Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...