Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...