Homeಮುಖಪುಟ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

- Advertisement -
- Advertisement -

ತನ್ನ ಪೋನ್‌ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಸೋರಿಕೆ ಮಾಡಿದ್ದು, ತನಗೆ ಮತ್ತು ಕುಟುಂಬಕ್ಕೆ ಅತ್ಯಾಚಾರ ಹಾಗೂ ಸಾವಿನ ಬೆದರಿಕೆಗಳು ಬರುತ್ತಿದೆ ಎಂದು ಖ್ಯಾತ ನಟ ಸಿದ್ದಾರ್ಥ್ ಅವರು ಗುರುವಾರ ಆರೋಪಿಸಿದ್ದಾರೆ.

ನಟ ಸಿದ್ದಾರ್ಥ್ ಅವರು ಬಿಜೆಪಿ ಸರ್ಕಾರದ ವಿಫಲತೆಯನ್ನು ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸುತ್ತಲೆ ಬರುತ್ತಿದ್ದಾರೆ. ಇದರಿಂದಾಗಿ ಅವರನ್ನು ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಇಂದು ತಮ್ಮ ಟ್ವಿಟರ್‌ನಲ್ಲಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ಟ್ಯಾಗ್ ಮಾಡಿ, “ನನ್ನ ಫೋನ್ ಸಂಖ್ಯೆಯನ್ನು ತಮಿಳುನಾಡು ಬಿಜೆಪಿ ಮತ್ತು ಬಿಜೆಪಿಯ ಐಟಿ ಸೆಲ್ ಸದಸ್ಯರು ಸೋರಿಕೆ ಮಾಡಿದ್ದಾರೆ. ಕಳೆದ 24 ಗಂಟೆಗಳಿಗಿಂತ ಹೆಚ್ಚು ಕಾಲ ನನಗೆ ಮತ್ತು ಕುಟುಂಬಕ್ಕೆ 500 ಕ್ಕೂ ಹೆಚ್ಚು ನಿಂದನೆ, ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳು ಬಂದಿದೆ. ಎಲ್ಲಾ ಸಂಖ್ಯೆಗಳನ್ನು ದಾಖಲಿಸಲಾಗಿದ್ದು ಅವುಗಳೆಲ್ಲವು ಬಿಜೆಪಿಗೆ ಸಂಬಂಧಿಸಿದ್ದಾಗಿದೆ. ಅವುಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗುವುದು. ನಾನು ಮೌನವಾಗಿ ಇರಲ್ಲ, ಪ್ರಯತ್ನಿಸುತ್ತಲೇ ಇರಿ” ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದಾರೆ.

ಜೊತಗೆ ಫೇಸ್‌ಬುಕ್‌ನಲ್ಲಿ ಅವರ ಸಂಖ್ಯೆಯನ್ನು ಹಾಕಿ, ಅವರ ಮೇಲೆ ದಾಳಿ ಮಾಡುವಂತೆ ಕೇಳಿಕೊಂಡಿರುವ ಮಹಿಳೆಯೊಬ್ಬರ ಬಗ್ಗೆ ಕಮೆಂಟ್‌ನ ಸ್ಕ್ರೀನ್‌ಶಾರ್ಟ್‌ ಅನ್ನು ಕೂಡಾ ಸಿದ್ದಾರ್ಥ್ ಹಾಕಿದ್ದಾರೆ.

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ಅದರಲ್ಲಿ ಗೀತಾ ವಸಂತ್ ಎಂಬ ಮಹಿಳೆಯ ಹೆಸರಿರುವ ಫೇಸ್‌ಬುಕ್ ಖಾತೆಯೊಂದು ಸಿದ್ದಾರ್ಥ್ ಅವರು ನಂಬರನ್ನು ಹಾಕಿ, “ಅವನು ಇನ್ನು ಈ ಸಿಮ್ ನಂಬರ್‌ ಬಳಕೆ ಮಾಡಲೇ ಬಾರದು. ಬೇರೆ ನಂಬರ್‌ ಅವರು ಕೊಂಡರೆ ಅನ್ನು ಕಂಡು ಹಿಡಿಯಲು ನಮಗೆ ಕಷ್ಟವೇನು. ಅವನು ಇನ್ನು ಮುಂದೆ ಬಾಯಿಯೆ ತೆರೆಯ ಕೂಡದು” ಎಂದು ಹೇಳಿದ್ದಾರೆ.

ಈ ಸ್ಕ್ರೀನ್‌ಶಾರ್ಟ್ ಹಾಕಿರುವ ಸಿದ್ದಾರ್ಥ್, “ನಾವು ಕೊರೊನಾದಿಂದಾದರೂ ಬದುಕಿ ಉಳಿಯಬಹುದು ಆದರೆ ಈ ಜನರಿಂದ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...