Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...