Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...