Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...