Homeಮುಖಪುಟ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

- Advertisement -
- Advertisement -

ತನ್ನ ಪೋನ್‌ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಸೋರಿಕೆ ಮಾಡಿದ್ದು, ತನಗೆ ಮತ್ತು ಕುಟುಂಬಕ್ಕೆ ಅತ್ಯಾಚಾರ ಹಾಗೂ ಸಾವಿನ ಬೆದರಿಕೆಗಳು ಬರುತ್ತಿದೆ ಎಂದು ಖ್ಯಾತ ನಟ ಸಿದ್ದಾರ್ಥ್ ಅವರು ಗುರುವಾರ ಆರೋಪಿಸಿದ್ದಾರೆ.

ನಟ ಸಿದ್ದಾರ್ಥ್ ಅವರು ಬಿಜೆಪಿ ಸರ್ಕಾರದ ವಿಫಲತೆಯನ್ನು ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸುತ್ತಲೆ ಬರುತ್ತಿದ್ದಾರೆ. ಇದರಿಂದಾಗಿ ಅವರನ್ನು ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಇಂದು ತಮ್ಮ ಟ್ವಿಟರ್‌ನಲ್ಲಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ಟ್ಯಾಗ್ ಮಾಡಿ, “ನನ್ನ ಫೋನ್ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿಯ ಐಟಿ ಸೆಲ್ ಸದಸ್ಯರು ಸೋರಿಕೆ ಮಾಡಿದ್ದಾರೆ. ಕಳೆದ 24 ಗಂಟೆಗಳಿಗಿಂತ ಹೆಚ್ಚು ಕಾಲ ನನಗೆ ಮತ್ತು ಕುಟುಂಬಕ್ಕೆ 500 ಕ್ಕೂ ಹೆಚ್ಚು ನಿಂದನೆ, ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳು ಬಂದಿದೆ. ಎಲ್ಲಾ ಸಂಖ್ಯೆಗಳನ್ನು ದಾಖಲಿಸಲಾಗಿದ್ದು ಅವುಗಳೆಲ್ಲವು ಬಿಜೆಪಿಗೆ ಸಂಬಂಧಿಸಿದ್ದಾಗಿದೆ. ಅವುಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗುವುದು. ನಾನು ಮೌನವಾಗಿ ಇರಲ್ಲ, ಪ್ರಯತ್ನಿಸುತ್ತಲೇ ಇರಿ” ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದಾರೆ.

ಜೊತಗೆ ಫೇಸ್‌ಬುಕ್‌ನಲ್ಲಿ ಅವರ ಸಂಖ್ಯೆಯನ್ನು ಹಾಕಿ, ಅವರ ಮೇಲೆ ದಾಳಿ ಮಾಡುವಂತೆ ಕೇಳಿಕೊಂಡಿರುವ ಮಹಿಳೆಯೊಬ್ಬರ ಬಗ್ಗೆ ಕಮೆಂಟ್‌ನ ಸ್ಕ್ರೀನ್‌ಶಾರ್ಟ್‌ ಅನ್ನು ಕೂಡಾ ಸಿದ್ದಾರ್ಥ್ ಹಾಕಿದ್ದಾರೆ.

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ಅದರಲ್ಲಿ ಗೀತಾ ವಸಂತ್ ಎಂಬ ಮಹಿಳೆಯ ಹೆಸರಿರುವ ಫೇಸ್‌ಬುಕ್ ಖಾತೆಯೊಂದು ಸಿದ್ದಾರ್ಥ್ ಅವರು ನಂಬರನ್ನು ಹಾಕಿ, “ಅವನು ಇನ್ನು ಈ ಸಿಮ್ ನಂಬರ್‌ ಬಳಕೆ ಮಾಡಲೇ ಬಾರದು. ಬೇರೆ ನಂಬರ್‌ ಅವರು ಕೊಂಡರೆ ಅನ್ನು ಕಂಡು ಹಿಡಿಯಲು ನಮಗೆ ಕಷ್ಟವೇನು. ಅವನು ಇನ್ನು ಮುಂದೆ ಬಾಯಿಯೆ ತೆರೆಯ ಕೂಡದು” ಎಂದು ಹೇಳಿದ್ದಾರೆ.

ಈ ಸ್ಕ್ರೀನ್‌ಶಾರ್ಟ್ ಹಾಕಿರುವ ಸಿದ್ದಾರ್ಥ್, “ನಾವು ಕೊರೊನಾದಿಂದಾದರೂ ಬದುಕಿ ಉಳಿಯಬಹುದು ಆದರೆ ಈ ಜನರಿಂದ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...