Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...