು ಅತ್ಯಂತ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ, ಒಂದು ಘಟನೆಯನ್ನು ಇಟ್ಟುಕೊಂಡು ಒಬ್ಬ ವ್ಯಕ್ತಿಯನ್ನು ಅಳೆಯುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಇಷ್ಟು ವರ್ಷ ಯಾವ ರೀತಿ ಕೆಲಸ ಮಾಡಿದ್ದೇನೆ, ಕೊರೊನಾ ಸಮಯದಲ್ಲಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ಎಲ್ಲರಿಗೂ ಗೊತ್ತು. ಇದೀಗ ನಾನು, ನನ್ನ ಕುಟುಂಬ ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದೇವೆ. ಹೀಗಾಗಿ 700 ಕಿ.ಮೀ. ಸಂಚಾರ ಮಾಡಲು ಆಗುವುದಿಲ್ಲ” ಎಂದು ಹೇಳಿದ್ದಾರೆ.

ಶಿರಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಬಂದು ಮುಖ ತೋರಿಸಿ ಎಂದು ಕೇಳಿಕೊಂಡಿದ್ದರು. ಹೀಗಾಗಿ ಅಲ್ಲಿಗೆ ತೆರಳಿದ್ದೆ ಎಂದು ತಮ್ಮ ಶಿರಾ ಪ್ರವಾಸದ ಬಗ್ಗೆ ಸ್ಪಷ್ಟಣೆ ನೀಡಿದ ಅವರು, “ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಶ್ರಮಿಸುತ್ತಿದ್ದಾರೆ. ಜನರು ಅಗತ್ಯ ಸಹಕಾರ ನೀಡಬೇಕು. ಸರಕಾರ ಜನರಿಗೆ ಎಲ್ಲ ರೀತಿಯಲ್ಲಿಯೂ ನೆರವಾಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ: ಹೆಸರೇನೋ ಬದಲಾಯಿತು – ಕಲ್ಯಾಣ ಎಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...