Homeಮುಖಪುಟ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

- Advertisement -
- Advertisement -

ತನ್ನ ಪೋನ್‌ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಸೋರಿಕೆ ಮಾಡಿದ್ದು, ತನಗೆ ಮತ್ತು ಕುಟುಂಬಕ್ಕೆ ಅತ್ಯಾಚಾರ ಹಾಗೂ ಸಾವಿನ ಬೆದರಿಕೆಗಳು ಬರುತ್ತಿದೆ ಎಂದು ಖ್ಯಾತ ನಟ ಸಿದ್ದಾರ್ಥ್ ಅವರು ಗುರುವಾರ ಆರೋಪಿಸಿದ್ದಾರೆ.

ನಟ ಸಿದ್ದಾರ್ಥ್ ಅವರು ಬಿಜೆಪಿ ಸರ್ಕಾರದ ವಿಫಲತೆಯನ್ನು ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸುತ್ತಲೆ ಬರುತ್ತಿದ್ದಾರೆ. ಇದರಿಂದಾಗಿ ಅವರನ್ನು ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಇಂದು ತಮ್ಮ ಟ್ವಿಟರ್‌ನಲ್ಲಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ಟ್ಯಾಗ್ ಮಾಡಿ, “ನನ್ನ ಫೋನ್ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿಯ ಐಟಿ ಸೆಲ್ ಸದಸ್ಯರು ಸೋರಿಕೆ ಮಾಡಿದ್ದಾರೆ. ಕಳೆದ 24 ಗಂಟೆಗಳಿಗಿಂತ ಹೆಚ್ಚು ಕಾಲ ನನಗೆ ಮತ್ತು ಕುಟುಂಬಕ್ಕೆ 500 ಕ್ಕೂ ಹೆಚ್ಚು ನಿಂದನೆ, ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳು ಬಂದಿದೆ. ಎಲ್ಲಾ ಸಂಖ್ಯೆಗಳನ್ನು ದಾಖಲಿಸಲಾಗಿದ್ದು ಅವುಗಳೆಲ್ಲವು ಬಿಜೆಪಿಗೆ ಸಂಬಂಧಿಸಿದ್ದಾಗಿದೆ. ಅವುಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗುವುದು. ನಾನು ಮೌನವಾಗಿ ಇರಲ್ಲ, ಪ್ರಯತ್ನಿಸುತ್ತಲೇ ಇರಿ” ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದಾರೆ.

ಜೊತಗೆ ಫೇಸ್‌ಬುಕ್‌ನಲ್ಲಿ ಅವರ ಸಂಖ್ಯೆಯನ್ನು ಹಾಕಿ, ಅವರ ಮೇಲೆ ದಾಳಿ ಮಾಡುವಂತೆ ಕೇಳಿಕೊಂಡಿರುವ ಮಹಿಳೆಯೊಬ್ಬರ ಬಗ್ಗೆ ಕಮೆಂಟ್‌ನ ಸ್ಕ್ರೀನ್‌ಶಾರ್ಟ್‌ ಅನ್ನು ಕೂಡಾ ಸಿದ್ದಾರ್ಥ್ ಹಾಕಿದ್ದಾರೆ.

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ಅದರಲ್ಲಿ ಗೀತಾ ವಸಂತ್ ಎಂಬ ಮಹಿಳೆಯ ಹೆಸರಿರುವ ಫೇಸ್‌ಬುಕ್ ಖಾತೆಯೊಂದು ಸಿದ್ದಾರ್ಥ್ ಅವರು ನಂಬರನ್ನು ಹಾಕಿ, “ಅವನು ಇನ್ನು ಈ ಸಿಮ್ ನಂಬರ್‌ ಬಳಕೆ ಮಾಡಲೇ ಬಾರದು. ಬೇರೆ ನಂಬರ್‌ ಅವರು ಕೊಂಡರೆ ಅನ್ನು ಕಂಡು ಹಿಡಿಯಲು ನಮಗೆ ಕಷ್ಟವೇನು. ಅವನು ಇನ್ನು ಮುಂದೆ ಬಾಯಿಯೆ ತೆರೆಯ ಕೂಡದು” ಎಂದು ಹೇಳಿದ್ದಾರೆ.

ಈ ಸ್ಕ್ರೀನ್‌ಶಾರ್ಟ್ ಹಾಕಿರುವ ಸಿದ್ದಾರ್ಥ್, “ನಾವು ಕೊರೊನಾದಿಂದಾದರೂ ಬದುಕಿ ಉಳಿಯಬಹುದು ಆದರೆ ಈ ಜನರಿಂದ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...