Homeಕರ್ನಾಟಕನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

ನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

- Advertisement -
- Advertisement -

ತಾನು ತಾಂತ್ರಿಕವಾಗಿ ಮತ್ತು ಮಾನಸಿಕವಾಗಿ ಈಗಲೂ ಜೆಡಿಎಸ್‌ನಲ್ಲಿ ಇದ್ದೇನೆ ಮತ್ತು ರಾಜ್ಯದಲ್ಲಿ ಪಕ್ಷದ ನೇತೃತ್ವ ವಹಿಸಿದ್ದೇನೆ. ಏಕೆಂದರೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿರುವುದು ತಪ್ಪಾಗಿದೆ ಎಂದು ಕರ್ನಾಟಕ ಜೆಡಿಎಸ್ ಪದಚ್ಯುತ ಅಧ್ಯಕ್ಷ ಸಿ ಎಂ ಇಬ್ರಾಹಿಂ ಪುನರುಚ್ಛರಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತೆ ಮನವಿ ಮಾಡಿದ್ದಾರೆ.  ಇದಲ್ಲದೆ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿರುವ ಕುರಿತು ಕಾನೂನು ಹೋರಾಟದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ದೇವೇಗೌಡರು ಗುರುವಾರ ಪಕ್ಷದ ಕರ್ನಾಟಕ ಘಟಕವನ್ನು ವಿಸರ್ಜಿಸಿದ್ದರು.  ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹೀಂ ಅವರನ್ನು ತೆಗೆದು ಹಾಕಿ ಕುಮಾರಸ್ವಾಮಿ ಅವರನ್ನು ನೇಮಿಸಿದ್ದರು.

ದೇವೇಗೌಡರು ಹಿರಿಯ ನಾಯಕರಾಗಿದ್ದು, ಬಿಜೆಪಿ ಜತೆಗಿನ ಮೈತ್ರಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮಾದ್ಯಮದ ಮೂಲಕ ಮತ್ತೊಮ್ಮೆ ಕೈಮುಗಿದು ವಿನಂತಿಸುತ್ತೇನೆ. ಕೇರಳ, ತಮಿಳುನಾಡು, ರಾಜಸ್ಥಾನ ಜೆಡಿಎಸ್‌ ಘಟಕಗಳು ಬಿಜೆಪಿ ಜತೆ ಹೋಗುವ ನಿರ್ಧಾರಕ್ಕೆ ವಿರುದ್ಧವಾಗಿವೆ ಎಂದು ಇಬ್ರಾಹೀಂ ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್‌ ಹಲವು ವರ್ಷಗಳಿಂದ ಪ್ರಸ್ತಾಪಿಸಿದ ಸಿದ್ದಾಂತಕ್ಕೆ ಬದ್ಧರಾಗಿರುವಂತೆ ದೇವೇಗೌಡ ಅವರಿಗೆ ಸಿಎಂ ಇಬ್ರಾಹೀಂ ಹೇಳಿದ್ದು,  ಈ ವಾರದ ಕೊನೆಯಲ್ಲಿ ಮುಂಬೈಗೆ ತೆರಳಿ ಅಲ್ಲಿನ ಜೆಡಿಎಸ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದು ಹೇಗೆ ಎಂಬುದು ಗೊತ್ತಿದೆ. ನಾನು 1995ರಲ್ಲಿ ಜನತಾದಳವನ್ನು ಹೇಗೆ ಕಟ್ಟಿದ್ದೇನೆ ಎಂಬುದು ಅವರಿಗೆ ತಿಳಿದಿದೆ. ಇದು ಅವರಿಗೆ ಹೊಸದಲ್ಲ, ಅವರಿಗೆ ತಿಳಿದಿದೆ. ಆದರೆ ಏನು ಮಾಡುವುದು ಕುಮಾರಸ್ವಾಮಿ ದೇವೇಗೌಡರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನನಗೆ ಸಹೋದರರಂತೆ, ದಯವಿಟ್ಟು ಬಿಜೆಪಿ ಜೊತೆ ಹೋಗುವುದನ್ನು ಮರುಪರಿಶೀಲಿಸಿ. ಬಾಬಾಸಾಹೇಬ್ ಅಂಬೇಡ್ಕರ್, ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು  ಅವರ ಸಿದ್ಧಾಂತಗಳನ್ನು ಒಪ್ಪಿಕೊಳ್ಳಿ. ನಮಗೆ ಪ್ರಧಾನಿಯವರ ಬಗ್ಗೆ ಗೌರವವಿದೆ. ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ನಮಗೆ ವೈಯಕ್ತಿಕವಾಗಿ ಏನೂ ದ್ವೇಷ ಇಲ್ಲ. ಆದರೆ ಸೈದ್ಧಾಂತಿಕವಾಗಿ ನಾವು ವಿಭಿನ್ನ ಹಾದಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೊದಲು ಸಿಎಂ ಇಬ್ರಾಹೀಂ ಮಾದ್ಯಮಗಳ ಜೊತೆ ಮತನಾಡುತ್ತಾ, ನಾವೇ ಒರಿಜಿನಲ್‌ ಜೆಡಿಎಸ್‌, ನಾನು ಅದರ ಅಧ್ಯಕ್ಷ, ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. INDIA ಒಕ್ಕೂಟಕ್ಕೆ ನಮ್ಮ ಬೆಂಬಲ ಎಂದು ಹೇಳಿದ್ದರು. ಇದರ ಮರು ದಿನವೇ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಕರ್ನಾಟಕ ರಾಜ್ಯ ಜೆಡಿಎಸ್‌ ಘಟಕವನ್ನು ವಿಸರ್ಜಿಸಿದ್ದರು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...