Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...