Homeಕರ್ನಾಟಕನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

ನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

- Advertisement -
- Advertisement -

ತಾನು ತಾಂತ್ರಿಕವಾಗಿ ಮತ್ತು ಮಾನಸಿಕವಾಗಿ ಈಗಲೂ ಜೆಡಿಎಸ್‌ನಲ್ಲಿ ಇದ್ದೇನೆ ಮತ್ತು ರಾಜ್ಯದಲ್ಲಿ ಪಕ್ಷದ ನೇತೃತ್ವ ವಹಿಸಿದ್ದೇನೆ. ಏಕೆಂದರೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿರುವುದು ತಪ್ಪಾಗಿದೆ ಎಂದು ಕರ್ನಾಟಕ ಜೆಡಿಎಸ್ ಪದಚ್ಯುತ ಅಧ್ಯಕ್ಷ ಸಿ ಎಂ ಇಬ್ರಾಹಿಂ ಪುನರುಚ್ಛರಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತೆ ಮನವಿ ಮಾಡಿದ್ದಾರೆ.  ಇದಲ್ಲದೆ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿರುವ ಕುರಿತು ಕಾನೂನು ಹೋರಾಟದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ದೇವೇಗೌಡರು ಗುರುವಾರ ಪಕ್ಷದ ಕರ್ನಾಟಕ ಘಟಕವನ್ನು ವಿಸರ್ಜಿಸಿದ್ದರು.  ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹೀಂ ಅವರನ್ನು ತೆಗೆದು ಹಾಕಿ ಕುಮಾರಸ್ವಾಮಿ ಅವರನ್ನು ನೇಮಿಸಿದ್ದರು.

ದೇವೇಗೌಡರು ಹಿರಿಯ ನಾಯಕರಾಗಿದ್ದು, ಬಿಜೆಪಿ ಜತೆಗಿನ ಮೈತ್ರಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮಾದ್ಯಮದ ಮೂಲಕ ಮತ್ತೊಮ್ಮೆ ಕೈಮುಗಿದು ವಿನಂತಿಸುತ್ತೇನೆ. ಕೇರಳ, ತಮಿಳುನಾಡು, ರಾಜಸ್ಥಾನ ಜೆಡಿಎಸ್‌ ಘಟಕಗಳು ಬಿಜೆಪಿ ಜತೆ ಹೋಗುವ ನಿರ್ಧಾರಕ್ಕೆ ವಿರುದ್ಧವಾಗಿವೆ ಎಂದು ಇಬ್ರಾಹೀಂ ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್‌ ಹಲವು ವರ್ಷಗಳಿಂದ ಪ್ರಸ್ತಾಪಿಸಿದ ಸಿದ್ದಾಂತಕ್ಕೆ ಬದ್ಧರಾಗಿರುವಂತೆ ದೇವೇಗೌಡ ಅವರಿಗೆ ಸಿಎಂ ಇಬ್ರಾಹೀಂ ಹೇಳಿದ್ದು,  ಈ ವಾರದ ಕೊನೆಯಲ್ಲಿ ಮುಂಬೈಗೆ ತೆರಳಿ ಅಲ್ಲಿನ ಜೆಡಿಎಸ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದು ಹೇಗೆ ಎಂಬುದು ಗೊತ್ತಿದೆ. ನಾನು 1995ರಲ್ಲಿ ಜನತಾದಳವನ್ನು ಹೇಗೆ ಕಟ್ಟಿದ್ದೇನೆ ಎಂಬುದು ಅವರಿಗೆ ತಿಳಿದಿದೆ. ಇದು ಅವರಿಗೆ ಹೊಸದಲ್ಲ, ಅವರಿಗೆ ತಿಳಿದಿದೆ. ಆದರೆ ಏನು ಮಾಡುವುದು ಕುಮಾರಸ್ವಾಮಿ ದೇವೇಗೌಡರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನನಗೆ ಸಹೋದರರಂತೆ, ದಯವಿಟ್ಟು ಬಿಜೆಪಿ ಜೊತೆ ಹೋಗುವುದನ್ನು ಮರುಪರಿಶೀಲಿಸಿ. ಬಾಬಾಸಾಹೇಬ್ ಅಂಬೇಡ್ಕರ್, ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು  ಅವರ ಸಿದ್ಧಾಂತಗಳನ್ನು ಒಪ್ಪಿಕೊಳ್ಳಿ. ನಮಗೆ ಪ್ರಧಾನಿಯವರ ಬಗ್ಗೆ ಗೌರವವಿದೆ. ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ನಮಗೆ ವೈಯಕ್ತಿಕವಾಗಿ ಏನೂ ದ್ವೇಷ ಇಲ್ಲ. ಆದರೆ ಸೈದ್ಧಾಂತಿಕವಾಗಿ ನಾವು ವಿಭಿನ್ನ ಹಾದಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೊದಲು ಸಿಎಂ ಇಬ್ರಾಹೀಂ ಮಾದ್ಯಮಗಳ ಜೊತೆ ಮತನಾಡುತ್ತಾ, ನಾವೇ ಒರಿಜಿನಲ್‌ ಜೆಡಿಎಸ್‌, ನಾನು ಅದರ ಅಧ್ಯಕ್ಷ, ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. INDIA ಒಕ್ಕೂಟಕ್ಕೆ ನಮ್ಮ ಬೆಂಬಲ ಎಂದು ಹೇಳಿದ್ದರು. ಇದರ ಮರು ದಿನವೇ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಕರ್ನಾಟಕ ರಾಜ್ಯ ಜೆಡಿಎಸ್‌ ಘಟಕವನ್ನು ವಿಸರ್ಜಿಸಿದ್ದರು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...